Advertisement
MIRROR FOCUS

ಅಂಬಾನಿ ಪುತ್ರನ ಪ್ರೀವೆಡ್ಡಿಂಗ್‌ ಫೋಟೋಗ್ರಾಫರ್‌ ವಿವೇಕ ಗೌಡರ ಪ್ರವಾಸದ ಚಿತ್ರ ಪ್ರದರ್ಶನ ಪುತ್ತೂರಿನಲ್ಲಿ | ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಮನ ಸೆಳೆವ ಚಿತ್ರಗಳು ಇವೆ ಬನ್ನಿ |

Share

ದೇಶದೆಲ್ಲೆಡೆ  ಈಗ ಸದ್ದು ಮಾಡಿದ  ಸುದ್ದಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರನ  ಪ್ರೀವೆಡ್ಡಿಂಗ್‌ ಕಾರ್ಯಕ್ರಮ‌. ಆದರೆ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ  ಪ್ರೀವೆಡ್ಡಿಂಗ್‌, ಮದುವೆ ಮಹೋತ್ಸವ ಕಾರ್ಯಕ್ರಮವೂ ಹಾಗೇ ಸದ್ದು ಮಾಡಿತ್ತು, ಅಂದು ಫೋಟೋಗ್ರಾಫರ್ ಆಗಿ ತೆರಳಿದ್ದ ಮಂಗಳೂರಿನ ವಿವೇಕ್‌ ಗೌಡ ಅವರು ಪರಿಸರ, ಪ್ರಯಾಣ ಸೇರಿದಂತೆ ಇತರ ಆಸಕ್ತಿಯನ್ನೂ ಹೊಂದಿದ್ದಾರೆ. ಅವರು ಕ್ಲಿಕ್ಕಿಸಿರುವ ವಿವಿಧ ಛಾಯಾಚಿತ್ರಗಳ ಪ್ರದರ್ಶನ ಪುತ್ತೂರಿನ ಪರ್ಪುಂಜದಲ್ಲಿರುವ ಸೌಗಂಧಿಕಾ ನರ್ಸರಿಯಲ್ಲಿ  ಛಾಯಾಚಿತ್ರ ಪ್ರದರ್ಶನ ” ಜರ್ನಿ” ಆರಂಭಗೊಂಡಿದೆ.

ಯುಗಾದಿ ಆಚರಣೆಯೊಂದಿಗೆ ಮಂಗಳವಾರ ಸಂಜೆ ಚಿತ್ರ ಪ್ರದರ್ಶನ ಉದ್ಘಾಟನೆಗೊಂಡಿತು.ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಪರಿಸರವಾದಿ ಹೋರಾಟಗಾರ ಕಲಾವಿದ ದಿನೇಶ ಹೊಳ್ಳ ಮತ್ತು ಶಶಿಧರ ಶೆಟ್ಟಿ ಜನಪರ ಹೋರಾಟಗಾರ ಮಂಗಳೂರು ಮತ್ತು ಉರಗ ರಕ್ಷಕ ಕಿರಣ ಉದ್ಘಾಟಿಸಿದರು.

ಚಿತ್ರ ಕಲಾವಿದ ಮತ್ತು ಪರಿಸರವಾದಿ ದಿನೇಶ ಹೊಳ್ಳ ಮಾತನಾಡಿ,  ಮಾನವರು ಸಹಜವಾಗಿ ಪರಿಸರ ದೊಂದಗಿನ ಒಡನಾಟದೊಂದಿಗೆ ಜೀವಿಸುವ ಮಹತ್ವದ ಕುರಿತು ಮಾತನಾಡಿದರು. ವಿವೇಕರ ಛಾಯಾಚಿತ್ರಗಳಲ್ಲಿ ಜೀವನ ಪ್ರೀತಿ ತುಂಬಿದೆ ಎಂದು ಶುಭ ಹಾರೈಸಿದರು.

ಅತಿಥಿ ಶಶಿಧರ ಶೆಟ್ಟಿ ಮಾತನಾಡಿ ಸೌಗಂಧಿಕಾ ಪರಿಸರದಲ್ಲಿ ಇಂತಹ ಉತ್ತಮ ಕಾರ್ಯಕ್ರಮಗಳು ಪರಿಸರಸ್ನೇಹಿ ಚಟುವಟಿಕೆಗಳು ನಡೆಯುತ್ತಿರಲಿ ಎಂದರು. ಪರಿಸರದ, ಸಮಾಜದ ನಡುವಿನ ಫೋಟೊಗಳ ಜೊತೆ ಮಾತನಾಡುವ ಮನಸುಗಳನ್ನು ನಾವು ಬೆಳೆಸಿಕೊಳ್ಳಬೇಕು ಎಂದರು.

ಉರಗ ತಜ್ಞ ಕಿರಣ್ ನಮ್ಮ ಸುತ್ತಮುತ್ತಲಿನ ಹಾವುಗಳ ಬಗ್ಗೆ  ಮಾಹಿತಿಗಳನ್ನು ನೀಡಿದರು. ಸುನಿಲ್ ಅತ್ತಾವರ ಹಾಡಿರುವ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.  ಚಂದ್ರ ಸೌಗಂಧಿಕಾ ಪ್ರಸ್ತಾವನೆ ಮಾಡಿದರು. ಹರೀಶ್ ರಾಜಕುಮಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸೌಗಂಧಿಕಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವು ಏಪ್ರಿಲ್ 28ರಂದು ಕೊನೆಯಾಗಲಿದೆ. ಆಸಕ್ತರು ಬಂದು ವೀಕ್ಷಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

ವಿವೇಕ್‌ ಗೌಡ ಅವರು ಪ್ರವಾಸ ಪ್ರಿಯರೂ ಹೌದು, ಪರಿಸರ ಪ್ರೇಮಿಯೂ ಹೌದು. ಮಾನವೀಯ ಮೌಲ್ಯಗಳನ್ನು ತಿಳಿಸುವ ಫೋಟೊಗಳನ್ನು ತೆಗೆದಿರುವ ವಿವೇಕ್‌ ಅವರು ಫೋಟೋಗ್ರಫಿಗಾಗಿಯೇ ದೇಶದ ವಿವಿದೆಡೆ ಸುತ್ತಾಡಿದ್ದಾರೆ. ಮಂಗಳೂರಿನಲ್ಲಿರುವ ವಿವೇಕ್‌ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಮುಖರ ಫೋಟೊಗ್ರಫಿಯಲ್ಲೂ ಭಾಗಿಯಾಗಿದ್ದಾರೆ.

ಪರಿಸರದ ಒಡನಾಟವು ಹೆಚ್ಚು ಖುಷಿ ನೀಡುತ್ತದೆ ಎನ್ನುವ ವಿವೇಕ ಗೌಡ, ಉದ್ಯೋಗ ಹಾಗೂ ಆಸಕ್ತಿ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಆಸಕ್ತಿಗಳು ಹೆಚ್ಚು ಖುಷಿ ನೀಡುತ್ತವೆ ಎನ್ನುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

42 minutes ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 hour ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 hour ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

11 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

17 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

18 hours ago