Advertisement
Opinion

#ScrubTyphus | ಭಾರತದಲ್ಲಿ ಹರಡುತ್ತಿದೆ ಸ್ಕ್ರಬ್ ಟೈಫಸ್ ಸೋಂಕು | 5 ಜನರನ್ನು ಬಲಿ ಪಡೆದ ರೋಗ |

Share

ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಹರಡುವುದು ಸಾಮಾನ್ಯ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳು ಹೆಚ್ಚಾಗಿರುತ್ತದೆ. ಇದೀಗ ಭಾರತದಲ್ಲಿ ಸ್ಕ್ರಬ್ ಟೈಫಸ್ ಎಂಬ ಹೊಸ ಬ್ಯಾಕ್ಟೀರಿಯಾ ಸೋಂಕೊಂದು ವೇಗವಾಗಿ ಹರಡುತ್ತಿದೆ. ಇತ್ತೀಚೆಗೆ, ಸ್ಕ್ರಬ್ ಟೈಫಸ್ #scrubtyphus ಎಂಬ ಬ್ಯಾಕ್ಟೀರಿಯಾದ ಸೋಂಕು ರಾಜಸ್ಥಾನ, ತಮಿಳುನಾಡು ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಈ 2 ರಾಜ್ಯಗಳ 700ಕ್ಕೂ ಹೆಚ್ಚು ಜನರಿಗೆ ಸ್ಕ್ರಬ್ ಟೈಫಸ್ ಕಾಣಿಸಿಕೊಂಡಿದೆ. 5 ಜನರು ಈ ಹೊಸ ರೋಗದಿಂದ ಸಾವನ್ನಪ್ಪಿದ್ದಾರೆ.

ಏನಿದು ಸ್ಕ್ರಬ್ ಟೈಫಸ್?: ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಸಾಂಕ್ರಾಮಿಕ ರೋಗ ಸಲಹೆಗಾರರಾದ ಡಾ.ನೇಹಾ ರಸ್ತೋಗಿ ಅವರ ಪ್ರಕಾರ, ಸ್ಕ್ರಬ್ ಟೈಫಸ್ ಒಂದು  ಸಾಂಕ್ರಾಮಿಕ ರೋಗವಾಗಿದ್ದು, ‘ಓರಿಯೆಂಟಿಯಾ ಸುತ್ಸುಗಮುಶಿ’ ಎಂಬ ಬ್ಯಾಕ್ಟೀರಿಯಂನಿಂದ ಉಂಟಾಗುವ ಬ್ಯಾಕ್ಟೀರಿಯಾದ ಸೋಂಕು. ಇದು ಸೋಂಕಿತ ಸಣ್ಣ ಹುಳಗಳ ಕಚ್ಚುವಿಕೆಯ ಮೂಲಕ ಹರಡುತ್ತದೆ. ಇದರ ಸಾಮಾನ್ಯ ರೋಗಲಕ್ಷಣಗಳೆಂದರೆ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಕೆಂಪನೆಯ ಕಜ್ಜಿಗಳು. ಭಾರೀ ಸಸ್ಯವರ್ಗವಿರುವ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಭಾರತ ಸೇರಿದಂತೆ ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಕಂಡುಬರುತ್ತದೆ ಮತ್ತು ಮಳೆಯ ಸಮಯದಲ್ಲಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತದೆ.

ಸ್ಕ್ರಬ್ ಟೈಫಸ್​ನ ರೋಗಲಕ್ಷಣಗಳು ಯಾವುವು?: ಸ್ಕ್ರಬ್ ಟೈಫಸ್‌ನ ಲಕ್ಷಣಗಳು ಸಾಮಾನ್ಯವಾಗಿ ಹುಳ ವ್ಯಕ್ತಿಯನ್ನು ಕಚ್ಚಿದ 10 ದಿನಗಳಲ್ಲಿ ಕಾಣಿಸಿಕೊಳ್ಳುತ್ತವೆ. ಚಳಿ ಹಾಗೂ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಹುಳ ಕಚ್ಚಿದ ಜಾಗದ ಸುತ್ತ ಕೆಂಪನೆಯ ರಿಂಗ್ ಮೂಡುವುದು ಈ ರೋಗದ ಪ್ರಮುಖ ಲಕ್ಷಣಗಳು. ಈ ಸ್ಕ್ರಬ್ ಟೈಫಸ್‌ ಸೋಂಕು ತೀವ್ರವಾದರೆ ರಕ್ತಸ್ರಾವ ಮತ್ತು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು. ರೋಗಿ ಕೋಮಾಕ್ಕೂ ಹೋಗಬಹುದು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಈ ರೋಗ ಮಾರಣಾಂತಿಕವೂ ಆಗಬಹುದು.

ಇದನ್ನು ತಡೆಗಟ್ಟುವುದು ಹೇಗೆ?: ಸ್ಕ್ರಬ್ ಟೈಫಸ್ ಅನ್ನು ತಡೆಗಟ್ಟಲು ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಆದರೆ ಸೋಂಕಿತ ಹುಳಗಳ ಸಂಪರ್ಕವನ್ನು ತಪ್ಪಿಸುವ ಮೂಲಕ ನಿಮ್ಮ ಅಪಾಯವನ್ನು ಕಡಿಮೆ ಮಾಡಬಹುದು. ಈ ರೋಗ ಹೆಚ್ಚಾಗಿರುವ ಪ್ರದೇಶಗಳಿಗೆ ಕೆಲ ಕಾಲ ಪ್ರಯಾಣವನ್ನು ಮಾಡಬೇಡಿ. ಹುಳಗಳು ಸಾಮಾನ್ಯವಾಗಿ ಕಂಡುಬರುವ ದಟ್ಟವಾದ ಗಿಡ-ಮರಗಳಿರುವ ಸ್ಥಳಗಳಿಂದ ದೂರವಿರಿ. ಶಿಶುಗಳು ಮತ್ತು ಚಿಕ್ಕ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗುವಾಗ ಅವರ ಕೈ ಮತ್ತು ಕಾಲುಗಳನ್ನು ಮುಚ್ಚಬೇಕು. ಆದಷ್ಟೂ ಕಾಡಿನ ಪ್ರದೇಶದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗದಿರುವುದು ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

32 minutes ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

53 minutes ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

1 hour ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

2 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

14 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

22 hours ago