ಸಹ್ಯಾದ್ರಿ ತಪ್ಪಲಿಂದ ಇನ್ನು ಆಕಾಶಕ್ಕೆ ಹಾರಲಿದೆ ವಿಮಾನ | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯಿಂದ ನೂತನ ವಿಮಾನ ನಿಲ್ದಾಣ ಉದ್ಘಾಟನೆ |

February 27, 2023
4:34 PM

ಹಲವು ವರ್ಷಗಳ ಶಿವಮೊಗ್ಗ ಜನತೆಯ ಕನಸು, ಇಂದು ಸಾಕಾರಗೊಂಡಿತು. ಶಿವಮೊಗ್ಗಕ್ಕೆ ಇಂದು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.

ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು. ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಸೇರಿ ಹಲವರು ಸ್ವಾಗತ ಕೋರಿದರು.

ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು. ಬಳಿಕ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ
ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಏರ್‌ಪೋರ್ಟ್ ಕುರಿತ ಕಿರುಚಿತ್ರ ಪ್ರದರ್ಶನ
ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ವಿಮಾನಯಾನ ಪ್ರಯಾಣಿಕರು, ಕೇಂದ್ರ ಸರ್ಕಾರ ವಿಮಾನಯಾನಕ್ಕೆ ನೀಡಿದ ಉತ್ತೇಜನ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಕುರಿತು ವೇದಿಕೆಯಲ್ಲಿ ಕಿರುಚಿತ್ರ ಪ್ರದರ್ಶನ ಮಾಡಲಾಯಿತು.
ಕಿರುಚಿತ್ರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಸೌಲಭ್ಯಗಳು, ಅದರ ವಿಶೇಷತೆಗಳು, ಆರಂಭದಿಂದ ಹಿಡಿದು ಉದ್ಘಾಟನೆಯವರೆಗಿನ ಮಾಹಿತಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror