ದೇಶದ ಅತಿ ದೊಡ್ಡ ಸಮಸ್ಯೆ ಅಂದರೆ ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ. ನೀವು ದೇಶದ ಯಾವುದೇ ಮೂಲೆಗೆ ಹೋದರೂ, ಈ ಸಮಸ್ಯೆ ಇದ್ದಿದ್ದೇ. ಅಲ್ಲಿನ ಆಯಾಯ ಸರ್ಕಾರಗಳು ಕಸ ಮುಕ್ತಗೊಳಿಸಲು ಇನ್ನಿಲ್ಲದ ಶ್ರಮ ಹಾಕಿದರೂ ಯಶಸ್ವಿಯಾಗಿಲ್ಲ. ಈ ಕಸದ ಸಮಸ್ಯೆಯಿಂದ ಬೇಸತ್ತ ಕೇರಳ ಸರ್ಕಾರ ಹೊಸ ಆಫರ್ ಒಂದನ್ನು ಅಲ್ಲಿನ ನಾಗರೀಕರಿಗೆ ನೀಡಿದೆ. ಈ ಮೂಲಕವಾದರು ರಾಜ್ಯವನ್ನು ಕಸಮುಕ್ತಗೊಳಿಸಬಹುದಾ ಎಂದು ಯೋಚಿಸಿದೆ. ಇದು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ತಂದಿರುವ ‘ಮಾಲಿನ್ಯ ಮುಕ್ತಂ ನವ ಕೇರಳಂ’ ಅಭಿಯಾನದ ಒಂದು ಭಾಗವಾಗಿದೆ.
ತ್ಯಾಜ್ಯಮುಕ್ತ ರಾಜ್ಯವನ್ನಾಗಿ ಮಾಡಲು ಕಸದ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸುವಂತೆ ಸರ್ಕಾರವು ನಾಗರಿಕರಿಗೆ ವಿನಂತಿಸಿದೆ. ತ್ಯಾಜ್ಯದ ಫೋಟೋ ಕಳುಹಿಸುವವರಿಗೆ ಹಣ ನೀಡುವುದಾಗಿಯೂ ಸರ್ಕಾರ ಆಫರ್ ನೀಡಿದೆ. ನೀವು ಮಾಡಬೇಕಿರುವುದು ಇಷ್ಟೇ, ಎಲ್ಲೇ ಕಸ ಕಂಡರೂ ಕಸ ಕಂಡ ತಕ್ಷಣ ಫೋಟೊ ಅಥವಾ ವಿಡಿಯೋ ತೆಗೆದು ಸರಕಾರಕ್ಕೆ ಕಳುಹಿಸಬೇಕು.
ಇಷ್ಟೇ ಅಲ್ಲದೇ, ಸಾರ್ವಜನಿಕ ಸ್ಥಳಗಳು, ಖಾಸಗಿ ಆಸ್ತಿಗಳು ಮತ್ತು ಜಲಮೂಲಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ಎಸೆಯುತ್ತಿರುವವರ ಬಗ್ಗೆ ವರದಿ ಮಾಡಲು ಸರ್ಕಾರ ಸೂಚನೆ ನೀಡಿದೆ.ಈ ಫೋಟೋ-ವೀಡಿಯೋಗಳನ್ನು ಸರ್ಕಾರ ನೀಡುವ ವಾಟ್ಸಾಪ್ ಸಂಖ್ಯೆ ಮತ್ತು ಇ-ಮೇಲ್ಗೆ ಕಳುಹಿಸಬೇಕು. ಮಾಹಿತಿದಾರರ ಹೆಸರು ಅಥವಾ ವಿವರಗಳನ್ನು ಗೌಪ್ಯವಾಗಿ ಇಡುವುದಾಗಿಯೂ ಪ್ರಕಟಣೆ ಹೊರಡಿಸಲಾಗಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…