ಸಹ್ಯಾದ್ರಿ ತಪ್ಪಲಿಂದ ಇನ್ನು ಆಕಾಶಕ್ಕೆ ಹಾರಲಿದೆ ವಿಮಾನ | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯಿಂದ ನೂತನ ವಿಮಾನ ನಿಲ್ದಾಣ ಉದ್ಘಾಟನೆ |

February 27, 2023
4:34 PM

ಹಲವು ವರ್ಷಗಳ ಶಿವಮೊಗ್ಗ ಜನತೆಯ ಕನಸು, ಇಂದು ಸಾಕಾರಗೊಂಡಿತು. ಶಿವಮೊಗ್ಗಕ್ಕೆ ಇಂದು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.

ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು. ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಸೇರಿ ಹಲವರು ಸ್ವಾಗತ ಕೋರಿದರು.

ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು. ಬಳಿಕ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ
ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಏರ್‌ಪೋರ್ಟ್ ಕುರಿತ ಕಿರುಚಿತ್ರ ಪ್ರದರ್ಶನ
ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ವಿಮಾನಯಾನ ಪ್ರಯಾಣಿಕರು, ಕೇಂದ್ರ ಸರ್ಕಾರ ವಿಮಾನಯಾನಕ್ಕೆ ನೀಡಿದ ಉತ್ತೇಜನ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಕುರಿತು ವೇದಿಕೆಯಲ್ಲಿ ಕಿರುಚಿತ್ರ ಪ್ರದರ್ಶನ ಮಾಡಲಾಯಿತು.
ಕಿರುಚಿತ್ರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಸೌಲಭ್ಯಗಳು, ಅದರ ವಿಶೇಷತೆಗಳು, ಆರಂಭದಿಂದ ಹಿಡಿದು ಉದ್ಘಾಟನೆಯವರೆಗಿನ ಮಾಹಿತಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror