Advertisement
ಅನುಕ್ರಮ

ಆಧುನಿಕ ಹಾಲಿನ ಗುಣಮಟ್ಟ | ದೇಸೀ ದನಗಳ ಶ್ರೇಷ್ಟತೆ ಏನು ? | ಕೃಷಿಕ ಎ ಪಿ ಸದಾಶಿವ ಹೇಳುತ್ತಾರೆ ಇಲ್ಲಿ.. |

Share

ಆಧುನಿಕ ಹಸುಗಳ ಹಾಲು ಹಾಲಾಹಲ, ದೇಸಿ ದನಗಳ ಹಾಲು ಅಮೃತ ಸಮಾನ ಇಂತಹ ಮಾತುಗಳು ಅಲ್ಲಲ್ಲಿ ಆಗಾಗ ಲೇಖನಗಳ ಮೂಲಕ ಭಾಷಣಗಳ ಮೂಲಕ ಕೇಳಿಬರುತ್ತವೆ. ಒಂದಷ್ಟು ಜನರಿಗೆ ಇರಿಸು ಮುರುಸಾಗಿ ಆಧುನಿಕ ಹಾಲನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ. ಕಳೆದ ಐದು ವರ್ಷದ ಹಿಂದಿನ ವರೆಗೆ ನಾನು ಇದೇ ಸಮರ್ಥನೆಯನ್ನು ಮಾಡುತ್ತಿದ್ದೆ. ಯಾವಾಗ ಕೃಷಿ ಸಹಾಯಕರ ಸಮಸ್ಯೆ ತೀವ್ರವಾಯಿತೋ, ಆಗ ಹಸುಗಳ ಅನಾರೋಗ್ಯವು ಬೆಟ್ಟದಷ್ಟು ದೊಡ್ಡ ಸಮಸ್ಯೆಯಾಯಿತು.

ಆದರೆ, ನಾನು ನಂಬಿದ ಸಾವಯವ ಕೃಷಿಗೆ,ಸ್ವಾವಲಂಬಿ ಕೃಷಿಗೆ ಹಸುವಿನ ಗೊಬ್ಬರಕ್ಕೆ ಸಮಾನವಾದ ಬೇರೆ ಯಾವುದೂ ನನಗೆ ಕಂಡುಬರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ದೇಶಿ ಹಸು ಗಳನ್ನು ಸಾಕುವ ಕಡೆಗೆ ಮುಖ ಮಾಡಿದೆ. ದೇಶಿ ಹಸುಗಳ ಒಳಿತು-ಕೆಡುಕುಗಳ ಬಗ್ಗೆ ಆಧುನಿಕ ಹಸುಗಳ ಸಮಸ್ಯೆಯ ಬಗ್ಗೆ ನಾನು ಈಗಾಗಲೇ ಬರೆದಿರುತ್ತೇನೆ. ಆಧುನಿಕ ಹಾಲಿನ ಗುಣಮಟ್ಟದ ಬಗ್ಗೆ ನನ್ನ ತರ್ಕಕ್ಕೆ ನಿಲುಕಿದ ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು ಅನಿಸಿತು…

  • ತೋಟದಲ್ಲಿ ಅಡಿಕೆ ಗಿಡಗಳಿಗೆ ಬೀಜಗಳನ್ನು ಆಯ್ಕೆಮಾಡುವಾಗ ರೋಗರಹಿತ ಮರಗಳನ್ನು, ವರುಷ ವರುಷವೂ ಚೆನ್ನಾದ ಫಸಲು ಬರುವ ಮರಗಳನ್ನು, ನಡು ಪ್ರಾಯದ ಮರಗಳನ್ನು ಆಯ್ಕೆ ಮಾಡುವುದು ಯಾಕೆ?
  • ತರಕಾರಿ ಬೀಜಗಳನ್ನು ಸಂಗ್ರಹಿಸುವಾಗ ಆರಂಭದ ಫಸಲಿನ ಕಾಯಿಗಳ ಬೀಜವನ್ನು ಸಂಗ್ರಹಿಸುವುದಲ್ಲದೆ ಕೊನೆಯಲ್ಲಿ ಬಂದ,ರೋಗ ಬಂದ ಮೇಲಿನ ಬೀಜಗಳನ್ನು ಸಂಗ್ರಹಿಸುವ ಕ್ರಮ ಇದೆಯೇ?
  • ದನಕರುಗಳಲ್ಲಿಯೇ ಆಗಲಿ ಹೋರಿಯನ್ನು ಆಯ್ಕೆಮಾಡುವಾಗ ರೋಗರಹಿತ, ಉತ್ತಮ ಹಾಲು ಕೊಡುವ ದನಗಳ ಕರುಗಳನ್ನು ಆಯ್ಕೆ ಮಾಡುವುದು ಯಾಕೆ?
  • ವಧು ವರರ ಆಯ್ಕೆಮಾಡುವಾಗ ದುಶ್ಚಟಗಳಿಲ್ಲದ,ಅನುವಂಶಿಕ ಕಾಯಿಲೆಗಳು ಇಲ್ಲದ ಕುಟುಂಬವನ್ನು ಆಯ್ಕೆ ಮಾಡುವುದು ಯಾಕೆ?
  • ತಂದೆ-ತಾಯಿಗಳಿಗೆ ತೀವ್ರ ಅನಾರೋಗ್ಯ ಸಮಸ್ಯೆ ಬರುವುದಕ್ಕೆ ಮೊದಲೇ ಮಕ್ಕಳಾಗಬೇಕು ಎಂದು ಹೇಳುವುದು ಯಾಕೆ?
  • ಅತಿಯಾದ ಅಮಲು ಪದಾರ್ಥ ಸೇವಿಸಿ ಪ್ರತಿನಿತ್ಯ ಜಗಳವಾಡಿಕೊಂಡು ಬೆಳೆಯುವ ಸಂಸಾರದಲ್ಲಿ ಬೆಳೆದ ಮಕ್ಕಳು ಅದೇ ರೀತಿ ಆಗುವುದು ಯಾಕೆ?
  • ಕಲಬೆರಕೆ ಇಲ್ಲದ ಶುದ್ಧವಾದ ಆಹಾರವನ್ನು ಬಯಸುವುದು ಯಾಕೆ?

ಇಂತಹ ಹಲವಾರು ಪ್ರಶ್ನೆಗಳು ನಮ್ಮ ಮುಂದೆ ಪ್ರತಿನಿತ್ಯ ಕಾಣುತ್ತದೆ. ಅಲ್ಲೆಲ್ಲಾ ಉತ್ತಮವಾದುದನ್ನೇ ಶುದ್ಧವಾದುದನ್ನೇ ಬಯಸುವ ನಾವು ತಾಯಿ ಹಾಲಿನ ನಂತರದ ಅತ್ಯಂತ ಉತ್ಕೃಷ್ಟ ಆಹಾರವಾದ ಹಾಲಿನಲ್ಲಿ ಶುದ್ಧತೆಯನ್ನು ಪರಿಗಣಿಸಬೇಡವೇ?

ಅನುದಿನವು ಒಂದಲ್ಲ ಒಂದು ಸಮಸ್ಯೆಗಳಿಂದ( ನಾನು ಈ ಹಿಂದೆ ಬರೆದಂತೆ) ಬಳಲುವ ದನಗಳ ಹಾಲು ಯಾವುದೇ ಸಮಸ್ಯೆಗಳಿಲ್ಲದೆ, ಯಾವುದೇ ಔಷಧೀಯ ಪರಿಹಾರಗಳಿಲ್ಲದೆ ಬದುಕುವ ದನಗಳ ಹಾಲಿಗೆ ಸಮವಾದೀತೇ? ಸ್ವಲ್ಪ ಬಿಸಿಲಿಗೆ ಹೋದರೂ ಏದುಸಿರು ಬಿಡುವ ಅಥವಾ ಸೂರ್ಯಾಘಾತಕ್ಕೆ ಒಳಗೊಳ್ಳುವ ದನಗಳ ಹಾಲು ಎಂತಹ ಬಿಸಿಲನ್ನಾದರೂ ಜೀರ್ಣಿಸಿಕೊಂಡು ಮೇದು ಬರುವ ದನಗಳ ಹಾಲಿಗೆ ಸಮವಾಗಬಹುದೇ?

ದೇಸಿ ದನಗಳನ್ನು ಸಾಕಿದ ಮೇಲಿನ ಅನುಭವ ಮತ್ತೆ ಮತ್ತೆ ಅದರ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

# ಎ.ಪಿ. ಸದಾಶಿವ ಮರಿಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

11 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

16 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

16 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

19 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

19 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

20 hours ago