Advertisement
MIRROR FOCUS

ಎರೆಹುಳು ಗೊಬ್ಬರ ತಯಾರಿಸುತ್ತಿರುವ ಈ ರೈತ ಮಾದರಿಯಾದ್ದು ಏಕೆ..?

Share

ಎಲ್ಲರೂ ಕೃಷಿ ಮಾಡುತ್ತಾರೆ. ಗೊಬ್ಬರ ತಯಾರಿಸುತ್ತಾರೆ. ಆದರೆ ಇಲ್ಲೊಬ್ಬ ರೈತ ಎರೆಹುಳ ಗೊಬ್ಬರ ತಯಾರಿಸಿ ಗಮನ ಸೆಳೆದಿದ್ದಾರೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಅವರು ತೋರಿಸಿದ್ದಾರೆ. 

ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಮಂಡ್ಯದ ರೈತ ಎರೆಹುಳು ಗೊಬ್ಬರ ತಯಾರಿಸಿ ಇತರರಿಗೂ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರ ಜೊತೆಗೆ ಪ್ರಧಾನಮಂತ್ರಿ ಮತ್ಸಯೋಜನೆಯ ಲಾಭ ಪಡೆದು ಉತ್ತಮ ಆದಾಯ ಗಳಿಸುವ ಮೂಲಕ ಮಾದರಿಯಾಗಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದ ನರಸಿಂಹಮೂರ್ತಿ ಎಂಬ ರೈತ ತಮ್ಮ ತೋಟದಲ್ಲಿ ಬರುವ ಕೃಷಿ ತ್ಯಾಜ್ಯದ ಜೊತೆಗೆ ಇತರೆ ರೈತರ ಜಮೀನುಗಳಿಂದ ಕೃಷಿ ತ್ಯಾಜ್ಯ ಸಂಗ್ರಹಿಸಿ ತಮ್ಮ ಎರೆಹುಳು ಘಟಕದಲ್ಲಿ ಫಲವತ್ತಾದ ಗೊಬ್ಬರವನ್ನು ತಯಾರಿಸಿ ತಮ್ಮ ಹೊಲಕ್ಕೆ ಬಳಕೆ ಮಾಡುತ್ತಾರೆ. ಅಲ್ಲದೆ ಇತರೆ ರೈತರಿಗೂ ಎರೆಹುಳು ಗೊಬ್ಬರವನ್ನು ಮಾರಾಟ ಮಾಡುತ್ತಿದ್ದು ರಾಸಾಯನಿಕ ಮುಕ್ತ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಿದ್ದಾರೆ.

 

ಅಲ್ಲದೆ ಪ್ರಧಾನಮಂತ್ರಿ ಮತ್ಸ್ಯಯೋಜನೆಯಡಿ ಹಣಕಾಸು ಸಹಾಯ ಪಡೆದು 8 ತೊಂಬೆಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದಾರೆ. ಈ ಮೀನುಗಳಿಗೆ ಉತ್ತಮ ಬೇಡಿಕೆ ಇದ್ದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕೃಷಿಕ ನರಸಿಂಹಮೂರ್ತಿ, ರಾಸಾಯನಿಕ ಗೊಬ್ಬರ ಬಳಕೆ ಮಾಡಿ ಬೆಳೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಲ್ಲದೆ ಮಣ್ಣಿನ ಫಲವತ್ತತೆಯೂ ನಾಶವಾಗುತ್ತದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಎರೆಹುಳು ಗೊಬ್ಬರ ತಯಾರಿಸಲಾಗುತ್ತಿದೆ. ಮತ್ಸ್ಯಯೋಜನೆಯೂ ಹೆಚ್ಚು ಲಾಭದಾಯಕವಾಗಿದೆ ಎನ್ನುತ್ತಾರೆ.

ಈ ರೈತರ ಎರೆಗೊಬ್ಬರದ  ಗ್ರಾಹಕ ಪುಟ್ಟಸ್ವಾಮಿ ಅವರ ಪ್ರಕಾರ, ಎರೆಹುಳು ಗೊಬ್ಬರ ಖರೀದಿಸಿ ತಮ್ಮ ಜಮೀನುಗಳಿಗೆ ಬಳಕೆ ಮಾಡಲಾಗುತ್ತಿದ್ದು, ಫಲವತ್ತಾದ ಬೆಳೆ ಬೆಳೆಯಲು ಸಹಕಾರಿಯಾಗಿದೆ ಎನ್ನುತ್ತಾರೆ.

ಬಿಂಡಿಗನವಿಲೆ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಂಗಸ್ವಾಮಿ , ರೈತರಿಗೆ ಕಡಿಮೆ ಬೆಲೆಯಲ್ಲಿ ಎರೆಹುಳು ಗೊಬ್ಬರ ಮಾರಾಟ ಮಾಡುವ ಮೂಲಕ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಒಟ್ಟಾರೆ ರೈತರು ರಾಸಾಯನಿಕ ಗೊಬ್ಬರ ಮತ್ತು ಔಷಧಿಗಳ ಕಡೆ ಮುಖಮಾಡುತ್ತಿರುವ ಕಾಲಮಾನದಲ್ಲಿ ನರಸಿಂಹಮೂರ್ತಿ ಅವರ ಸಾವಯವ ಕೃಷಿ ಅಳವಡಿಕೊಳ್ಳುವ ಮೂಲಕ ಉತ್ತಮ ಆದಾಯ ಪಡೆಯುತ್ತಿದ್ದು ಇತರರಿಗೂ ಮಾದರಿಯಾಗಿದ್ದಾರೆ.

Narasimhamurthy, a farmer from Doddabala village in Nagamangala taluk of Mandya district, collects agricultural waste from both his own garden and other farmers’ fields to create fertile manure in his earthworm unit. He uses this manure in his own fields and also sells earthworm fertilizer to other farmers, helping them grow chemical-free crops.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

8 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

20 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

21 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago