Advertisement
ಪ್ರಮುಖ

#HerdofElephants | ಶ್ರೀರಂಗಪಟ್ಟಣದ ಗ್ರಾಮಗಳ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು | ಗ್ರಾಮಸ್ಥರಲ್ಲಿ ಆತಂಕ |

Share

ಮಾನವ ಮತ್ತು ಆನೆಗಳ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಬಹಳ ಜಾಸ್ತಿಯಾಗುತ್ತಿದೆ. ಕಾಡುಗಳನ್ನು ಮಾನವ ಆವರಿಸಿಕೊಳ್ಳುತ್ತಿದ್ದಂತೆ ಕಾಡು ಪ್ರಾಣಿಗಳು ನಾಡಿನತ್ತ ಹೆಜ್ಜೆ ಇಡುತ್ತಿವೆ. ಕಳೆದ 15 ದಿನಗಳಿಂದ ಕಾಡಿನಿಂದ ಹೊರಬಂದಿರುವ 10 ಆನೆಗಳ ಹಿಂಡು ಕನಕಪುರ, ಸಾತನೂರಿನ ಮೂಲಕ ಶ್ರೀರಂಗಪಟ್ಟಣಕ್ಕೆ ಬಂದಿದ್ದು, ಸದ್ಯ ಶ್ರೀರಂಗಪಟ್ಟಣ ಹಂಪಾಪುರ ಗ್ರಾಮದ ಜಮೀನಿನಲ್ಲಿ ಬೀಡುಬಿಟ್ಟಿದೆ.

ದಿನದಿಂದ ದಿನಕ್ಕೆ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜಮೀನಿನಲ್ಲಿ ಬೀಡುಬಿಟ್ಟ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರಾತ್ರಿ ವೇಳೆ ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.

ಅದೇ ರೀತಿ ಭಾನುವಾರ ಬೆಳ್ಳಂಬೆಳಗ್ಗೆ ಮತ್ತೊಂದು ಗಜಪಡೆ ಮದ್ದೂರು ಪಟ್ಟಣಕ್ಕೆ ಕಾಲಿಟ್ಟಿವೆ. ರಾಮನಗರ ಜಿಲ್ಲೆಯ ತೆಂಗನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ನಾಲ್ಕು ಆನೆಗಳು ಮದ್ದೂರು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿರುವ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ. ದೇವಸ್ಥಾನದ ಅರ್ಚಕರು ಹಾಗೂ ಭಕ್ತರ ಮೊಬೈಲ್‌ಗಳಲ್ಲಿ ಗಜಪಡೆಯ ದೃಶ್ಯ ಸೆರೆಯಾಗಿದ್ದು, ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಆನೆಗಳ ಹಿಂಡನ್ನು ಕಂಡು ಗಾಬರಿಗೊಂಡಿದ್ದಾರೆ. ಆನೆಗಳನ್ನು ಕಂಡ ತಕ್ಷಣವೇ ದೇವಸ್ಥಾನದ ಆಡಳಿತ ಮಂಡಳಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ವಲಯ ಅರಣ್ಯಾಧಿಕಾರಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಇನ್ನು ಈ ಗಜಪಡೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಮದ್ದೂರು ಪಟ್ಟಣದ ಕಡೆ ತೆರಳದಂತೆ ಸಿಬ್ಬಂದಿ ಕಾವಲಿರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

19 minutes ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

40 minutes ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

10 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

11 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

17 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

17 hours ago