Advertisement
Opinion

#ScrubTyphus | ಭಾರತದಲ್ಲಿ ಹರಡುತ್ತಿದೆ ಸ್ಕ್ರಬ್ ಟೈಫಸ್ ಸೋಂಕು | 5 ಜನರನ್ನು ಬಲಿ ಪಡೆದ ರೋಗ |

Share

ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಹರಡುವುದು ಸಾಮಾನ್ಯ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳು ಹೆಚ್ಚಾಗಿರುತ್ತದೆ. ಇದೀಗ ಭಾರತದಲ್ಲಿ ಸ್ಕ್ರಬ್ ಟೈಫಸ್ ಎಂಬ ಹೊಸ ಬ್ಯಾಕ್ಟೀರಿಯಾ ಸೋಂಕೊಂದು ವೇಗವಾಗಿ ಹರಡುತ್ತಿದೆ. ಇತ್ತೀಚೆಗೆ, ಸ್ಕ್ರಬ್ ಟೈಫಸ್ #scrubtyphus ಎಂಬ ಬ್ಯಾಕ್ಟೀರಿಯಾದ ಸೋಂಕು ರಾಜಸ್ಥಾನ, ತಮಿಳುನಾಡು ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಈ 2 ರಾಜ್ಯಗಳ 700ಕ್ಕೂ ಹೆಚ್ಚು ಜನರಿಗೆ ಸ್ಕ್ರಬ್ ಟೈಫಸ್ ಕಾಣಿಸಿಕೊಂಡಿದೆ. 5 ಜನರು ಈ ಹೊಸ ರೋಗದಿಂದ ಸಾವನ್ನಪ್ಪಿದ್ದಾರೆ.

ಏನಿದು ಸ್ಕ್ರಬ್ ಟೈಫಸ್?: ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಸಾಂಕ್ರಾಮಿಕ ರೋಗ ಸಲಹೆಗಾರರಾದ ಡಾ.ನೇಹಾ ರಸ್ತೋಗಿ ಅವರ ಪ್ರಕಾರ, ಸ್ಕ್ರಬ್ ಟೈಫಸ್ ಒಂದು  ಸಾಂಕ್ರಾಮಿಕ ರೋಗವಾಗಿದ್ದು, ‘ಓರಿಯೆಂಟಿಯಾ ಸುತ್ಸುಗಮುಶಿ’ ಎಂಬ ಬ್ಯಾಕ್ಟೀರಿಯಂನಿಂದ ಉಂಟಾಗುವ ಬ್ಯಾಕ್ಟೀರಿಯಾದ ಸೋಂಕು. ಇದು ಸೋಂಕಿತ ಸಣ್ಣ ಹುಳಗಳ ಕಚ್ಚುವಿಕೆಯ ಮೂಲಕ ಹರಡುತ್ತದೆ. ಇದರ ಸಾಮಾನ್ಯ ರೋಗಲಕ್ಷಣಗಳೆಂದರೆ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಕೆಂಪನೆಯ ಕಜ್ಜಿಗಳು. ಭಾರೀ ಸಸ್ಯವರ್ಗವಿರುವ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಭಾರತ ಸೇರಿದಂತೆ ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಕಂಡುಬರುತ್ತದೆ ಮತ್ತು ಮಳೆಯ ಸಮಯದಲ್ಲಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತದೆ.

ಸ್ಕ್ರಬ್ ಟೈಫಸ್​ನ ರೋಗಲಕ್ಷಣಗಳು ಯಾವುವು?: ಸ್ಕ್ರಬ್ ಟೈಫಸ್‌ನ ಲಕ್ಷಣಗಳು ಸಾಮಾನ್ಯವಾಗಿ ಹುಳ ವ್ಯಕ್ತಿಯನ್ನು ಕಚ್ಚಿದ 10 ದಿನಗಳಲ್ಲಿ ಕಾಣಿಸಿಕೊಳ್ಳುತ್ತವೆ. ಚಳಿ ಹಾಗೂ ಜ್ವರ, ತಲೆನೋವು, ಸ್ನಾಯು ನೋವು ಮತ್ತು ಹುಳ ಕಚ್ಚಿದ ಜಾಗದ ಸುತ್ತ ಕೆಂಪನೆಯ ರಿಂಗ್ ಮೂಡುವುದು ಈ ರೋಗದ ಪ್ರಮುಖ ಲಕ್ಷಣಗಳು. ಈ ಸ್ಕ್ರಬ್ ಟೈಫಸ್‌ ಸೋಂಕು ತೀವ್ರವಾದರೆ ರಕ್ತಸ್ರಾವ ಮತ್ತು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು. ರೋಗಿ ಕೋಮಾಕ್ಕೂ ಹೋಗಬಹುದು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಈ ರೋಗ ಮಾರಣಾಂತಿಕವೂ ಆಗಬಹುದು.

ಇದನ್ನು ತಡೆಗಟ್ಟುವುದು ಹೇಗೆ?: ಸ್ಕ್ರಬ್ ಟೈಫಸ್ ಅನ್ನು ತಡೆಗಟ್ಟಲು ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಆದರೆ ಸೋಂಕಿತ ಹುಳಗಳ ಸಂಪರ್ಕವನ್ನು ತಪ್ಪಿಸುವ ಮೂಲಕ ನಿಮ್ಮ ಅಪಾಯವನ್ನು ಕಡಿಮೆ ಮಾಡಬಹುದು. ಈ ರೋಗ ಹೆಚ್ಚಾಗಿರುವ ಪ್ರದೇಶಗಳಿಗೆ ಕೆಲ ಕಾಲ ಪ್ರಯಾಣವನ್ನು ಮಾಡಬೇಡಿ. ಹುಳಗಳು ಸಾಮಾನ್ಯವಾಗಿ ಕಂಡುಬರುವ ದಟ್ಟವಾದ ಗಿಡ-ಮರಗಳಿರುವ ಸ್ಥಳಗಳಿಂದ ದೂರವಿರಿ. ಶಿಶುಗಳು ಮತ್ತು ಚಿಕ್ಕ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗುವಾಗ ಅವರ ಕೈ ಮತ್ತು ಕಾಲುಗಳನ್ನು ಮುಚ್ಚಬೇಕು. ಆದಷ್ಟೂ ಕಾಡಿನ ಪ್ರದೇಶದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗದಿರುವುದು ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

5 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

17 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

19 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 days ago