ಆಧುನಿಕ ಹಸುಗಳ ಹಾಲು ಹಾಲಾಹಲ, ದೇಸಿ ದನಗಳ ಹಾಲು ಅಮೃತ ಸಮಾನ ಇಂತಹ ಮಾತುಗಳು ಅಲ್ಲಲ್ಲಿ ಆಗಾಗ ಲೇಖನಗಳ ಮೂಲಕ ಭಾಷಣಗಳ ಮೂಲಕ ಕೇಳಿಬರುತ್ತವೆ. ಒಂದಷ್ಟು ಜನರಿಗೆ ಇರಿಸು ಮುರುಸಾಗಿ ಆಧುನಿಕ ಹಾಲನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ. ಕಳೆದ ಐದು ವರ್ಷದ ಹಿಂದಿನ ವರೆಗೆ ನಾನು ಇದೇ ಸಮರ್ಥನೆಯನ್ನು ಮಾಡುತ್ತಿದ್ದೆ. ಯಾವಾಗ ಕೃಷಿ ಸಹಾಯಕರ ಸಮಸ್ಯೆ ತೀವ್ರವಾಯಿತೋ, ಆಗ ಹಸುಗಳ ಅನಾರೋಗ್ಯವು ಬೆಟ್ಟದಷ್ಟು ದೊಡ್ಡ ಸಮಸ್ಯೆಯಾಯಿತು.
ಆದರೆ, ನಾನು ನಂಬಿದ ಸಾವಯವ ಕೃಷಿಗೆ,ಸ್ವಾವಲಂಬಿ ಕೃಷಿಗೆ ಹಸುವಿನ ಗೊಬ್ಬರಕ್ಕೆ ಸಮಾನವಾದ ಬೇರೆ ಯಾವುದೂ ನನಗೆ ಕಂಡುಬರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ದೇಶಿ ಹಸು ಗಳನ್ನು ಸಾಕುವ ಕಡೆಗೆ ಮುಖ ಮಾಡಿದೆ. ದೇಶಿ ಹಸುಗಳ ಒಳಿತು-ಕೆಡುಕುಗಳ ಬಗ್ಗೆ ಆಧುನಿಕ ಹಸುಗಳ ಸಮಸ್ಯೆಯ ಬಗ್ಗೆ ನಾನು ಈಗಾಗಲೇ ಬರೆದಿರುತ್ತೇನೆ. ಆಧುನಿಕ ಹಾಲಿನ ಗುಣಮಟ್ಟದ ಬಗ್ಗೆ ನನ್ನ ತರ್ಕಕ್ಕೆ ನಿಲುಕಿದ ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು ಅನಿಸಿತು…
ಇಂತಹ ಹಲವಾರು ಪ್ರಶ್ನೆಗಳು ನಮ್ಮ ಮುಂದೆ ಪ್ರತಿನಿತ್ಯ ಕಾಣುತ್ತದೆ. ಅಲ್ಲೆಲ್ಲಾ ಉತ್ತಮವಾದುದನ್ನೇ ಶುದ್ಧವಾದುದನ್ನೇ ಬಯಸುವ ನಾವು ತಾಯಿ ಹಾಲಿನ ನಂತರದ ಅತ್ಯಂತ ಉತ್ಕೃಷ್ಟ ಆಹಾರವಾದ ಹಾಲಿನಲ್ಲಿ ಶುದ್ಧತೆಯನ್ನು ಪರಿಗಣಿಸಬೇಡವೇ?
ಅನುದಿನವು ಒಂದಲ್ಲ ಒಂದು ಸಮಸ್ಯೆಗಳಿಂದ( ನಾನು ಈ ಹಿಂದೆ ಬರೆದಂತೆ) ಬಳಲುವ ದನಗಳ ಹಾಲು ಯಾವುದೇ ಸಮಸ್ಯೆಗಳಿಲ್ಲದೆ, ಯಾವುದೇ ಔಷಧೀಯ ಪರಿಹಾರಗಳಿಲ್ಲದೆ ಬದುಕುವ ದನಗಳ ಹಾಲಿಗೆ ಸಮವಾದೀತೇ? ಸ್ವಲ್ಪ ಬಿಸಿಲಿಗೆ ಹೋದರೂ ಏದುಸಿರು ಬಿಡುವ ಅಥವಾ ಸೂರ್ಯಾಘಾತಕ್ಕೆ ಒಳಗೊಳ್ಳುವ ದನಗಳ ಹಾಲು ಎಂತಹ ಬಿಸಿಲನ್ನಾದರೂ ಜೀರ್ಣಿಸಿಕೊಂಡು ಮೇದು ಬರುವ ದನಗಳ ಹಾಲಿಗೆ ಸಮವಾಗಬಹುದೇ?
ದೇಸಿ ದನಗಳನ್ನು ಸಾಕಿದ ಮೇಲಿನ ಅನುಭವ ಮತ್ತೆ ಮತ್ತೆ ಅದರ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.
# ಎ.ಪಿ. ಸದಾಶಿವ ಮರಿಕೆ
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…