Advertisement
ಸುದ್ದಿಗಳು

ಸಹ್ಯಾದ್ರಿ ತಪ್ಪಲಿಂದ ಇನ್ನು ಆಕಾಶಕ್ಕೆ ಹಾರಲಿದೆ ವಿಮಾನ | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯಿಂದ ನೂತನ ವಿಮಾನ ನಿಲ್ದಾಣ ಉದ್ಘಾಟನೆ |

Share

ಹಲವು ವರ್ಷಗಳ ಶಿವಮೊಗ್ಗ ಜನತೆಯ ಕನಸು, ಇಂದು ಸಾಕಾರಗೊಂಡಿತು. ಶಿವಮೊಗ್ಗಕ್ಕೆ ಇಂದು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.

ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು. ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಸೇರಿ ಹಲವರು ಸ್ವಾಗತ ಕೋರಿದರು.

ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು. ಬಳಿಕ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಉದ್ಘಾಟನೆ
ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಏರ್‌ಪೋರ್ಟ್ ಕುರಿತ ಕಿರುಚಿತ್ರ ಪ್ರದರ್ಶನ
ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ವಿಮಾನಯಾನ ಪ್ರಯಾಣಿಕರು, ಕೇಂದ್ರ ಸರ್ಕಾರ ವಿಮಾನಯಾನಕ್ಕೆ ನೀಡಿದ ಉತ್ತೇಜನ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಕುರಿತು ವೇದಿಕೆಯಲ್ಲಿ ಕಿರುಚಿತ್ರ ಪ್ರದರ್ಶನ ಮಾಡಲಾಯಿತು.
ಕಿರುಚಿತ್ರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಸೌಲಭ್ಯಗಳು, ಅದರ ವಿಶೇಷತೆಗಳು, ಆರಂಭದಿಂದ ಹಿಡಿದು ಉದ್ಘಾಟನೆಯವರೆಗಿನ ಮಾಹಿತಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

10 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago