ದಿನೇ ದಿನೇ ಭತ್ತದ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಹೊಲ-ಗದ್ದೆಗಳೆಲ್ಲ ಅಡಿಕೆ ತೋಟವಾಗಿ ಪರಿವರ್ತನೆ ಗೊಂಡಿದ್ದೇ ಹೆಚ್ಚು. ಆದರೆ ಶೃಂಗೇರಿಯ ಕೃಷಿಕರೊಬ್ಬರು ಅನೇಕ ರೈತರ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದ ಪ್ರಗತಿಪರ ಕೃಷಿಕರಾದ, ರಮೇಶ್ ಹೊನ್ನಳ್ಳಿ ಹಾಗೂ ಅವರ ತಂಡ ಈ ವರ್ಷ ಸಾಮೂಹಿಕವಾಗಿ ರೈತರೆಲ್ಲ ಒಟ್ಟುಗೂಡಿ 110 ಎಕರೆ ಗದ್ದೆ ಬೇಸಾಯವನ್ನು ಮಾಡಿದ್ದಾರೆ.
ರಮೇಶ್ ಹಾಗೂ ಅವರ ತಂಡ ಇವತ್ತಿನ ಕಾಲದಲ್ಲಿ ಗದ್ದೆ ಕೃಷಿಯಲ್ಲಿ ಇಂತಹ ಒಂದು ಸಾಹಸಕ್ಕೆ ಕೈ ಹಾಕಿರುವುದೇ ವಿಶೇಷ. ಭತ್ತದ ಕೃಷಿಗೆ ಪ್ರಾಣಿ ಪಕ್ಷಿಗಳ ಕಾಟದಿಂದ, ಕೂಲಿ ಆಳುಗಳ ಸಮಸ್ಯೆಯಿಂದ, ಹವಾಮಾನ ವೈಪರಿತ್ಯದಿಂದ, ಸರಿಯಾದ ಬೆಲೆ ಇಲ್ಲದೆ ಇರುವುದರಿಂದ, ಬೆಳೆದ ಭತ್ತಕ್ಕೆ ಹಂತ ಹಂತವಾಗಿ ಇಂತಹ ಅನೇಕ ಸಮಸ್ಯೆಗಳಿಂದ ಮಲೆನಾಡಿನಲ್ಲಿ ಭತ್ತದ ಕೃಷಿ ಇಳಿಮುಖವಾಗ ತೊಡಗಿತು. ಒಂದು ಕಡೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದ್ದರಿಂದ ಮುಂದೇನು ಎಂಬ ಅನೇಕ ಸಮಸ್ಯೆಗಳು ಎದುರಾದಾಗ, ಒಂದು ಕಡೆ ಜೀವನಕ್ಕಾಗಿ ಹೊರ ಹೋಗುವ ಪರಿಸ್ಥಿತಿ, ಇನ್ನೊಂದು ಕಡೆ ಕೃಷಿಯನ್ನು ನಂಬಿದಂತಹ ರೈತರು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದ್ದರು. ಇಂತಹ ಪರಿಸ್ಥಿತಿಗಳ ನಡುವೆ ತನ್ನ ತಾಲೂಕಿನ ಕೃಷಿಕರನ್ನೆಲ್ಲ ಒಟ್ಟುಗೂಡಿಸಿ ಅವರಲ್ಲಿ ಒಂದು ಧೈರ್ಯ ತುಂಬಿ ಎಲ್ಲರೂ ಒಟ್ಟುಗೂಡಿ ಮಿಷನ್ ಗಳ ಮುಖಾಂತರ ಗದ್ದೆಸಾಗುವಳಿ ಮಾಡೋಣ ಎಂದು ಹೊರಟು ಯಶಸ್ವಿಯಾದವರು ಹೊನ್ನವಳ್ಳಿ ರಮೇಶ್ ಹಾಗೂ ಅವರ ತಂಡ.
ನಿಜಕ್ಕೂ ದೇಶಕ್ಕೆ ಮಾದರಿ ಎಂದರೆ ತಪ್ಪಾಗಲಾರದು. ಇವರ ಈ ಕೆಲಸಕ್ಕೆ ಸಹಕಾರವಾಗಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಬಾಡಿಗೆಗೆ ಸಿಗುವ ಗದ್ದೆ ನಾಟಿ ಮಾಡುವ ಯಂತ್ರ. ನಾಟಿ ಕೊಯ್ಲು ಎಲ್ಲವನ್ನು ಸಂಪೂರ್ಣ ಮಿಷನ್ ನಲ್ಲಿ ಮಾಡಿ ಯಶಸ್ವಿಯಾಗಿದ್ದಾರೆ. 2019-20ರಲ್ಲಿ ಇವರ ತಂಡ 10 ಎಕರೆ ಗದ್ದೆ ಸಾಗುವಳಿ ಮಾಡಿ ಯಶಸ್ವಿಯಾಗಿದ್ದರು. ಇದನ್ನು ನೋಡಿ ಊರಿನ ಉಳಿದ ರೈತರಿಗೂ ಒಂದು ಧೈರ್ಯ ಬಂದಿತು. ಸುಮಾರು 15ರಿಂದ 20 ಕೃಷಿಕರ ಕುಟುಂಬ ಒಟ್ಟಾಗಿ ಇಂದು 110 ಎಕರೆ ಗದ್ದೆ ಸಾಗುವಳಿಯನ್ನು ಮಾಡಿದ್ದಾರೆ. ಇದು ನಿಜಕ್ಕೂ ಉಳಿದವರಿಗೆ ಮಾದರಿ.
ಮುಂದಿನ ದಿನಗಳಲ್ಲಿ ಮಲೆನಾಡಿನಲ್ಲಿ ಇಂತಹ ಸಾಮೂಹಿಕವಾಗಿ ಕೃಷಿಯನ್ನು ಮಾಡಿದರೆ ಮಾತ್ರ ಎಲ್ಲರಿಗೂ ಅನುಕೂಲ. ಇವತ್ತು ಎಲ್ಲರ ಮನೆಯಲ್ಲಿಯೂ ಇರುವುದೇ ಒಂದಿಬ್ಬರು. ನಮ್ಮ ತಲತಲಾಂತರದಿಂದ ಬಂದಂತಹ ಕೃಷಿಯನ್ನು ಉಳಿಸಿಕೊಂಡು ಹೋಗಲು ಇದು ಒಂದೇ ಪರಿಹಾರ ಒಟ್ಟುಗೂಡಿ ಕೃಷಿಯನ್ನು ಮಾಡುವುದು ಹಾಗೂ ಮಿಷನರಿಗಳನ್ನು ಬಳಸಿಕೊಳ್ಳುವುದು ಎಂದು ಹೊನ್ನವಳ್ಳಿ ರಮೇಶ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಹಾಗೆ ನಮ್ಮ ಈ ಕೃಷಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದವರು ತುಂಬಾನೇ ಸಹಕಾರ ನೀಡಿದ್ದಾರೆ ಅವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು. ಇನ್ನೊಂದು ಸಂತೋಷದ ವಿಚಾರವೇನೆಂದರೆ ನಮ್ಮ ಟೀಮಲ್ಲಿ 80 ವರ್ಷ ವಯಸ್ಸಾದಂತವರು ಹಿರಿಯರು ಕೂಡ ನಮ್ಮ ಜೊತೆ ಸೇರಿ ತನ್ನ ಗೆದ್ದ ಸಾಗುವಳಿಯನ್ನು ಮಾಡಿದ್ದಾರೆ. ಸಂಪೂರ್ಣ ಮಿಷನ್ ಗಳಿಂದ ಗದ್ದೆ ಸಾಗುವಳಿ ಮಾಡುತ್ತಿದ್ದೇವೆ.
ನಮಗೆ ಒಟ್ಟು ಗದ್ದೆ ಬೇಸಾಯ ದಲ್ಲಿ ಸಂಪೂರ್ಣ ಖರ್ಚು ಹೋಗಿ ಉತ್ಪತ್ತಿಯಲ್ಲಿ 40 ರಿಂದ 50 ಪರ್ಸೆಂಟ್ ಆದಾಯ ಉಳಿಯುತ್ತಿದೆ. ನಮ್ಮ ಈ ಕೃಷಿಯನ್ನು ನೋಡಿ ತುಂಬಾ ಜನ ರೈತರು ಬಂದು ನೋಡಿಕೊಂಡು ಹೋಗಿ, ಮರಳಿ ಗದ್ದೆ ಕೃಷಿಯನ್ನು ಈ ವರ್ಷ ಮಾಡುತ್ತಿದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ ಎಂದು ಹೇಳಿದರು. ಇವತ್ತು ಶೃಂಗೇರಿಯ ಹೊನ್ನವಳ್ಳಿ ಗ್ರಾಮ ಭತ್ತದ ಬೇಸಾಯದಲ್ಲಿ ಮಾದರಿ ಗ್ರಾಮವಾಗಿ ಹೊರಹೊಮ್ಮಿದೆ. ರೈತರು ಯಶಸ್ವಿ ಕಂಡಿದ್ದಾರೆ.
ಸಂಪರ್ಕ : ರಮೇಶ್ ಹೊನ್ನವಳ್ಳಿ 9449651966
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…