Advertisement
ಅನುಕ್ರಮ

ಆಧುನಿಕ ಹಾಲಿನ ಗುಣಮಟ್ಟ | ದೇಸೀ ದನಗಳ ಶ್ರೇಷ್ಟತೆ ಏನು ? | ಕೃಷಿಕ ಎ ಪಿ ಸದಾಶಿವ ಹೇಳುತ್ತಾರೆ ಇಲ್ಲಿ.. |

Share

ಆಧುನಿಕ ಹಸುಗಳ ಹಾಲು ಹಾಲಾಹಲ, ದೇಸಿ ದನಗಳ ಹಾಲು ಅಮೃತ ಸಮಾನ ಇಂತಹ ಮಾತುಗಳು ಅಲ್ಲಲ್ಲಿ ಆಗಾಗ ಲೇಖನಗಳ ಮೂಲಕ ಭಾಷಣಗಳ ಮೂಲಕ ಕೇಳಿಬರುತ್ತವೆ. ಒಂದಷ್ಟು ಜನರಿಗೆ ಇರಿಸು ಮುರುಸಾಗಿ ಆಧುನಿಕ ಹಾಲನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ. ಕಳೆದ ಐದು ವರ್ಷದ ಹಿಂದಿನ ವರೆಗೆ ನಾನು ಇದೇ ಸಮರ್ಥನೆಯನ್ನು ಮಾಡುತ್ತಿದ್ದೆ. ಯಾವಾಗ ಕೃಷಿ ಸಹಾಯಕರ ಸಮಸ್ಯೆ ತೀವ್ರವಾಯಿತೋ, ಆಗ ಹಸುಗಳ ಅನಾರೋಗ್ಯವು ಬೆಟ್ಟದಷ್ಟು ದೊಡ್ಡ ಸಮಸ್ಯೆಯಾಯಿತು.

ಆದರೆ, ನಾನು ನಂಬಿದ ಸಾವಯವ ಕೃಷಿಗೆ,ಸ್ವಾವಲಂಬಿ ಕೃಷಿಗೆ ಹಸುವಿನ ಗೊಬ್ಬರಕ್ಕೆ ಸಮಾನವಾದ ಬೇರೆ ಯಾವುದೂ ನನಗೆ ಕಂಡುಬರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ದೇಶಿ ಹಸು ಗಳನ್ನು ಸಾಕುವ ಕಡೆಗೆ ಮುಖ ಮಾಡಿದೆ. ದೇಶಿ ಹಸುಗಳ ಒಳಿತು-ಕೆಡುಕುಗಳ ಬಗ್ಗೆ ಆಧುನಿಕ ಹಸುಗಳ ಸಮಸ್ಯೆಯ ಬಗ್ಗೆ ನಾನು ಈಗಾಗಲೇ ಬರೆದಿರುತ್ತೇನೆ. ಆಧುನಿಕ ಹಾಲಿನ ಗುಣಮಟ್ಟದ ಬಗ್ಗೆ ನನ್ನ ತರ್ಕಕ್ಕೆ ನಿಲುಕಿದ ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು ಅನಿಸಿತು…

  • ತೋಟದಲ್ಲಿ ಅಡಿಕೆ ಗಿಡಗಳಿಗೆ ಬೀಜಗಳನ್ನು ಆಯ್ಕೆಮಾಡುವಾಗ ರೋಗರಹಿತ ಮರಗಳನ್ನು, ವರುಷ ವರುಷವೂ ಚೆನ್ನಾದ ಫಸಲು ಬರುವ ಮರಗಳನ್ನು, ನಡು ಪ್ರಾಯದ ಮರಗಳನ್ನು ಆಯ್ಕೆ ಮಾಡುವುದು ಯಾಕೆ?
  • ತರಕಾರಿ ಬೀಜಗಳನ್ನು ಸಂಗ್ರಹಿಸುವಾಗ ಆರಂಭದ ಫಸಲಿನ ಕಾಯಿಗಳ ಬೀಜವನ್ನು ಸಂಗ್ರಹಿಸುವುದಲ್ಲದೆ ಕೊನೆಯಲ್ಲಿ ಬಂದ,ರೋಗ ಬಂದ ಮೇಲಿನ ಬೀಜಗಳನ್ನು ಸಂಗ್ರಹಿಸುವ ಕ್ರಮ ಇದೆಯೇ?
  • ದನಕರುಗಳಲ್ಲಿಯೇ ಆಗಲಿ ಹೋರಿಯನ್ನು ಆಯ್ಕೆಮಾಡುವಾಗ ರೋಗರಹಿತ, ಉತ್ತಮ ಹಾಲು ಕೊಡುವ ದನಗಳ ಕರುಗಳನ್ನು ಆಯ್ಕೆ ಮಾಡುವುದು ಯಾಕೆ?
  • ವಧು ವರರ ಆಯ್ಕೆಮಾಡುವಾಗ ದುಶ್ಚಟಗಳಿಲ್ಲದ,ಅನುವಂಶಿಕ ಕಾಯಿಲೆಗಳು ಇಲ್ಲದ ಕುಟುಂಬವನ್ನು ಆಯ್ಕೆ ಮಾಡುವುದು ಯಾಕೆ?
  • ತಂದೆ-ತಾಯಿಗಳಿಗೆ ತೀವ್ರ ಅನಾರೋಗ್ಯ ಸಮಸ್ಯೆ ಬರುವುದಕ್ಕೆ ಮೊದಲೇ ಮಕ್ಕಳಾಗಬೇಕು ಎಂದು ಹೇಳುವುದು ಯಾಕೆ?
  • ಅತಿಯಾದ ಅಮಲು ಪದಾರ್ಥ ಸೇವಿಸಿ ಪ್ರತಿನಿತ್ಯ ಜಗಳವಾಡಿಕೊಂಡು ಬೆಳೆಯುವ ಸಂಸಾರದಲ್ಲಿ ಬೆಳೆದ ಮಕ್ಕಳು ಅದೇ ರೀತಿ ಆಗುವುದು ಯಾಕೆ?
  • ಕಲಬೆರಕೆ ಇಲ್ಲದ ಶುದ್ಧವಾದ ಆಹಾರವನ್ನು ಬಯಸುವುದು ಯಾಕೆ?

ಇಂತಹ ಹಲವಾರು ಪ್ರಶ್ನೆಗಳು ನಮ್ಮ ಮುಂದೆ ಪ್ರತಿನಿತ್ಯ ಕಾಣುತ್ತದೆ. ಅಲ್ಲೆಲ್ಲಾ ಉತ್ತಮವಾದುದನ್ನೇ ಶುದ್ಧವಾದುದನ್ನೇ ಬಯಸುವ ನಾವು ತಾಯಿ ಹಾಲಿನ ನಂತರದ ಅತ್ಯಂತ ಉತ್ಕೃಷ್ಟ ಆಹಾರವಾದ ಹಾಲಿನಲ್ಲಿ ಶುದ್ಧತೆಯನ್ನು ಪರಿಗಣಿಸಬೇಡವೇ?

ಅನುದಿನವು ಒಂದಲ್ಲ ಒಂದು ಸಮಸ್ಯೆಗಳಿಂದ( ನಾನು ಈ ಹಿಂದೆ ಬರೆದಂತೆ) ಬಳಲುವ ದನಗಳ ಹಾಲು ಯಾವುದೇ ಸಮಸ್ಯೆಗಳಿಲ್ಲದೆ, ಯಾವುದೇ ಔಷಧೀಯ ಪರಿಹಾರಗಳಿಲ್ಲದೆ ಬದುಕುವ ದನಗಳ ಹಾಲಿಗೆ ಸಮವಾದೀತೇ? ಸ್ವಲ್ಪ ಬಿಸಿಲಿಗೆ ಹೋದರೂ ಏದುಸಿರು ಬಿಡುವ ಅಥವಾ ಸೂರ್ಯಾಘಾತಕ್ಕೆ ಒಳಗೊಳ್ಳುವ ದನಗಳ ಹಾಲು ಎಂತಹ ಬಿಸಿಲನ್ನಾದರೂ ಜೀರ್ಣಿಸಿಕೊಂಡು ಮೇದು ಬರುವ ದನಗಳ ಹಾಲಿಗೆ ಸಮವಾಗಬಹುದೇ?

ದೇಸಿ ದನಗಳನ್ನು ಸಾಕಿದ ಮೇಲಿನ ಅನುಭವ ಮತ್ತೆ ಮತ್ತೆ ಅದರ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

# ಎ.ಪಿ. ಸದಾಶಿವ ಮರಿಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago