ಆಧುನಿಕ ಹಸುಗಳ ಹಾಲು ಹಾಲಾಹಲ, ದೇಸಿ ದನಗಳ ಹಾಲು ಅಮೃತ ಸಮಾನ ಇಂತಹ ಮಾತುಗಳು ಅಲ್ಲಲ್ಲಿ ಆಗಾಗ ಲೇಖನಗಳ ಮೂಲಕ ಭಾಷಣಗಳ ಮೂಲಕ ಕೇಳಿಬರುತ್ತವೆ. ಒಂದಷ್ಟು ಜನರಿಗೆ ಇರಿಸು ಮುರುಸಾಗಿ ಆಧುನಿಕ ಹಾಲನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ. ಕಳೆದ ಐದು ವರ್ಷದ ಹಿಂದಿನ ವರೆಗೆ ನಾನು ಇದೇ ಸಮರ್ಥನೆಯನ್ನು ಮಾಡುತ್ತಿದ್ದೆ. ಯಾವಾಗ ಕೃಷಿ ಸಹಾಯಕರ ಸಮಸ್ಯೆ ತೀವ್ರವಾಯಿತೋ, ಆಗ ಹಸುಗಳ ಅನಾರೋಗ್ಯವು ಬೆಟ್ಟದಷ್ಟು ದೊಡ್ಡ ಸಮಸ್ಯೆಯಾಯಿತು.
ಆದರೆ, ನಾನು ನಂಬಿದ ಸಾವಯವ ಕೃಷಿಗೆ,ಸ್ವಾವಲಂಬಿ ಕೃಷಿಗೆ ಹಸುವಿನ ಗೊಬ್ಬರಕ್ಕೆ ಸಮಾನವಾದ ಬೇರೆ ಯಾವುದೂ ನನಗೆ ಕಂಡುಬರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ದೇಶಿ ಹಸು ಗಳನ್ನು ಸಾಕುವ ಕಡೆಗೆ ಮುಖ ಮಾಡಿದೆ. ದೇಶಿ ಹಸುಗಳ ಒಳಿತು-ಕೆಡುಕುಗಳ ಬಗ್ಗೆ ಆಧುನಿಕ ಹಸುಗಳ ಸಮಸ್ಯೆಯ ಬಗ್ಗೆ ನಾನು ಈಗಾಗಲೇ ಬರೆದಿರುತ್ತೇನೆ. ಆಧುನಿಕ ಹಾಲಿನ ಗುಣಮಟ್ಟದ ಬಗ್ಗೆ ನನ್ನ ತರ್ಕಕ್ಕೆ ನಿಲುಕಿದ ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು ಅನಿಸಿತು…
ಇಂತಹ ಹಲವಾರು ಪ್ರಶ್ನೆಗಳು ನಮ್ಮ ಮುಂದೆ ಪ್ರತಿನಿತ್ಯ ಕಾಣುತ್ತದೆ. ಅಲ್ಲೆಲ್ಲಾ ಉತ್ತಮವಾದುದನ್ನೇ ಶುದ್ಧವಾದುದನ್ನೇ ಬಯಸುವ ನಾವು ತಾಯಿ ಹಾಲಿನ ನಂತರದ ಅತ್ಯಂತ ಉತ್ಕೃಷ್ಟ ಆಹಾರವಾದ ಹಾಲಿನಲ್ಲಿ ಶುದ್ಧತೆಯನ್ನು ಪರಿಗಣಿಸಬೇಡವೇ?
ಅನುದಿನವು ಒಂದಲ್ಲ ಒಂದು ಸಮಸ್ಯೆಗಳಿಂದ( ನಾನು ಈ ಹಿಂದೆ ಬರೆದಂತೆ) ಬಳಲುವ ದನಗಳ ಹಾಲು ಯಾವುದೇ ಸಮಸ್ಯೆಗಳಿಲ್ಲದೆ, ಯಾವುದೇ ಔಷಧೀಯ ಪರಿಹಾರಗಳಿಲ್ಲದೆ ಬದುಕುವ ದನಗಳ ಹಾಲಿಗೆ ಸಮವಾದೀತೇ? ಸ್ವಲ್ಪ ಬಿಸಿಲಿಗೆ ಹೋದರೂ ಏದುಸಿರು ಬಿಡುವ ಅಥವಾ ಸೂರ್ಯಾಘಾತಕ್ಕೆ ಒಳಗೊಳ್ಳುವ ದನಗಳ ಹಾಲು ಎಂತಹ ಬಿಸಿಲನ್ನಾದರೂ ಜೀರ್ಣಿಸಿಕೊಂಡು ಮೇದು ಬರುವ ದನಗಳ ಹಾಲಿಗೆ ಸಮವಾಗಬಹುದೇ?
ದೇಸಿ ದನಗಳನ್ನು ಸಾಕಿದ ಮೇಲಿನ ಅನುಭವ ಮತ್ತೆ ಮತ್ತೆ ಅದರ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.
# ಎ.ಪಿ. ಸದಾಶಿವ ಮರಿಕೆ
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…