ಮಾನವ ಮತ್ತು ಆನೆಗಳ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಬಹಳ ಜಾಸ್ತಿಯಾಗುತ್ತಿದೆ. ಕಾಡುಗಳನ್ನು ಮಾನವ ಆವರಿಸಿಕೊಳ್ಳುತ್ತಿದ್ದಂತೆ ಕಾಡು ಪ್ರಾಣಿಗಳು ನಾಡಿನತ್ತ ಹೆಜ್ಜೆ ಇಡುತ್ತಿವೆ. ಕಳೆದ 15 ದಿನಗಳಿಂದ ಕಾಡಿನಿಂದ ಹೊರಬಂದಿರುವ 10 ಆನೆಗಳ ಹಿಂಡು ಕನಕಪುರ, ಸಾತನೂರಿನ ಮೂಲಕ ಶ್ರೀರಂಗಪಟ್ಟಣಕ್ಕೆ ಬಂದಿದ್ದು, ಸದ್ಯ ಶ್ರೀರಂಗಪಟ್ಟಣ ಹಂಪಾಪುರ ಗ್ರಾಮದ ಜಮೀನಿನಲ್ಲಿ ಬೀಡುಬಿಟ್ಟಿದೆ.
ದಿನದಿಂದ ದಿನಕ್ಕೆ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜಮೀನಿನಲ್ಲಿ ಬೀಡುಬಿಟ್ಟ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರಾತ್ರಿ ವೇಳೆ ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.
ಅದೇ ರೀತಿ ಭಾನುವಾರ ಬೆಳ್ಳಂಬೆಳಗ್ಗೆ ಮತ್ತೊಂದು ಗಜಪಡೆ ಮದ್ದೂರು ಪಟ್ಟಣಕ್ಕೆ ಕಾಲಿಟ್ಟಿವೆ. ರಾಮನಗರ ಜಿಲ್ಲೆಯ ತೆಂಗನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ನಾಲ್ಕು ಆನೆಗಳು ಮದ್ದೂರು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿರುವ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ. ದೇವಸ್ಥಾನದ ಅರ್ಚಕರು ಹಾಗೂ ಭಕ್ತರ ಮೊಬೈಲ್ಗಳಲ್ಲಿ ಗಜಪಡೆಯ ದೃಶ್ಯ ಸೆರೆಯಾಗಿದ್ದು, ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಆನೆಗಳ ಹಿಂಡನ್ನು ಕಂಡು ಗಾಬರಿಗೊಂಡಿದ್ದಾರೆ. ಆನೆಗಳನ್ನು ಕಂಡ ತಕ್ಷಣವೇ ದೇವಸ್ಥಾನದ ಆಡಳಿತ ಮಂಡಳಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ವಲಯ ಅರಣ್ಯಾಧಿಕಾರಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಇನ್ನು ಈ ಗಜಪಡೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಮದ್ದೂರು ಪಟ್ಟಣದ ಕಡೆ ತೆರಳದಂತೆ ಸಿಬ್ಬಂದಿ ಕಾವಲಿರಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…