Advertisement
MIRROR FOCUS

ಅಂಬಾನಿ ಪುತ್ರನ ಪ್ರೀವೆಡ್ಡಿಂಗ್‌ ಫೋಟೋಗ್ರಾಫರ್‌ ವಿವೇಕ ಗೌಡರ ಪ್ರವಾಸದ ಚಿತ್ರ ಪ್ರದರ್ಶನ ಪುತ್ತೂರಿನಲ್ಲಿ | ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಮನ ಸೆಳೆವ ಚಿತ್ರಗಳು ಇವೆ ಬನ್ನಿ |

Share

ದೇಶದೆಲ್ಲೆಡೆ  ಈಗ ಸದ್ದು ಮಾಡಿದ  ಸುದ್ದಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರನ  ಪ್ರೀವೆಡ್ಡಿಂಗ್‌ ಕಾರ್ಯಕ್ರಮ‌. ಆದರೆ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ  ಪ್ರೀವೆಡ್ಡಿಂಗ್‌, ಮದುವೆ ಮಹೋತ್ಸವ ಕಾರ್ಯಕ್ರಮವೂ ಹಾಗೇ ಸದ್ದು ಮಾಡಿತ್ತು, ಅಂದು ಫೋಟೋಗ್ರಾಫರ್ ಆಗಿ ತೆರಳಿದ್ದ ಮಂಗಳೂರಿನ ವಿವೇಕ್‌ ಗೌಡ ಅವರು ಪರಿಸರ, ಪ್ರಯಾಣ ಸೇರಿದಂತೆ ಇತರ ಆಸಕ್ತಿಯನ್ನೂ ಹೊಂದಿದ್ದಾರೆ. ಅವರು ಕ್ಲಿಕ್ಕಿಸಿರುವ ವಿವಿಧ ಛಾಯಾಚಿತ್ರಗಳ ಪ್ರದರ್ಶನ ಪುತ್ತೂರಿನ ಪರ್ಪುಂಜದಲ್ಲಿರುವ ಸೌಗಂಧಿಕಾ ನರ್ಸರಿಯಲ್ಲಿ  ಛಾಯಾಚಿತ್ರ ಪ್ರದರ್ಶನ ” ಜರ್ನಿ” ಆರಂಭಗೊಂಡಿದೆ.

ಯುಗಾದಿ ಆಚರಣೆಯೊಂದಿಗೆ ಮಂಗಳವಾರ ಸಂಜೆ ಚಿತ್ರ ಪ್ರದರ್ಶನ ಉದ್ಘಾಟನೆಗೊಂಡಿತು.ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಪರಿಸರವಾದಿ ಹೋರಾಟಗಾರ ಕಲಾವಿದ ದಿನೇಶ ಹೊಳ್ಳ ಮತ್ತು ಶಶಿಧರ ಶೆಟ್ಟಿ ಜನಪರ ಹೋರಾಟಗಾರ ಮಂಗಳೂರು ಮತ್ತು ಉರಗ ರಕ್ಷಕ ಕಿರಣ ಉದ್ಘಾಟಿಸಿದರು.

ಚಿತ್ರ ಕಲಾವಿದ ಮತ್ತು ಪರಿಸರವಾದಿ ದಿನೇಶ ಹೊಳ್ಳ ಮಾತನಾಡಿ,  ಮಾನವರು ಸಹಜವಾಗಿ ಪರಿಸರ ದೊಂದಗಿನ ಒಡನಾಟದೊಂದಿಗೆ ಜೀವಿಸುವ ಮಹತ್ವದ ಕುರಿತು ಮಾತನಾಡಿದರು. ವಿವೇಕರ ಛಾಯಾಚಿತ್ರಗಳಲ್ಲಿ ಜೀವನ ಪ್ರೀತಿ ತುಂಬಿದೆ ಎಂದು ಶುಭ ಹಾರೈಸಿದರು.

ಅತಿಥಿ ಶಶಿಧರ ಶೆಟ್ಟಿ ಮಾತನಾಡಿ ಸೌಗಂಧಿಕಾ ಪರಿಸರದಲ್ಲಿ ಇಂತಹ ಉತ್ತಮ ಕಾರ್ಯಕ್ರಮಗಳು ಪರಿಸರಸ್ನೇಹಿ ಚಟುವಟಿಕೆಗಳು ನಡೆಯುತ್ತಿರಲಿ ಎಂದರು. ಪರಿಸರದ, ಸಮಾಜದ ನಡುವಿನ ಫೋಟೊಗಳ ಜೊತೆ ಮಾತನಾಡುವ ಮನಸುಗಳನ್ನು ನಾವು ಬೆಳೆಸಿಕೊಳ್ಳಬೇಕು ಎಂದರು.

ಉರಗ ತಜ್ಞ ಕಿರಣ್ ನಮ್ಮ ಸುತ್ತಮುತ್ತಲಿನ ಹಾವುಗಳ ಬಗ್ಗೆ  ಮಾಹಿತಿಗಳನ್ನು ನೀಡಿದರು. ಸುನಿಲ್ ಅತ್ತಾವರ ಹಾಡಿರುವ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.  ಚಂದ್ರ ಸೌಗಂಧಿಕಾ ಪ್ರಸ್ತಾವನೆ ಮಾಡಿದರು. ಹರೀಶ್ ರಾಜಕುಮಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸೌಗಂಧಿಕಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವು ಏಪ್ರಿಲ್ 28ರಂದು ಕೊನೆಯಾಗಲಿದೆ. ಆಸಕ್ತರು ಬಂದು ವೀಕ್ಷಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

ವಿವೇಕ್‌ ಗೌಡ ಅವರು ಪ್ರವಾಸ ಪ್ರಿಯರೂ ಹೌದು, ಪರಿಸರ ಪ್ರೇಮಿಯೂ ಹೌದು. ಮಾನವೀಯ ಮೌಲ್ಯಗಳನ್ನು ತಿಳಿಸುವ ಫೋಟೊಗಳನ್ನು ತೆಗೆದಿರುವ ವಿವೇಕ್‌ ಅವರು ಫೋಟೋಗ್ರಫಿಗಾಗಿಯೇ ದೇಶದ ವಿವಿದೆಡೆ ಸುತ್ತಾಡಿದ್ದಾರೆ. ಮಂಗಳೂರಿನಲ್ಲಿರುವ ವಿವೇಕ್‌ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಮುಖರ ಫೋಟೊಗ್ರಫಿಯಲ್ಲೂ ಭಾಗಿಯಾಗಿದ್ದಾರೆ.

ಪರಿಸರದ ಒಡನಾಟವು ಹೆಚ್ಚು ಖುಷಿ ನೀಡುತ್ತದೆ ಎನ್ನುವ ವಿವೇಕ ಗೌಡ, ಉದ್ಯೋಗ ಹಾಗೂ ಆಸಕ್ತಿ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಆಸಕ್ತಿಗಳು ಹೆಚ್ಚು ಖುಷಿ ನೀಡುತ್ತವೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

5 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

6 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

18 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago