ಆಧುನಿಕ ಹಸುಗಳ ಹಾಲು ಹಾಲಾಹಲ, ದೇಸಿ ದನಗಳ ಹಾಲು ಅಮೃತ ಸಮಾನ ಇಂತಹ ಮಾತುಗಳು ಅಲ್ಲಲ್ಲಿ ಆಗಾಗ ಲೇಖನಗಳ ಮೂಲಕ ಭಾಷಣಗಳ ಮೂಲಕ ಕೇಳಿಬರುತ್ತವೆ. ಒಂದಷ್ಟು ಜನರಿಗೆ ಇರಿಸು ಮುರುಸಾಗಿ ಆಧುನಿಕ ಹಾಲನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ. ಕಳೆದ ಐದು ವರ್ಷದ ಹಿಂದಿನ ವರೆಗೆ ನಾನು ಇದೇ ಸಮರ್ಥನೆಯನ್ನು ಮಾಡುತ್ತಿದ್ದೆ. ಯಾವಾಗ ಕೃಷಿ ಸಹಾಯಕರ ಸಮಸ್ಯೆ ತೀವ್ರವಾಯಿತೋ, ಆಗ ಹಸುಗಳ ಅನಾರೋಗ್ಯವು ಬೆಟ್ಟದಷ್ಟು ದೊಡ್ಡ ಸಮಸ್ಯೆಯಾಯಿತು.
ಆದರೆ, ನಾನು ನಂಬಿದ ಸಾವಯವ ಕೃಷಿಗೆ,ಸ್ವಾವಲಂಬಿ ಕೃಷಿಗೆ ಹಸುವಿನ ಗೊಬ್ಬರಕ್ಕೆ ಸಮಾನವಾದ ಬೇರೆ ಯಾವುದೂ ನನಗೆ ಕಂಡುಬರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ದೇಶಿ ಹಸು ಗಳನ್ನು ಸಾಕುವ ಕಡೆಗೆ ಮುಖ ಮಾಡಿದೆ. ದೇಶಿ ಹಸುಗಳ ಒಳಿತು-ಕೆಡುಕುಗಳ ಬಗ್ಗೆ ಆಧುನಿಕ ಹಸುಗಳ ಸಮಸ್ಯೆಯ ಬಗ್ಗೆ ನಾನು ಈಗಾಗಲೇ ಬರೆದಿರುತ್ತೇನೆ. ಆಧುನಿಕ ಹಾಲಿನ ಗುಣಮಟ್ಟದ ಬಗ್ಗೆ ನನ್ನ ತರ್ಕಕ್ಕೆ ನಿಲುಕಿದ ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು ಅನಿಸಿತು…
ಇಂತಹ ಹಲವಾರು ಪ್ರಶ್ನೆಗಳು ನಮ್ಮ ಮುಂದೆ ಪ್ರತಿನಿತ್ಯ ಕಾಣುತ್ತದೆ. ಅಲ್ಲೆಲ್ಲಾ ಉತ್ತಮವಾದುದನ್ನೇ ಶುದ್ಧವಾದುದನ್ನೇ ಬಯಸುವ ನಾವು ತಾಯಿ ಹಾಲಿನ ನಂತರದ ಅತ್ಯಂತ ಉತ್ಕೃಷ್ಟ ಆಹಾರವಾದ ಹಾಲಿನಲ್ಲಿ ಶುದ್ಧತೆಯನ್ನು ಪರಿಗಣಿಸಬೇಡವೇ?
ಅನುದಿನವು ಒಂದಲ್ಲ ಒಂದು ಸಮಸ್ಯೆಗಳಿಂದ( ನಾನು ಈ ಹಿಂದೆ ಬರೆದಂತೆ) ಬಳಲುವ ದನಗಳ ಹಾಲು ಯಾವುದೇ ಸಮಸ್ಯೆಗಳಿಲ್ಲದೆ, ಯಾವುದೇ ಔಷಧೀಯ ಪರಿಹಾರಗಳಿಲ್ಲದೆ ಬದುಕುವ ದನಗಳ ಹಾಲಿಗೆ ಸಮವಾದೀತೇ? ಸ್ವಲ್ಪ ಬಿಸಿಲಿಗೆ ಹೋದರೂ ಏದುಸಿರು ಬಿಡುವ ಅಥವಾ ಸೂರ್ಯಾಘಾತಕ್ಕೆ ಒಳಗೊಳ್ಳುವ ದನಗಳ ಹಾಲು ಎಂತಹ ಬಿಸಿಲನ್ನಾದರೂ ಜೀರ್ಣಿಸಿಕೊಂಡು ಮೇದು ಬರುವ ದನಗಳ ಹಾಲಿಗೆ ಸಮವಾಗಬಹುದೇ?
ದೇಸಿ ದನಗಳನ್ನು ಸಾಕಿದ ಮೇಲಿನ ಅನುಭವ ಮತ್ತೆ ಮತ್ತೆ ಅದರ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.
# ಎ.ಪಿ. ಸದಾಶಿವ ಮರಿಕೆ
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…