ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ

March 20, 2024
4:04 PM

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ ಮಾ. 22  25 ವರೆಗೆ ವಿಜಯಪುರದ ಹತ್ತಿರ ಇರುವ ಕಗ್ಗೋಡದ ಶ್ರೀ ರಾಮನಗೌಡ ಬಾ ಪಾಟೀಲ ಗೋರಕ್ಷಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ  ಹಲವು ವಿಷಯಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಡಲಾಗುವುದು.

  • ದೇಶಿ ಗೋ ವಂಶ ಹಾಗೂ ಗೋವಿಜ್ಞಾನದ ವಿಸ್ತೃತ ಮಾಹಿತಿ ಅಲ್ಲದೆ ಪಂಚ ಗವ್ಯಗಳಾದ ಹಾಲು, ಮೊಸರು ತುಪ್ಪ, ಗೋಮೂತ್ರ ಹಾಗೂ ಸಗಣಿಯಿಂದ ಅನೇಕ ಪ್ರಕಾರದ ನಿತ್ಯ ಉಪಯೋಗಿ ವಸ್ತುಗಳು ಹಾಗೂ ಕೆಲವು ಔಷಧಿಗಳ ನಿರ್ಮಾಣದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷತೆ ನೀಡಲಾಗುವುದು. ಶಿಬಿರ ಸ್ಥಳದಲ್ಲಿ 7 ನೂರಕ್ಕೂ ಹೆಚ್ಚು ದೇಶಿ ಗೋ ವಂಶದ ಸುಸಜ್ಜಿತ ಗೋಶಾಲೆ ಇದ್ದು ಅದರಲ್ಲಿ 18ಕ್ಕೂ ಹೆಚ್ಚು ವಿವಿಧ ಪ್ರಕಾರದ ಪಂಚ ಗವ್ಯ ವಸ್ತುಗಳ ಉತ್ಪಾದನೆ ನಿರಂತರ ನಡೆಯುತ್ತಿದೆ. ಅದರ ಪ್ರತ್ಯಕ್ಷ ದರ್ಶನ ಹಾಗೂ ಅನುಭವವನ್ನು ಶಿಬಿರಾರ್ಥಿಗಳು ಪಡೆಯಬಹುದು. ಪ್ರಾಯಃ ಭಾರತದ ಅತಿ ದೊಡ್ಡ ಶುದ್ಧ ಗೋಮಯದಿಂದ ತಯಾರಿಸುವ ವಿಭೂತಿ ಘಟಕ ಇದಾಗಿದೆ , ಪ್ರತಿನಿತ್ಯ ಸುಮಾರು ಏಳು ನೂರಕ್ಕೂ ಹೆಚ್ಚು ವಿಭೂತಿಗಳ ತಯಾರಿಕಾ ಘಟಕದ ಅನುಭವ ದೊರೆಯುತ್ತದೆ.
  • ಕೊಲ್ಹಾಪುರದ ಹತ್ತಿರ ಇರುವ ಕನ್ನೆರಿಯ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಸಾವಯವ ಕೃಷಿ ಅನುಭವ ಪಡೆದಿರುವ  ತುಕಾರಾಮ ಪವಾರ ಇವರಿಂದ ವಿಷಮುಕ್ತ ಕೃಷಿಯ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು. ಅಲ್ಲದೆ ಸುಮಾರು 80 ಎಕರೆಗೂ ಹೆಚ್ಚು ಪ್ರವೇಶದಲ್ಲಿ ಹರಡಿಕೊಂಡಿರುವ ವಿವಿಧ ಪ್ರಕಾರದ ವಿಷಮುಕ್ತ ಸಾವಯವ ಕೃಷಿಯ ಪ್ರಕಾರಗಳನ್ನು ನೋಡಿ ವಿಸ್ತ್ರತ ಮಾಹಿತಿ ಪಡೆಯುವ ಅವಕಾಶ ದೊರೆಯುವುದು.
  •  ನಿರುದ್ಯೋಗ ಸಮಸ್ಯೆ ಒಂದೆಡೆಯಾದರೆ ಅತ್ಯಂತ ಒತ್ತಡ ಹಾಗೂ ಮಾನಸಿಕ ನೆಮ್ಮದಿ ಇಲ್ಲದೆ ಉದ್ಯೋಗ ಮಾಡುತ್ತಿರುವ ಯುವ ಪಡೆ ಇನ್ನೊಂದೆಡೆ. ಈ ರೀತಿಯ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ನಮ್ಮ ಸ್ವಂತ ಗ್ರಾಮಗಳಲ್ಲಿಯೇ ಗೃಹ ಉದ್ಯೋಗ, ಕುಟೀರ ಉದ್ಯೋಗ ಹಾಗೂ ಗ್ರಾಮೋದ್ಯೋಗಗಳ ಮೂಲಕ ಸ್ವಾವಲಂಬಿ, ಸಮೃದ್ಧ, ಸಮಾಧಾನಕರ ಬದುಕು ಕಟ್ಟಿಕೊಂಡು ಪ್ರಕೃತಿಯೊಂದಿಗೆ ಸುಮಧುರವಾಗಿ ಬದುಕುವ ಕಲೆಯ ವಿವಿಧ ಪ್ರಕಾರಗಳನ್ನು ವಿಸ್ತೃತವಾಗಿ ಈ ಶಿಬಿರದಲ್ಲಿ ಮಂಡಿಸಲಾಗುವುದು.
  •  ಪ್ರಾಕೃತಿಕ ಸಂಪನ್ಮೂಲಗಳಾದ ಗಾಳಿ, ನೀರು, ಭೂಮಿ, ಕಾಡು, ಗಿಡ-ಮರ ಪಶು-ಪಕ್ಷಿ ಇವುಗಳೆಲ್ಲದರ ದುರ್ಬಳಕೆ ಅಥವಾ ಅತಿಯಾದ ಬಳಕೆಯ ಜೀವನ ಶೈಲಿಗೆ ನಲುಗಿ ಹೋಗುತ್ತಿರುವ ಇಂದಿನ ಜೀವನ ಪದ್ಧತಿಗೆ ಬದಲಾಗಿ ಪ್ರಾಕೃತಿಕ ಸಂಪನ್ಮೂಲಗಳ ಸಂವರ್ಧನೆ ಮಾಡುತ್ತ ಪ್ರತ್ಯೇಕ ವ್ಯಕ್ತಿ ತನ್ನ ಜೀವನೋಪಾಯವನ್ನು ಹೇಗೆ ನಿರ್ಮಾಣ ಮಾಡಿಕೊಳ್ಳಬಹುದು ಎಂಬುದರ ಕುರಿತು ವಿಶೇಷ ಯೋಜನೆಯ ಬಗ್ಗೆ ಚರ್ಚೆ ಮಾಡಲಾಗುವುದು.
  •  ಗ್ಲೋಬಲ್ ವಿಲೇಜ್ ಎನ್ನುವ ಚಿಂತನೆಯ ಮೂಲಕ ಕೆಲವೇ ಕೆಲವು ಬಹು ರಾಷ್ಟ್ರೀಯ ಕಂಪನಿಗಳ ಹುನ್ನಾರದಿಂದ ಸಂಪೂರ್ಣ ವಿಶ್ವ ನಲಗುತ್ತಿರುವ ಇಂದಿನ ದಿನಮಾನದಲ್ಲಿ ಸ್ವದೇಶಿ ಚಿಂತನೆಯ ಜೀವನ ಶೈಲಿ ಹಾಗೂ ಸ್ವದೇಶಿ ಪರಿಕಲ್ಪನೆಯ ನಿರ್ದಿಷ್ಟ ಕಾರ್ಯ ಯೋಜನೆ ಹೇಗಿರಬೇಕು ಎಂಬುದರ ಕುರಿತು ವಿಶೇಷ ಚರ್ಚೆ ಹಾಗೂ ಅನುಭೂತ ಪ್ರಯೋಗಗಳ ಬಗ್ಗೆ ಮಾಹಿತಿ ನೀಡಲಾಗುವುದು.
  • ಈ ಶಿಬಿರ ವೈಯಕ್ತಿಕ ಸಾಂಸ್ಥಿಕ ಹಾಗೂ ಗ್ರಾಮ ಮಟ್ಟದಲ್ಲಿ ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ರೂಪವಾಗಿ ನಾವು ಮಾಡಬೇಕಿರುವ ನಿರ್ದಿಷ್ಟ ಕಾರ್ಯ ಯೋಜನೆಯ ಬಗ್ಗೆ ಇರುವುದೇ ವಿನಹ ಇರುವ ಸಮಸ್ಯೆಗಳ ವೈಭವಿಕರಣ ಇಲ್ಲ.
  • ಕನ್ನಡ ಹಾಗೂ ಹಿಂದಿ ಎರಡು ಭಾಷೆಗಳಲ್ಲಿ ಇರುತ್ತದೆ.
  • ಶಿಬಿರದಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಇದೆ.
  • ನಾಲ್ಕು ದಿನಗಳ ಈ ಶಿಬಿರದಲ್ಲಿ ಊಟ ವಸತಿ ಹಾಗೂ ಪ್ರಶಿಕ್ಷಣ ಸಹಿತ ಪ್ರತಿ ವ್ಯಕ್ತಿಗೆ ಸಹಯೋಗರಾಶಿ 2000₹ ಇರುತ್ತದೆ. ಸಂಪರ್ಕ 9342357663 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸುಧೀಂದ್ರ ದೇಶಪಾಂಡೆ ಕಲಬುರ್ಗಿ 9342357663. ತುಕಾರಾಂ ಪವಾರ್ ಕಗ್ಗೂಡ 8660629659.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror