ಅಬ್ಬಬ್ಬಾ ಎಂತಹಾ ಮಳೆ ಎಂಬ ಸದ್ದಿನ ಹಿಂದೆ…..! ಕೃಷಿಕ ಎ ಪಿ ಸದಾಶಿವ ಅವರ ಸಮೀಕರಣ ಹೀಗಿದೆ…

November 14, 2021
2:29 PM

ಅಬ್ಬಬ್ಬಾ ಎಂತಹ ಮಳೆ…..
ತೋಯ್ದು ಹೋಯಿತು ಇಳೆ….
ಹಾಳಾಯ್ತು ನನ್ನ ಅಡಿಕೆ ಬೆಳೆ….
ಹೇಗಪ್ಪ ನಮ್ಮ ಪಾಡು ನಾಳೆ….

Advertisement
Advertisement

…. ಇಂತಹ ಮಾತುಗಳು ಎಲ್ಲಾ ಕೃಷಿಕರ ಬಾಯಿಯಲ್ಲಿ , ದೃಶ್ಯಮಾಧ್ಯಮಗಳಲ್ಲಿ, ದಿನಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಮಳೆಗಿಂತ ಜೋರಾಗಿ ಹರಿದು ಬರುವುದನ್ನು ಕಾಣುತ್ತಿದ್ದೇವೆ. ಓರ್ವ ಅಡಿಕೆ ಬೆಳೆಗಾರನಾಗಿ, ಭತ್ತದ ಬೆಳೆಗಾರನಾಗಿ ನನ್ನದೊಂದು ಸಣ್ಣ ವಿಶ್ಲೇಷಣೆ ಮಾತ್ರ. ನನ್ನಲ್ಲಿ ಮಳೆಮಾಪನದ ಯಾವುದೇ ದಾಖಲೆಗಳಿಲ್ಲ. ಪ್ರತಿವರ್ಷದ ಅನುಭವದ ಆಧಾರಗಳಿಂದ ಮಾತ್ರ ನನ್ನ ಮಾತುಗಳು. ಹೊಸ ವೈದ್ಯನಿಗಿಂತ ಹಳೆಯ ರೋಗಿಗೆ ಅನುಭವ ಜಾಸ್ತಿ ಅಂತೆ. 40 ವರ್ಷಗಳ ನಿರಂತರ ಅಡಿಕೆ ಮತ್ತು ಗದ್ದೆ ಬೇಸಾಯ ಮಾಡಿದಾಗ ಕೊಡುತ್ತಿದ್ದ ಮಳೆಯ ಅನುಭವಗಳನ್ನು ಮುಂದಿನ ಸಾಲಿನಲ್ಲಿ ವಿವರಿಸುತ್ತಿದ್ದೇನೆ.

ಸೆಪ್ಟೆಂಬರ್ 10-15 ತಾರೀಕಿನ ಅಂದಾಜಿಗೆ ಮುಂಗಾರು ಮುಗಿದು ಮತ್ತೊಂದು ಹದಿನೈದು-ಇಪ್ಪತ್ತು ದಿನ ಒಳ್ಳೆಯ ಬಿಸಿಲು ಕಾದು ಆ ನಂತರ ಗುಡುಗುಡು ಗುಮ್ಮಟ ದೇವರೊಂದಿಗೆ ಹಿಂಗಾರು ಮಳೆ ಅಕ್ಟೋಬರ ತಿಂಗಳ ಮಧ್ಯಭಾಗದಿಂದ ಆರಂಭ. ಸುಮಾರು ನವಂಬರ್ 15 -20 ನೇ ತಾರೀಕಿನವರೆಗೆ ಇದು ಮುಂದುವರಿಯುತ್ತದೆ .ನಂತರ ಡಿಸೆಂಬರ್ ಮಧ್ಯಭಾಗದವರೆಗೂ ಆಗೊಂದು ಈಗೊಂದು ಮಳೆ ಬರುವುದು ನನ್ನ ಅನುಭವದಲ್ಲಿ ವಾಡಿಕೆ. ಅಕ್ಟೋಬರ್ ಬಂದಂತೆ ಹಣ್ಣಡಿಕೆ ಉದುರುವುದು, ಗದ್ದೆ ಕೊಯ್ಯಲು ಆರಂಭವಾಗುವುದು ಎಲ್ಲವೂ ಒಟ್ಟೊಟ್ಟಿಗೆ. ಹಣ್ಣಡಿಕೆ ಹೊಗೆ ಗಂಡಿ, ಮನೆ ಅಟ್ಟ ಎಲ್ಲ ತುಂಬಿ ಅಂಗಳದಲ್ಲಿ ಕೊಳೆತು ನಾರುತ್ತಿರುತ್ತದೆ. ಕೊಳೆತಾಗ ಬರುವ ನುಸಿ ( ಕೌಳಿ)ಮನೆಯೊಳಗೂ ತುಂಬಿ ಬಿಡುತ್ತದೆ. ಬಿಸಿಲು ಬಂದಂತೆ ಒಣಗಿ ಸಿಪ್ಪೆ ಹಾಳಾದಂತೆ ಕಂಡರೂ ಒಳಗಿನ ಅಡಿಕೆಯ ಗುಣಮಟ್ಟ ತಕ್ಕಮಟ್ಟಿಗೆ ಚೆನ್ನಾಗಿ ಇರುತ್ತಿತ್ತು. ಉತ್ತಮ ಅಡಿಕೆಯ ಮಾರುಕಟ್ಟೆ ದಾರಣೆಗಿಂತ 2 ಯಾ 3 ರೂಪಾಯಿಯಷ್ಟು ಹಿಂದಿನ ಧಾರಣೆ ಸಿಗುತ್ತಿತ್ತು.

ಭತ್ತದ ಗದ್ದೆಯ ಪೈರು ಒಣಗಿದಂತೆ ಅಂಗಳ ತಯಾರು ಮಾಡುವ ಕೆಲಸ ಜೋರಾಗಿ ಆರಂಭ. 4-5 ಆಳುಗಳು ಗುದ್ದು ಮಣೆಯನ್ನು ಹಿಡಿದು ಕಲ್ಲೆದ್ದ ಅಂಗಳವನ್ನು ಮತ್ತೆ ಮಟ್ಟಸ ಮಾಡುವುದು, ನಂತರ ಸೆಗಣಿ ಸಾರಿಸಿ ಕಲ್ಲು ಮಣ್ಣು ಬಾರದಂತೆ ತಯಾರಿ ಮಾಡಿ ಪೈರಿನ ಆಹ್ವಾನಕ್ಕೆ ಸಿದ್ಧತೆ ನಡೆಯುತ್ತಿತ್ತು. ಎಲ್ಲ ತಯಾರಿ ಆದಂತೆ ಗುಡುಗುಡು ಗುಮ್ಮಟ ದೇವನಿಗೆ ಅದೆಂತು ಗೊತ್ತಾಗುತ್ತಿತ್ತೊ,ಧಾರಾಕಾರ ಮಳೆ ಬಂದು ತಯಾರು ಪೂರ ನೀರ ಮೇಲಿನ ಹೋಮದಂತೆ ಆಗುವುದು. ಆಮೇಲೆ ಮನೆಯ ಸಣ್ಣ ಕೊಟ್ಟಿಗೆಯ ಜಾಗಕ್ಕೆ ಅದೆಂತೋ ಗೋಣಿಗಳನ್ನು ಕಟ್ಟಿ ಅವ್ಯವಸ್ಥೆಯಲ್ಲಿ ಒಂದುಮಟ್ಟದ ವ್ಯವಸ್ಥೆ ಮಾಡಿಕೊಂಡು ಭತ್ತ ಬಿಡಿಸುವ ಕಾರ್ಯ. ಮಧ್ಯಾಹ್ನ 2 ಗಂಟೆ ಆಗಬೇಕಾದರೆ ಮಳೆ ಸುರುವಾದರೆ ನೆನೆದ ಭತ್ತದ ಪೈರನ್ನು ಹೊತ್ತು ತಂದು ಬಿಡಿಸಿ ಎಲ್ಲೆಂದರಲ್ಲಿ ಹರಡಿ ಒಣಗಿಸುವ ಪ್ರಯತ್ನ. ಮೋಡಮುಸುಕಿದ ವಾತಾವರಣವಿದ್ದರೆ ಒಂದಿನಿತೂ ಒಣಗದೆ ಹರಡಿದಲ್ಲಿಯೇ ಮೊಳಕೆ ಬಂದು ಗುಣಮಟ್ಟ ಹಾಳಾಗುವುದು ಮಾಮೂಲಾಗಿತ್ತು.

ಒಂದೊಂದು ವರುಷ ಅತಿಯಾದ ಮಳೆಯಿಂದಾಗಿ ಬೆಳೆದು ನಿಂತ ಭತ್ತದ ಪೈರು ಕೆಸರು ನೀರಿನಿಂದ ಮುಳುಗಿ ಹಾಳಾಗುವ ಕ್ರಮವೂ ಇತ್ತು. ಆಗೆಲ್ಲಾ ತಾಡಪತ್ರಗಳ( ಟಾರ್ಪಾಲ್) ವ್ಯವಸ್ಥೆ ಇರಲಿಲ್ಲ. ಅಂತೂ ಇಂತೂ ಕೊಯಿದ ಭತ್ತ ಒಣಗಲು ಒಂದು ತಿಂಗಳ ಕಾಲ ಕಾಯಬೇಕಾಗುತ್ತಿತ್ತು. ಈ ಸಮಯದಲ್ಲಿ ಇಲಿ ಹೆಗ್ಗಣಗಳು ತಮ್ಮ ಪಾಲನ್ನು ಆರಾಮದಲ್ಲಿಯೇ ಕಬಳಿಸುತ್ತಿದ್ದವು. ಇಷ್ಟೆಲ್ಲಾ ಕಷ್ಟಪಟ್ಟು ಮಾಡಿದ ಭತ್ತದ ಅಕ್ಕಿಯಲ್ಲಿ ಊಟ ಮಾಡುವಾಗ ಅಲ್ಲಲ್ಲಿ ಕಲ್ಲು ಸಿಗುವುದು ಮಾಮೂಲಿ ಇರುತ್ತಿತ್ತು. ಕೊಯಿದ ಭತ್ತದ ಹುಲ್ಲನ್ನು ಚೆನ್ನಾಗಿ ಅಟ್ಟಿ ಕಟ್ಟಿ ಹುಲ್ಲಿನಿಂದಲೇ ಮಾಡು ಮಾಡಿ ಒಣಗಿಸಲೋಸುಗ ಬಿಸಿಲನ್ನು ಕಾಯುತ್ತಿದ್ದೆವು. ಅಂತೂ ಇಂತೂ ಬಿಸಿಲು ಬರುವಾಗ ಹುಲ್ಲೆಲ್ಲಾ ಕೊಳೆತು ಕಪ್ಪಾಗಿ ತಿಂದ ದನಗಳು ಭೇದಿ ಮಾಡುವುದು ಕೂಡ ಮಾಮೂಲಿ.

ಹೀಗಿದ್ದ ನಮಗೆ ಕೆಲವು ವರ್ಷಗಳಿಂದ ಮಳೆ ಕಡಿಮೆ ಇದ್ದು ಅಭ್ಯಾಸವಾಗಿ, ಈ ವರ್ಷದ ಮಳೆ ಅತಿ ಎಂದು ಅನಿಸುತ್ತದೆ. ಗದ್ದೆ ಬೇಸಾಯ ಬಿಟ್ಟುದರಿಂದಾಗಿ ಕಷ್ಟದ ಅರಿವು ಇಂದು ಮರೆತುಹೋಗಿದೆ. (ಕಾರಿನಲ್ಲಿ ಪಯಣಿಸಿ ಅಭ್ಯಾಸವಾದವಗೆ ಬೈಕಿನಲ್ಲಿ ಪಯಣಿಸಿದಂತೆ) ಬಿಸಿಲು ಮನೆಗಳು, ತಾಡಪತ್ರಗಳು ಇರುವ ಈ ಕಾಲದಲ್ಲಿ ಅಡಿಕೆಗಂತೂ ಮಳೆ ಅತೀ ಎಂದು ನನಗನಿಸುವುದಿಲ್ಲ. ಮುಂದಿನ ಬೇಸಿಗೆಗೆ ಇದು ವರವೇ ಇರಬಹುದು.

ಮೊದಲಿಗಿಂತ ಹೆಚ್ಚು ಅನುಕೂಲವಿದ್ದರೂ ಗದ್ದೆ ಬೇಸಾಯಗಾರರಿಗೆ ಇದು ಇಂದು ಕೂಡ ಸಮಸ್ಯೆಯೇ (ಕಷ್ಟಗಳನ್ನು ಉಂಡವನಿಗೆ ಮಾತ್ರ ಸುಖದ ಅರಿವು ಆಗುವುದು). ಪ್ರಕೃತಿ ಕೊಟ್ಟ ಮಳೆಯನ್ನು ವರವಾಗಿ ಸ್ವೀಕರಿಸೋಣ.

# ಎ.ಪಿ.ಸದಾಶಿವ, ಮರಿಕೆ

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ಪ್ರಮುಖ ಸುದ್ದಿ

MIRROR FOCUS

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಮನ ಗೆಲ್ಲುವ ಮಾವಿನ ಹಣ್ಣುಗಳು
June 3, 2025
9:45 PM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು
June 3, 2025
9:27 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group