Advertisement
Opinion

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

Share

ಅಕ್ಷಯ ತೃತೀಯ(Akshaya Trutiya)… ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ ಮತ್ತು ಸೂರ್ಯ ಇಬ್ಬರೂ ತಮ್ಮ ತಮ್ಮ ಉಚ್ಚ ರಾಶಿಯಲ್ಲಿ ಇರುವ ದಿನದಂದು ಆಚರಿಸುತ್ತಾರೆ. ಸೂರ್ಯನು ತನ್ನ ಉನ್ನತ ಸ್ತಾನವಾದ ಮೇಶರಾಶಿಯಲ್ಲಿ – ಅಂದರೆ ಸೌರಮಾನ ಲೆಕ್ಕದ ಮೇಷ ಮಾಸದಲ್ಲಿ – ಪೂರ್ತಿ 30 ದಿನಗಳು ಇರುತ್ತಾನೆ. ಸೂರ್ಯ ತಿಂಗಳಿಗೊಮ್ಮೆ ರಾಶಿ ಬದಲಾಯಿಸಿದರೆ, ಚಂದ್ರ ದಿನಕ್ಕೊಮ್ಮೆನಕ್ಷತ್ರಬದಲಾಯಿಸುತ್ತಾನೆ, {ಅಂದಾಜುಎರಡೂವರೆ ದಿನಕ್ಕೊಂದು ರಾಶಿ}ಹಾಗಾಗಿ ಈ ಮೇಷ ಮಾಸದ ಯಾವ ದಿನದಂದು ಚಂದ್ರ ತನ್ನ ಉಚ್ಚ ಸ್ತಾನದಲ್ಲಿ ಇರುತ್ತಾನೋ ಅಂದೇ ಈ ಅಕ್ಷಯ ತೃತೀಯ. ಚಾಂದ್ರಮಾನ ಲೆಕ್ಕದ ಮೂಲಕ ನೋಡಿದರೆ ಈ ದಿನ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ದಿನ ಆಗಿರುತ್ತದೆ.

ಅಕ್ಷಯ ತೃತೀಯ ಅಂದರೆ ನಮ್ಮ ಮನಸ್ಸಿಗೆ ಬರುವುದು ಚಿನ್ನದ ಅಂಗಡಿಗಳಲ್ಲಿ ಕಂಡುಬರುವ ಆಭರಣಗಳ ಜಾಹೀರಾತುಗಳು. ಚಿನ್ನದ ಮೇಲಿನ ಕಡಿತಗಳು ಚಿನ್ನ ಬೆಳ್ಳಿಯನ್ನು ಕೊಂಡುಕೊಂಡರೆ, ವರ್ಷ ಪೂರ್ತಿ ನೀವು ಚಿನ್ನವನ್ನು ತೆಗೆದು ಕೊಳ್ಳುತ್ತೀರಿ! ಎನ್ನುವಂತಹ ಅವರ ಭಾಷಣಗಳು. ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠದಲ್ಲಿ ಸಾಲವನ್ನಾದರೂ ಮಾಡಿ ತೆಗೆದುಕೊಳ್ಳುವ ಎಷ್ಟೋ, ಮಂದಿಗೆ ನಿಜವಾದ ಅಕ್ಷಯ ತೃತೀಯದ ಬಗ್ಗೆ ಗೊತ್ತೇ ಇರುವುದಿಲ್ಲ. ಶ್ರೀಮಂತರ ಆದಿಯಾಗಿ ಕೂಲಿ ಮಾಡುವವರಿಗೂ ಕೂಡ ಅಂದು ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠ ಎಲ್ಲರ ಮನಸ್ಸಿಗೂ ಚಾಪು ಒತ್ತಿದಂತೆ ಮಾಡಿರುವುದು ಚಿನ್ನದ ಅಂಗಡಿಯವರು. ನಿಜವಾದ ಅಕ್ಷಯ ತೃತೀಯ ಬಗ್ಗೆ ತಿಳಿದುಕೊಳ್ಳೋಣ..

ಅಕ್ಷಯ ತೃತಿಯದ ಆಚರಣೆಗಳ ಬಗ್ಗೆ ಎಲ್ಲಿ ಉಲ್ಲೇಖವಿದೆ : ಭವಿಷ್ಯತ್ ಪುರಾಣದಲ್ಲಿ ಶ್ರೀಕೃಷ್ಣಪರಮಾತ್ಮನೇ ಅಕ್ಷಯತೃತೀಯದ ಅಸಾಧಾರಣ ಮಹಿಮೆಯನ್ನು ವರ್ಣಿಸಿರುವುದಾಗಿ ಉಲ್ಲೇಖವಿದೆ.
ಶ್ಲೋಕ : ಬಹುನಾತ್ರ ಕಿಮುಕ್ತೇನ ಕಿಂ ಬಹ್ವಕ್ಷರಮಾಲಯಾ |
ವೈಶಾಖಸ್ಯ ಸಿತಾಮೇಕಾಂ ತೃತೀಯಾಮಕ್ಷಯಾಂ ಶೃಣು

ಗಂಗಾಸ್ನಾನಕ್ಕೆ ಮತ್ತು ಶ್ರೀಕೃಷ್ಣನನ್ನು ಧೂಪ, ದೀಪ, ಪುಷ್ಪ ಮತ್ತು ವಿಶೇಷವಾಗಿ ಚಂದನ ಲೇಪದಿಂದ ಅರ್ಚನೆ ಮಾಡುವುದಕ್ಕೆ ಈ ದಿನವನ್ನು ಅತಿ ಪ್ರಶಸ್ತವನ್ನಾಗಿ ಹೇಳಿದೆ.

ಅಕ್ಷಯ ತೃತಿಯದ ಅರ್ಥ ಏನು : 
ಶ್ಲೋಕ | ಸ್ನಾತ್ವಾ ಹುತ್ವಾ ಚ ಜಪ್ತ್ವಾ ಚ ದತ್ತ್ವಾನಂತಫಲಂ ಲಭೇತ್ ||
ಈ ಹಬ್ಬದಲ್ಲಿ ಆಚರಿಸುವ ಸ್ನಾನ, ಜಪ, ತಪಸ್ಸು , ಅಧ್ಯಯನ, ತರ್ಪಣ, ದಾನಾದಿಗಳೆಲ್ಲವೂ ಅಕ್ಷಯವಾದ ಫಲವನ್ನು ನೀಡುವುದರಿಂದ ಇದನ್ನು ಅಕ್ಷಯ ತೃತೀಯ ಎಂದು ಕರೆಯಲಾಗಿದೆ ಎಂದು ವ್ರತರಾಜದಲ್ಲಿ ಉಲ್ಲೇಖಿಸಿದೆ. ಅಕ್ಷಯವಾದ ಮೋಕ್ಷಕ್ಕೆ ಕಾರಣವಾಗಿರುವುದರಿಂದಲೂ ಇದಕ್ಕೆ ಈ ಹೆಸರು ಹೊಂದಾಣಿಕೆಯಾಗುತ್ತದೆ.

Advertisement

ಅಕ್ಷಯ ತೃತಿಯದ ಪಂಚಾಗದ ಪ್ರಕಾರ ಯಾವಾಗ ಬರುತ್ತದೆ:
ಶ್ಲೋಕ | ಪೂರ್ವಾಹ್ಣೇ ತು ಸದಾ ಕಾರ್ಯಾಃ ಶುಕ್ಲೇ ಮನುಯುಗಾದಯಃ |
ದೈವ್ಯೇ ಕರ್ಮಣಿ ಪಿತ್ಯ್ರೇ ಚ ಕೃಷ್ಣೇ ಚೈವಾಪರಾಹ್ಣಿಕಾಃ ||
ವೈಶಾಖಸ್ಯ ತೃತೀಯಾಂ ಚ ಪೂರ್ವವಿದ್ಧಾಂ ಕರೋತಿ ವೈ |
ಹವ್ಯಂ ದೇವಾ ನ ಗೃಹ್ಣನ್ತಿ ಕವ್ಯಂ ಚ ಪಿತರಸ್ತಥಾ ||
ವೈಶಾಖ ಮಾಸ ಶುಕ್ಲಪಕ್ಷ ತೃತೀಯ ದಿನ ರೋಹಿಣಿ ನಕ್ಷತ್ರವು ಇದ್ದರೆ ಅಂದು ಮೂರುವರೆಗಳಿಗೆ ಮುಹೂರ್ತದಲ್ಲಿ ಬರುವ ತಿಥಿ ಅಕ್ಷಯ ತೃತೀಯ. ಗೃಹ ಪ್ರವೇಶ, ಮದುವೆ, ಹೊಸ ಉದ್ಯಮಗಳು, ಹೂಡಿಕೆಗಳನ್ನು ಪ್ರಾರಂಭಿಸಲು ಅಕ್ಷಯ ತೃತೀಯ ಅತ್ಯುತ್ತಮ ದಿನ.

ಅಕ್ಷಯತೃತೀಯಾ ದಿನ ಪಿತೃ ತರ್ಪಣ ಕೊಡಬಹುದೇ:
ದೇವತೆಗಳ ಪೂಜೆಗೆ ಮಾತ್ರವಲ್ಲದೆ ಪಿತೃಗಳ ಪೂಜೆಗೂ ಪ್ರಶಸ್ತವೆನಿಸಿರುವ ತಿಥಿ ಅಕ್ಷಯ ತೃತೀಯಾ. ಪಿತೃಗಳನ್ನು ಕುರಿತು ತರ್ಪಣ ಮಾಡಿ ಪಿಂಡಪ್ರದಾನವನ್ನು ಮಾಡಬಹುದು ಎಂದು ಧರ್ಮಸಿಂಧುವಿನಲ್ಲಿ ಉಲ್ಲೇಖಿಸಿದೆ.
ಅಕ್ಷಯ ತೃತಿಯದ ಬಗ್ಗೆ ಮಹಾಭಾರತದಲ್ಲಿ ಉಲ್ಲೇಖ ಇದೆಯಾ ; ಹಾಗಾದರೆ ಯಾವ ಸಂದರ್ಭದಲ್ಲಿ
ಕೊಟ್ಟು ಅದರಿಂದ ಅವನು ಊಟ ಕೇಳಿದಾಗ, ಮುಗಿದು ಹೋಗಿದೆ ಎಂದು ಹೇಳಲು ಸಂಕೋಚ ಪಡುತ್ತಿದ್ದ ಅಂತಹ ದ್ರೌಪದಿಗೆ ಪಾತ್ರೆಯ ಕೊನೆಯ ಭಾಗದಲ್ಲಿ ಇರುವಂತಹ ಒಂದೇ ಒಂದು ಅಗುಳು ಅನ್ನವನ್ನೇ ಅಕ್ಷಯವನ್ನಾಗಿ ಮಾಡಿದಂತಹ ಘಟನೆ ನಿಮಗೆ ಗೊತ್ತಿರಬಹುದು. ಅಕ್ಷಯ ತೃತೀಯವನ್ನು ಹಿಂದೂಗಳು ಮತ್ತು ಜೈನರು ಅತ್ಯಂತ ಪವಿತ್ರ ದಿನವನ್ನಾಗಿ ಆಚರಿಸುತ್ತಾರೆ

ಪುರಾಣಗಳಲ್ಲಿ ಅಕ್ಷಯ ತೃತಿಯದ ದಿನದ ಮಹತ್ವ :
•⁠ ⁠ವಿಷ್ಣುವಿನ ಅವತಾರವಾದ ಪರಶು ರಾಮ ಅವತಾರ ಅಕ್ಷಯ ತೃತೀಯದ ದಿನವೇ ಆಗಿತ್ತು.
•⁠ ⁠ಶ್ರೀ ಕೃಷ್ಣ ಪರಮಾತ್ಮನ ಸ್ನೇಹಿತನಾದ ಕುಚೇಲನು ತನ್ನಲ್ಲಿರುವ ಸ್ವಲ್ಪವೇ ಅವಲಕ್ಕಿಯನ್ನು ತನ್ನ ಪ್ರೀತಿ ಪಾತ್ರ ಸ್ನೇಹಿತನಿಗಾಗಿ ತೆಗೆದುಕೊಂಡು ಹೋಗಿ ಸಮರ್ಪಿಸಿದ ದಿನ ಅಂದು ಶ್ರೀಕೃಷ್ಣ ಪರಮಾತ್ಮ ಕುಚೇಲನಿಗೆ, ನೀಡಿದ ಅಕ್ಷಯವಾದಂತಹ ಐಶ್ವರ್ಯ ಪ್ರಾಪ್ತಿಗಳು..
•⁠ ⁠ದ್ವಾಪರಯುಗದ ಸಂದರ್ಭದಲ್ಲಿ ನಮ್ಮ ಮಹಾಭಾರತ ಪುರಾಣವನ್ನು ವ್ಯಾಸರು ರಚಿಸಿದ ಸುಮುಹೂರ್ತವೇ ಅಕ್ಷಯ ತೃತೀಯ.
•⁠ ⁠ಭಗೀರಥನ ಪ್ರಯತ್ನದಿಂದ ಈಶ್ವರನ ಜಟೆಯಲ್ಲಿ ಇದ್ದಂತಹ ಗಂಗೆಯು ಭೂಮಿಗೆ ಅವತರಿಸಿದ ದಿನವೂ ಅಕ್ಷಯ ತೃತಿಯ
ಈ ದಿನವು ತ್ರೇತ ಯುಗದ ಆರಂಭವನ್ನು ಸೂಚಿಸುತ್ತದೆ.
•⁠ ⁠ಪಾಂಡವರು ಈ ಸೂರ್ಯ ದೇವರಿಂದ ಅಕ್ಷಯ ಪಾತ್ರೆವನ್ನು ಪಡೆದದ್ದು,
•⁠ ⁠ಆದಿ ಶಂಕರಾಚಾರ್ಯರು ಕನಕಧಾರ ಸ್ತೋತ್ರವನ್ನು ಸಂಯೋಜಿಸಲಾರಂಭಿಸಿದ್ದು.
•⁠ ⁠ಮಹಾಲಕ್ಷ್ಮಿಯನ್ನು ಆರಾಧಿಸಿ ಕುಬೇರನು ಅಷ್ಟೈಶ್ವರ್ಯವ ಪ್ರಾಪ್ತಿ ಪಡೆದದ್ದು.

ಅಕ್ಷಯ ತೃತಿಯದ ಹೇಗೆ ಆಚರಿಸಬೇಕು ಹಾಗೂ ಅದರ ಫಲಗಳೇನು>
ಸಾಲವನ್ನು ಮಾಡಿಯಾದರೂ ಚಿನ್ನವನ್ನು ತೆಗೆದುಕೊಳ್ಳಬೇಕೆಂಬ ಮನಸ್ಥಿತಿಯನ್ನು ನಾವುಗಳು ಮೊದಲು ಬಿಟ್ಟು ಅಂದು ಏನೆಲ್ಲಾ ಒಳ್ಳೆಯ ಕೆಲಸವನ್ನು ಮಾಡಬೇಕು ಎಂಬುದು ತಿಳಿದುಕೊಳ್ಳಬೇಕಾಗಿದೆ. ಶುಚಿರ್ಭೂತರಾಗಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಬಹುದು ನಾವು ಕೊಟ್ಟಷ್ಟು ನಮಗೆ ತಿರುಗಿ ಬರುತ್ತದೆ ಎಂಬುದಕ್ಕೆ ಉದಾಹರಣೆ ಅಕ್ಷಯ ತೃತೀಯ ಅಂದು ದಾನ ಧರ್ಮಗಳನ್ನು ಪುಣ್ಯ ಕಾರ್ಯಗಳನ್ನು ದೇವರ ದರ್ಶನವನ್ನು ಮಾಡಿದಷ್ಟು ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ.
•⁠ ⁠ಮಣ್ಣಿನ ಮಡಕೆಯಲ್ಲಿ ಉದಕ ದಾನ, ಮಾಡಿದರೆ ಮೃತ್ಯು ಭಯದಿಂದ ದೂರ ಆಗಬಹುದು.
•⁠ ⁠ಬಡವರಿಗೆ, ವಸ್ತ್ರ ದಾನ ಮಾಡಿದರೆ ರೋಗ ರುಜಿನಗಳು ದೂರವಾಗುತ್ತದೆ.

⁠ ⁠ಹಣ್ಣು ಹಂಪಲುಗಳನ್ನು ದಾನ ಮಾಡಿದರೆ, ನಮ್ಮ ಕಾರ್ಯಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರುತ್ತೇವೆ ಎನ್ನುವ ನಂಬಿಕೆ.
•⁠ ⁠ಅಕ್ಕಿ, ಬೇಳೆ, ಗೋದಿ, ಬೆಲ್ಲ ದಾನ ಮಾಡಿದರೆ ಅಕಾಲ ಮೃತ್ಯುವಿನ ಭಯದಿಂದ ಪಾರಾಗಬಹುದು.
•⁠ ⁠ಮಜ್ಜಿಗೆ ಮೊಸರು ದಾನ ಮಾಡಿದರೆ ಮಾಡಿದ ಪಾಪಕರ್ಮಗಳಿಂದ ಮುಕ್ತಿ ಹೊಂದಬಹುದು ಎಂಬ ನಂಬಿಕೆ.
•⁠ ⁠ಬೆಳಿಗ್ಗೆ ಗೋ ಮಾತೆಗೆ ಪೂಜೆ ಪುನಸ್ಕಾರಗಳನ್ನು ಮಾಡಿ ಗೋಧಿ ಬೆಲ್ಲ ಬಾಳೆಹಣ್ಣು ತಿನ್ನಿಸುವುದರಿಂದ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಪಾತ್ರವಾಗುತ್ತದೆ..

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

9 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

19 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago