ಎರೆಹುಳು ಗೊಬ್ಬರ ತಯಾರಿಸುತ್ತಿರುವ ಈ ರೈತ ಮಾದರಿಯಾದ್ದು ಏಕೆ..?

August 29, 2024
9:48 PM

ಎಲ್ಲರೂ ಕೃಷಿ ಮಾಡುತ್ತಾರೆ. ಗೊಬ್ಬರ ತಯಾರಿಸುತ್ತಾರೆ. ಆದರೆ ಇಲ್ಲೊಬ್ಬ ರೈತ ಎರೆಹುಳ ಗೊಬ್ಬರ ತಯಾರಿಸಿ ಗಮನ ಸೆಳೆದಿದ್ದಾರೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಅವರು ತೋರಿಸಿದ್ದಾರೆ. 

Advertisement
Advertisement

ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಮಂಡ್ಯದ ರೈತ ಎರೆಹುಳು ಗೊಬ್ಬರ ತಯಾರಿಸಿ ಇತರರಿಗೂ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರ ಜೊತೆಗೆ ಪ್ರಧಾನಮಂತ್ರಿ ಮತ್ಸಯೋಜನೆಯ ಲಾಭ ಪಡೆದು ಉತ್ತಮ ಆದಾಯ ಗಳಿಸುವ ಮೂಲಕ ಮಾದರಿಯಾಗಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದ ನರಸಿಂಹಮೂರ್ತಿ ಎಂಬ ರೈತ ತಮ್ಮ ತೋಟದಲ್ಲಿ ಬರುವ ಕೃಷಿ ತ್ಯಾಜ್ಯದ ಜೊತೆಗೆ ಇತರೆ ರೈತರ ಜಮೀನುಗಳಿಂದ ಕೃಷಿ ತ್ಯಾಜ್ಯ ಸಂಗ್ರಹಿಸಿ ತಮ್ಮ ಎರೆಹುಳು ಘಟಕದಲ್ಲಿ ಫಲವತ್ತಾದ ಗೊಬ್ಬರವನ್ನು ತಯಾರಿಸಿ ತಮ್ಮ ಹೊಲಕ್ಕೆ ಬಳಕೆ ಮಾಡುತ್ತಾರೆ. ಅಲ್ಲದೆ ಇತರೆ ರೈತರಿಗೂ ಎರೆಹುಳು ಗೊಬ್ಬರವನ್ನು ಮಾರಾಟ ಮಾಡುತ್ತಿದ್ದು ರಾಸಾಯನಿಕ ಮುಕ್ತ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಿದ್ದಾರೆ.

 

Advertisement

ಅಲ್ಲದೆ ಪ್ರಧಾನಮಂತ್ರಿ ಮತ್ಸ್ಯಯೋಜನೆಯಡಿ ಹಣಕಾಸು ಸಹಾಯ ಪಡೆದು 8 ತೊಂಬೆಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದಾರೆ. ಈ ಮೀನುಗಳಿಗೆ ಉತ್ತಮ ಬೇಡಿಕೆ ಇದ್ದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕೃಷಿಕ ನರಸಿಂಹಮೂರ್ತಿ, ರಾಸಾಯನಿಕ ಗೊಬ್ಬರ ಬಳಕೆ ಮಾಡಿ ಬೆಳೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಲ್ಲದೆ ಮಣ್ಣಿನ ಫಲವತ್ತತೆಯೂ ನಾಶವಾಗುತ್ತದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಎರೆಹುಳು ಗೊಬ್ಬರ ತಯಾರಿಸಲಾಗುತ್ತಿದೆ. ಮತ್ಸ್ಯಯೋಜನೆಯೂ ಹೆಚ್ಚು ಲಾಭದಾಯಕವಾಗಿದೆ ಎನ್ನುತ್ತಾರೆ.

ಈ ರೈತರ ಎರೆಗೊಬ್ಬರದ  ಗ್ರಾಹಕ ಪುಟ್ಟಸ್ವಾಮಿ ಅವರ ಪ್ರಕಾರ, ಎರೆಹುಳು ಗೊಬ್ಬರ ಖರೀದಿಸಿ ತಮ್ಮ ಜಮೀನುಗಳಿಗೆ ಬಳಕೆ ಮಾಡಲಾಗುತ್ತಿದ್ದು, ಫಲವತ್ತಾದ ಬೆಳೆ ಬೆಳೆಯಲು ಸಹಕಾರಿಯಾಗಿದೆ ಎನ್ನುತ್ತಾರೆ.

ಬಿಂಡಿಗನವಿಲೆ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಂಗಸ್ವಾಮಿ , ರೈತರಿಗೆ ಕಡಿಮೆ ಬೆಲೆಯಲ್ಲಿ ಎರೆಹುಳು ಗೊಬ್ಬರ ಮಾರಾಟ ಮಾಡುವ ಮೂಲಕ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಒಟ್ಟಾರೆ ರೈತರು ರಾಸಾಯನಿಕ ಗೊಬ್ಬರ ಮತ್ತು ಔಷಧಿಗಳ ಕಡೆ ಮುಖಮಾಡುತ್ತಿರುವ ಕಾಲಮಾನದಲ್ಲಿ ನರಸಿಂಹಮೂರ್ತಿ ಅವರ ಸಾವಯವ ಕೃಷಿ ಅಳವಡಿಕೊಳ್ಳುವ ಮೂಲಕ ಉತ್ತಮ ಆದಾಯ ಪಡೆಯುತ್ತಿದ್ದು ಇತರರಿಗೂ ಮಾದರಿಯಾಗಿದ್ದಾರೆ.

Advertisement

Narasimhamurthy, a farmer from Doddabala village in Nagamangala taluk of Mandya district, collects agricultural waste from both his own garden and other farmers’ fields to create fertile manure in his earthworm unit. He uses this manure in his own fields and also sells earthworm fertilizer to other farmers, helping them grow chemical-free crops.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group