ಅಂಬಾನಿ ಪುತ್ರನ ಪ್ರೀವೆಡ್ಡಿಂಗ್‌ ಫೋಟೋಗ್ರಾಫರ್‌ ವಿವೇಕ ಗೌಡರ ಪ್ರವಾಸದ ಚಿತ್ರ ಪ್ರದರ್ಶನ ಪುತ್ತೂರಿನಲ್ಲಿ | ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಮನ ಸೆಳೆವ ಚಿತ್ರಗಳು ಇವೆ ಬನ್ನಿ |

April 10, 2024
10:38 AM
ಫೋಟೊಗ್ರಾಫರ್‌ ವಿವೇಕ್ ಗೌಡ ಅವರು ತೆಗೆದಿರುವ ಛಾಯಾಚಿತ್ರ ಪ್ರದರ್ಶನ ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ನಡೆಯುತ್ತಿದೆ. ಏಪ್ರಿಲ್ 28ರವರೆಗೆ ಚಿತ್ರ ಪ್ರದರ್ಶನ ನಡೆಯಲಿದೆ.

ದೇಶದೆಲ್ಲೆಡೆ  ಈಗ ಸದ್ದು ಮಾಡಿದ  ಸುದ್ದಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರನ  ಪ್ರೀವೆಡ್ಡಿಂಗ್‌ ಕಾರ್ಯಕ್ರಮ‌. ಆದರೆ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ  ಪ್ರೀವೆಡ್ಡಿಂಗ್‌, ಮದುವೆ ಮಹೋತ್ಸವ ಕಾರ್ಯಕ್ರಮವೂ ಹಾಗೇ ಸದ್ದು ಮಾಡಿತ್ತು, ಅಂದು ಫೋಟೋಗ್ರಾಫರ್ ಆಗಿ ತೆರಳಿದ್ದ ಮಂಗಳೂರಿನ ವಿವೇಕ್‌ ಗೌಡ ಅವರು ಪರಿಸರ, ಪ್ರಯಾಣ ಸೇರಿದಂತೆ ಇತರ ಆಸಕ್ತಿಯನ್ನೂ ಹೊಂದಿದ್ದಾರೆ. ಅವರು ಕ್ಲಿಕ್ಕಿಸಿರುವ ವಿವಿಧ ಛಾಯಾಚಿತ್ರಗಳ ಪ್ರದರ್ಶನ ಪುತ್ತೂರಿನ ಪರ್ಪುಂಜದಲ್ಲಿರುವ ಸೌಗಂಧಿಕಾ ನರ್ಸರಿಯಲ್ಲಿ  ಛಾಯಾಚಿತ್ರ ಪ್ರದರ್ಶನ ” ಜರ್ನಿ” ಆರಂಭಗೊಂಡಿದೆ.

Advertisement

ಯುಗಾದಿ ಆಚರಣೆಯೊಂದಿಗೆ ಮಂಗಳವಾರ ಸಂಜೆ ಚಿತ್ರ ಪ್ರದರ್ಶನ ಉದ್ಘಾಟನೆಗೊಂಡಿತು.ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಪರಿಸರವಾದಿ ಹೋರಾಟಗಾರ ಕಲಾವಿದ ದಿನೇಶ ಹೊಳ್ಳ ಮತ್ತು ಶಶಿಧರ ಶೆಟ್ಟಿ ಜನಪರ ಹೋರಾಟಗಾರ ಮಂಗಳೂರು ಮತ್ತು ಉರಗ ರಕ್ಷಕ ಕಿರಣ ಉದ್ಘಾಟಿಸಿದರು.

Advertisement

ಚಿತ್ರ ಕಲಾವಿದ ಮತ್ತು ಪರಿಸರವಾದಿ ದಿನೇಶ ಹೊಳ್ಳ ಮಾತನಾಡಿ,  ಮಾನವರು ಸಹಜವಾಗಿ ಪರಿಸರ ದೊಂದಗಿನ ಒಡನಾಟದೊಂದಿಗೆ ಜೀವಿಸುವ ಮಹತ್ವದ ಕುರಿತು ಮಾತನಾಡಿದರು. ವಿವೇಕರ ಛಾಯಾಚಿತ್ರಗಳಲ್ಲಿ ಜೀವನ ಪ್ರೀತಿ ತುಂಬಿದೆ ಎಂದು ಶುಭ ಹಾರೈಸಿದರು.

Advertisement

ಅತಿಥಿ ಶಶಿಧರ ಶೆಟ್ಟಿ ಮಾತನಾಡಿ ಸೌಗಂಧಿಕಾ ಪರಿಸರದಲ್ಲಿ ಇಂತಹ ಉತ್ತಮ ಕಾರ್ಯಕ್ರಮಗಳು ಪರಿಸರಸ್ನೇಹಿ ಚಟುವಟಿಕೆಗಳು ನಡೆಯುತ್ತಿರಲಿ ಎಂದರು. ಪರಿಸರದ, ಸಮಾಜದ ನಡುವಿನ ಫೋಟೊಗಳ ಜೊತೆ ಮಾತನಾಡುವ ಮನಸುಗಳನ್ನು ನಾವು ಬೆಳೆಸಿಕೊಳ್ಳಬೇಕು ಎಂದರು.

ಉರಗ ತಜ್ಞ ಕಿರಣ್ ನಮ್ಮ ಸುತ್ತಮುತ್ತಲಿನ ಹಾವುಗಳ ಬಗ್ಗೆ  ಮಾಹಿತಿಗಳನ್ನು ನೀಡಿದರು. ಸುನಿಲ್ ಅತ್ತಾವರ ಹಾಡಿರುವ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.  ಚಂದ್ರ ಸೌಗಂಧಿಕಾ ಪ್ರಸ್ತಾವನೆ ಮಾಡಿದರು. ಹರೀಶ್ ರಾಜಕುಮಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸೌಗಂಧಿಕಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವು ಏಪ್ರಿಲ್ 28ರಂದು ಕೊನೆಯಾಗಲಿದೆ. ಆಸಕ್ತರು ಬಂದು ವೀಕ್ಷಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

ವಿವೇಕ್‌ ಗೌಡ ಅವರು ಪ್ರವಾಸ ಪ್ರಿಯರೂ ಹೌದು, ಪರಿಸರ ಪ್ರೇಮಿಯೂ ಹೌದು. ಮಾನವೀಯ ಮೌಲ್ಯಗಳನ್ನು ತಿಳಿಸುವ ಫೋಟೊಗಳನ್ನು ತೆಗೆದಿರುವ ವಿವೇಕ್‌ ಅವರು ಫೋಟೋಗ್ರಫಿಗಾಗಿಯೇ ದೇಶದ ವಿವಿದೆಡೆ ಸುತ್ತಾಡಿದ್ದಾರೆ. ಮಂಗಳೂರಿನಲ್ಲಿರುವ ವಿವೇಕ್‌ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಮುಖರ ಫೋಟೊಗ್ರಫಿಯಲ್ಲೂ ಭಾಗಿಯಾಗಿದ್ದಾರೆ.

ಪರಿಸರದ ಒಡನಾಟವು ಹೆಚ್ಚು ಖುಷಿ ನೀಡುತ್ತದೆ ಎನ್ನುವ ವಿವೇಕ ಗೌಡ, ಉದ್ಯೋಗ ಹಾಗೂ ಆಸಕ್ತಿ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಆಸಕ್ತಿಗಳು ಹೆಚ್ಚು ಖುಷಿ ನೀಡುತ್ತವೆ ಎನ್ನುತ್ತಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group