MIRROR FOCUS

ಅಂಬಾನಿ ಪುತ್ರನ ಪ್ರೀವೆಡ್ಡಿಂಗ್‌ ಫೋಟೋಗ್ರಾಫರ್‌ ವಿವೇಕ ಗೌಡರ ಪ್ರವಾಸದ ಚಿತ್ರ ಪ್ರದರ್ಶನ ಪುತ್ತೂರಿನಲ್ಲಿ | ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಮನ ಸೆಳೆವ ಚಿತ್ರಗಳು ಇವೆ ಬನ್ನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದೆಲ್ಲೆಡೆ  ಈಗ ಸದ್ದು ಮಾಡಿದ  ಸುದ್ದಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರನ  ಪ್ರೀವೆಡ್ಡಿಂಗ್‌ ಕಾರ್ಯಕ್ರಮ‌. ಆದರೆ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ  ಪ್ರೀವೆಡ್ಡಿಂಗ್‌, ಮದುವೆ ಮಹೋತ್ಸವ ಕಾರ್ಯಕ್ರಮವೂ ಹಾಗೇ ಸದ್ದು ಮಾಡಿತ್ತು, ಅಂದು ಫೋಟೋಗ್ರಾಫರ್ ಆಗಿ ತೆರಳಿದ್ದ ಮಂಗಳೂರಿನ ವಿವೇಕ್‌ ಗೌಡ ಅವರು ಪರಿಸರ, ಪ್ರಯಾಣ ಸೇರಿದಂತೆ ಇತರ ಆಸಕ್ತಿಯನ್ನೂ ಹೊಂದಿದ್ದಾರೆ. ಅವರು ಕ್ಲಿಕ್ಕಿಸಿರುವ ವಿವಿಧ ಛಾಯಾಚಿತ್ರಗಳ ಪ್ರದರ್ಶನ ಪುತ್ತೂರಿನ ಪರ್ಪುಂಜದಲ್ಲಿರುವ ಸೌಗಂಧಿಕಾ ನರ್ಸರಿಯಲ್ಲಿ  ಛಾಯಾಚಿತ್ರ ಪ್ರದರ್ಶನ ” ಜರ್ನಿ” ಆರಂಭಗೊಂಡಿದೆ.

Advertisement

ಯುಗಾದಿ ಆಚರಣೆಯೊಂದಿಗೆ ಮಂಗಳವಾರ ಸಂಜೆ ಚಿತ್ರ ಪ್ರದರ್ಶನ ಉದ್ಘಾಟನೆಗೊಂಡಿತು.ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಪರಿಸರವಾದಿ ಹೋರಾಟಗಾರ ಕಲಾವಿದ ದಿನೇಶ ಹೊಳ್ಳ ಮತ್ತು ಶಶಿಧರ ಶೆಟ್ಟಿ ಜನಪರ ಹೋರಾಟಗಾರ ಮಂಗಳೂರು ಮತ್ತು ಉರಗ ರಕ್ಷಕ ಕಿರಣ ಉದ್ಘಾಟಿಸಿದರು.

ಚಿತ್ರ ಕಲಾವಿದ ಮತ್ತು ಪರಿಸರವಾದಿ ದಿನೇಶ ಹೊಳ್ಳ ಮಾತನಾಡಿ,  ಮಾನವರು ಸಹಜವಾಗಿ ಪರಿಸರ ದೊಂದಗಿನ ಒಡನಾಟದೊಂದಿಗೆ ಜೀವಿಸುವ ಮಹತ್ವದ ಕುರಿತು ಮಾತನಾಡಿದರು. ವಿವೇಕರ ಛಾಯಾಚಿತ್ರಗಳಲ್ಲಿ ಜೀವನ ಪ್ರೀತಿ ತುಂಬಿದೆ ಎಂದು ಶುಭ ಹಾರೈಸಿದರು.

Advertisement

ಅತಿಥಿ ಶಶಿಧರ ಶೆಟ್ಟಿ ಮಾತನಾಡಿ ಸೌಗಂಧಿಕಾ ಪರಿಸರದಲ್ಲಿ ಇಂತಹ ಉತ್ತಮ ಕಾರ್ಯಕ್ರಮಗಳು ಪರಿಸರಸ್ನೇಹಿ ಚಟುವಟಿಕೆಗಳು ನಡೆಯುತ್ತಿರಲಿ ಎಂದರು. ಪರಿಸರದ, ಸಮಾಜದ ನಡುವಿನ ಫೋಟೊಗಳ ಜೊತೆ ಮಾತನಾಡುವ ಮನಸುಗಳನ್ನು ನಾವು ಬೆಳೆಸಿಕೊಳ್ಳಬೇಕು ಎಂದರು.

ಉರಗ ತಜ್ಞ ಕಿರಣ್ ನಮ್ಮ ಸುತ್ತಮುತ್ತಲಿನ ಹಾವುಗಳ ಬಗ್ಗೆ  ಮಾಹಿತಿಗಳನ್ನು ನೀಡಿದರು. ಸುನಿಲ್ ಅತ್ತಾವರ ಹಾಡಿರುವ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.  ಚಂದ್ರ ಸೌಗಂಧಿಕಾ ಪ್ರಸ್ತಾವನೆ ಮಾಡಿದರು. ಹರೀಶ್ ರಾಜಕುಮಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸೌಗಂಧಿಕಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವು ಏಪ್ರಿಲ್ 28ರಂದು ಕೊನೆಯಾಗಲಿದೆ. ಆಸಕ್ತರು ಬಂದು ವೀಕ್ಷಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

ವಿವೇಕ್‌ ಗೌಡ ಅವರು ಪ್ರವಾಸ ಪ್ರಿಯರೂ ಹೌದು, ಪರಿಸರ ಪ್ರೇಮಿಯೂ ಹೌದು. ಮಾನವೀಯ ಮೌಲ್ಯಗಳನ್ನು ತಿಳಿಸುವ ಫೋಟೊಗಳನ್ನು ತೆಗೆದಿರುವ ವಿವೇಕ್‌ ಅವರು ಫೋಟೋಗ್ರಫಿಗಾಗಿಯೇ ದೇಶದ ವಿವಿದೆಡೆ ಸುತ್ತಾಡಿದ್ದಾರೆ. ಮಂಗಳೂರಿನಲ್ಲಿರುವ ವಿವೇಕ್‌ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಮುಖರ ಫೋಟೊಗ್ರಫಿಯಲ್ಲೂ ಭಾಗಿಯಾಗಿದ್ದಾರೆ.

ಪರಿಸರದ ಒಡನಾಟವು ಹೆಚ್ಚು ಖುಷಿ ನೀಡುತ್ತದೆ ಎನ್ನುವ ವಿವೇಕ ಗೌಡ, ಉದ್ಯೋಗ ಹಾಗೂ ಆಸಕ್ತಿ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಆಸಕ್ತಿಗಳು ಹೆಚ್ಚು ಖುಷಿ ನೀಡುತ್ತವೆ ಎನ್ನುತ್ತಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

3 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

6 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

12 hours ago