Advertisement
Opinion

ಈ ಕಾಲದ ಅಪ್ಪ ಅಮ್ಮಂದಿರು ಓದಲೇಬೇಕಾದ ವಿಷಯ | ಮಕ್ಕಳು ಬೇಡಿದ್ದನ್ನು ಕೊಡಿಸುವ ಮುನ್ನ ಈ ಕಥೆಯನ್ನು ಓದಿ..

Share

ಇತ್ತೀಚೆಗೆ ಒಂದು ಚಟ. ಮನೆಯಲ್ಲಿ ಮಾಡಿದ ಅಡುಗೆ ಬೇರೆ. ಮಕ್ಕಳಿಗೆ(Children) ಮಾಡುವ ಅಡುಗೆ(Cooking)ಬೇರೆ. ಮನೆಯವರಿಗೆಲ್ಲ ಉಪ್ಪಿಟ್ಟು. ಮಗು ಮೂಗು ಮುರಿಯುತ್ತದೆ. ಅಳುತ್ತದೆ. ಬೇರೆ ಏನನ್ನೋ ಬೇಡುತ್ತದೆ. ಅಮ್ಮ(Mother) ಅದರ ಅಪೇಕ್ಷೆ ಕೇಳುತ್ತಾಳೆ. ಅದಕ್ಕೆ ನೂಡಲ್ಸ್(Noodles) ಬೇಕು. ಅಥವಾ ಪಿಜ್ಜಾ, ಬರ್ಗರ್(Pizza, Burger)…. ಇನ್ನೇನೋ… ಮಗು ಅಳಬಾರದು. ಅಂತೂ ಅದರ ಅಪೇಕ್ಷೆ ಒದಗಿಸಬೇಕು. ಇದೀಗ ಎಲ್ಲ ಮನೆಗಳ ಕಥೆ. ಮಗುವಿನ ಅಪೇಕ್ಷೆಗೆ ಆದ್ಯತೆ. ಅದು ಅತ್ತರೆ ಅಪ್ಪ ಬಯ್ಯುವುದು ಅಮ್ಮನನ್ನೆ.

ಹೀಗೆ ಮಾಡಿದರೆ ಏನು ತಪ್ಪು? ಹಿಂದೆ ಅಷ್ಟು ಸೌಕರ್ಯ ಇರಲಿಲ್ಲ. ಬಡತನ ಇತ್ತು. ಈಗ ಕೊಡುವ ತಾಕತ್ತು ಇದೆ ಕೊಡಿಸಲಿ? ನಾವು ಹಾಕಿದ್ದು ತಿಂದಿದ್ದೇವೆ ಅಂತ ಅವರು ಯಾಕೆ ತಿನ್ನಬೇಕು? ನಮಗೆ ಬೇರೆ ಗತಿಯಿರಲಿಲ್ಲ. ಹೀಗೆ ಒಂದು ವಾದವೂ ಇದೆ… ಬಹಳ ಹಿಂದೆ ಅಶ್ವತ್ಥಾಮ ಎಂಬ ಮಗು ಇದ್ದ. ಮಹಾತಪಸ್ವಿ ದ್ರೋಣನ ಮಗ. ಹೊಲದಲ್ಲಿ ಬಿದ್ದ ಧಾನ್ಯ ಆರಿಸಿ ತಂದು ಊಟ ಮಾಡುತ್ತಿದ್ದವ ದ್ರೋಣ. ಅಂತಿಂಥ ತಪಸ್ವಿಯಲ್ಲ. ನಿಜವಾದ ಬ್ರಾಹ್ಮಣ…

ಅವನಿಗೆ ಕೃಪಾಚಾರ್ಯರ ತಂಗಿ ಕೃಪಿ ಹೆಂಡತಿ. ಈ ಕೃಪಾಚಾರ್ಯರು ಕೌರವರ ಗುರುಗಳು… ದ್ರೋಣಾಚಾರ್ಯರು ಇವರಿಂದ ತುಂಬಾ ದೂರ. ಆದರೆ ಮಗುವಿಗೆ ಕೃಪಾಚಾರ್ಯರು ಮಾವ. ಈ ಮಾವ ಅರಮನೆಗೆ ಹತ್ತಿರ.. ಮಾವನ ಕಾರಣಕ್ಕೆ ಈ ಮಗುವೂ ಅಂದರೆ ಅಶ್ವತ್ಥಾಮನೂ ಅರಮನೆ ಹೊಕ್ಕ. ಅಲ್ಲಿ ಅವ ನೋಡಿದ್ದು ದೊಡ್ಡವರನ್ನು… ದೊಡ್ಡವರ ಊಟವೇ ಬೇರೆ. ಪೇಯವೂ ಬೇರೆ. ಮಗು ಅವರಲ್ಲಿ ಹಾಲು ಕುಡಿಯಿತು….

ಈ ಹಾಲನ್ನು ಮನೆಯಲ್ಲಿ ಕೇಳಿತು. ಎಲ್ಲಿಂದ ಕೊಡಬೇಕು ಈ ಬಡ ಬ್ರಾಹ್ಮಣ ತಪಸ್ವಿಯ ಹೆಂಡತಿ?… ಅವಳು ಹಿಟ್ಟಿಗೆ ನೀರು ಸೇರಿಸಿ ಕೊಟ್ಟಳು. ಮಗು ಇದು ಅದಲ್ಲ ಎಂದಿತು…ಹೋಲಿಕೆ…. ಎಲ್ಲ ದುಃಖದ ಮೂಲ.. ಮಗು ಆ ಅದೇ ಹಾಲನ್ನು ಕೇಳಿತು. ನಿತ್ಯ ಒತ್ತಾಯ. ತಾಯಿಗೆ ಸಂಕಟ. ಗಂಡನನ್ನು ಮೊರೆಹೊಕ್ಕಳು. ಜೀವನದಲ್ಲಿ ಯಾರನ್ನೂ ಬೇಡದವ, ಕಾಳು ಆರಿಸಿ ಉಂಡವ. ಮಗನಿಗಾಗಿ ಬೇಡಲು ಹೊರಟ. ಅದೂ ಯಾರ ಬಳಿ? ಖಾಸಾ ಗೆಳೆಯ ದ್ರುಪದನ ಹತ್ತಿರ. ಅವನು ಈಗ ರಾಜ….ಇವ ಕೇಳಿದ್ದು ಒಂದು ದನ, ಅವನು ಕೊಟ್ಟಿದ್ದು ಅವಮಾನ…. ಕೊಡದಿದ್ದರೆ ಚಿಂತೆ ಇಲ್ಲ, ಅವಮಾನ ಕೊಡಬಾರದು. ಮಗನ ಮೋಹಕ್ಕೆ ತಂದೆಗೆ ಸಿಕ್ಕ ಫಲ….

ಎಲ್ಲಿಗೆ ಎಳೆದೊಯ್ದಿತು? ನಿಷ್ಠಾವಂತ ತಪಸ್ವಿ ಕ್ಷತ್ರಿಯನಾದ. ಅಂತಿಂಥ ಕ್ಷತ್ರಿಯನಲ್ಲ. ಕೌರವ ಪಾಂಡವರಿಗೆ ಬಿಲ್ವಿದ್ಯೆಯ ಗುರು. ಬ್ರಹ್ಮಾಸ್ತ್ರದ ಉಡುಗೊರೆ ಕೊಡುವಷ್ಟು ಧೀರ. ಬ್ರಾಹ್ಮಣ ಕ್ಷತ್ರಿಯನಾದದ್ದು ಮಗನ ಆಸೆಗೆ. ಎಲ್ಲಿಗೆ ಬಂತು ಅವನ ಸ್ಥಿತಿ? ಸಹಸ್ರಾರು ಯೋಧರನ್ನು ಕೊಂದ. ಕಡೆಗೂ ಅಶ್ವತ್ಥಾಮ ಸತ್ತ ಎಂಬ ಸುದ್ದಿ ಕೇಳಿಯೇ ಸತ್ತ. ಅಲ್ಲಿಯೂ ಮಗನ ಮೋಹ. ಈ ಹಾಲುಂಡ ಮಗನಾದರೂ ಬೆಳೆದನಾ? ಎಂಥಾ ದುರವಸ್ಥೆ. ಅಪ್ಪ ಬ್ರಹ್ಮಾಸ್ತ್ರ ಕೊಡುವಾಗಲೂ ಮನಸ್ಸಿಲ್ಲದೆ ಕೊಟ್ಟ. ಸರಿಯಾಗಿ ಸಮಯಕ್ಕೆ ಉಪಯೋಗ ಆಗದಂತೆ ಹೇಳಿದ.

ಹಾಲಿನ‌ ಅಪೇಕ್ಷೆಗೆ ಅಪ್ಪನನ್ನು ದೂಡಿದ ಮಗ. ಅಪ್ಪ ಕೊಟ್ಟ ಬ್ರಹ್ಮಾಸ್ತ್ರವನ್ನು ಹಸುಳೆಯನ್ನು ಕೊಲ್ಲಲು ಬಳಸಿದ. ಹೋಗಲಿ, ಮುಕ್ತನಾದನಾ? ಕೃಷ್ಣ ಶಾಪ ಹೊತ್ತು ನಾಯಿಯಂತೆ ಅಲೆದ. “ಹಸಿದು ತಿರುಗಾಡು, ಅರಣ್ಯದಲ್ಲಿ ಹುಚ್ಚನಂತೆ ಅಲೆ. ಮೈ ಬಾಯಿ ದುರ್ಗಂಧ ಬರಲಿ. ಯಾರೂ ಸೇರದಿರಲಿ. ಅದೂ ಎಷ್ಟು ಸಮಯ. ಮೂರು ಸಾವಿರ ವರ್ಷ ಹೀಗೆ ಅಂಡಲೆ” ಇಂಥ ದುಷ್ಟ ಶಾಪ ಪಡೆದು ಅರಣ್ಯ ಸೇರಿದ. ಈಗಲೂ ಅಲೆಯುತ್ತಾನೆ. ಅಲ್ಲಿ ಇಲ್ಲಿ ಊಟಕ್ಕೆ ಬಂದು ಹೋಗುತ್ತಾನೆ. ಹುಚ್ಚನಂತೆ ಇರುತ್ತಾನೆ ಎಂಬ ಪ್ರತೀತಿ ಇದೆ.

ಒಂದು ದೃಷ್ಟಿಯಿಂದ ಎಂಥಾ ತಪಸ್ವಿಯ ಕುಲ? ಯಾವ ಅಧಃಪತನವನ್ನು ಕಂಡಿತು? ಮೂಲ ಶೋಧಿಸಿದರೆ ಅದು ಅಮ್ಮ ಕೊಟ್ಟಿದ್ದನ್ನು ತಿನ್ನದ ತಪ್ಪಿನ ಫಲ. ದುರ್ಯೋಧನನ ಮನೆಯ ಹಾಲು ಮಾಡಿದ ಪರಿಣಾಮ. ಬಹಳ ದೊಡ್ಡ ಬ್ರಾಹ್ಮಣ ಕನಿಷ್ಠ ಕ್ಷತ್ರಿಯನಾದ ಕಥೆ. ಒಬ್ಬ ಕೌಶಿಕ ವಿಶ್ವಾಮಿತ್ರನಾದ ಆದರ್ಶಕ್ಕೆ ತದ್ವಿರುದ್ಧ. ಬಯಸಿದರೂ ದೊಡ್ಡದನ್ನು ಬಯಸಬೇಕು. ಬೇಡಿದರೆ ಪರಮವನ್ನು ಬೇಡಬೇಕು. ಹಾಗಾದಾಗ ಕೌಶಿಕ ವಿಶ್ವಾಮಿತ್ರನಾಗುತ್ತಾನೆ. ಕೇಡಿನ ಬೇಡುವಿಕೆಗೆ ಕೆಡುಕಿನ ಕಿಡಿ. ಅದೇ ಬೆಂಕಿಯಾಗಿ ಕುಲ ಸುಟ್ಟೀತು. ದ್ರೋಣಾಚಾರ್ಯರ ವಂಶವೇ ಸುಟ್ಟು ಭಸ್ಮ ಆಯಿತು. ಅಮ್ಮನನ್ನು ಕಾಡಿದ ಪಾಪಕ್ಕೆ.

ಈಗ ದುರ್ಯೋಧನನ ಅರಮನೆ ಜಾಗದಲ್ಲಿ ಹೋಟೆಲ್ ಗಳು ಇವೆ. ಅಮ್ಮ ಮಾಡಿದ ಆಹಾರ ಬೇಡವೆನಿಸಿದೆ. ಪ್ರತೀ ಮನೆಯಲ್ಲಿ ಅಶ್ವತ್ಥಾಮರ ಕಾಟ. ತಾಯಿ‌ ತಂದೆಯರೆಲ್ಲ ದ್ರೋಣ ಕೃಪಿಗಳೇ. ವಂಶದಿಂದ ಬಂದ ಆಹಾರ ವ್ರತ ನಿಯಮ ತೂರಿಯಾಯಿತು. ಇನ್ನೇನು ಉಳಿದದ್ದು ಕುಲನಾಶ. ಈಗ ನಾಶ ಆಗಲಿಕ್ಕೆ ಇರುವುದು ಒಂದು ದ್ರೋಣ ಕುಟುಂಬ ಅಲ್ಲ. ಮನುಕುಲವೇ ಆ ಕಡೆಗೆ ಇದೆ.

ನಾಲಿಗೆ ಚಪಲಕ್ಕೆ ಇದಕ್ಕಿಂತ ದೊಡ್ಡ ಬೆಲೆ ಇನ್ನೇನು ತೆರಬೇಕು? ವಿಷಾದದ ಅನುಕಂಪ ಈ‌ ಅಶ್ವತ್ಥಾಮ ಕುಲಕ್ಕೆ….. ಇಂದು ಆರಡಿಯ ಮನುಷ್ಯ ಮೂರಂಗುಲದ ನಾಲಿಗಯ ದಾಸನಾಗಿದ್ದಾನೆ….!

ಸಂಗ್ರಹಣೆ ಮತ್ತು ಸಂಪಾದನೆ: ಡಾ. ಪ್ರ. ಎ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

20 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

21 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

23 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago