ಸಿರಿಧಾನ್ಯಗಳಿಂದ ಸಿರಿವಂತನಾದ ಪ್ರಗತಿಪರ ರೈತ | ಸ್ವಂತ ಬ್ರಾಂಡ್ ಮೂಲಕ ಆಧುನಿಕ ಮಾರುಕಟ್ಟೆಗಳಿಗೆ ಸೆಡ್ಡು ಹೊಡೆದು ವ್ಯಾಪಾರ |

January 10, 2024
2:41 PM

ಇತ್ತೀಚಿನ ದಿನಗಳಲ್ಲಿ ಆರೋಗ್ಯದ(Health) ಮೇಲೆ ಕಾಳಜಿ(Care) ಜಾಸ್ತಿಯಾಗುತ್ತಿದೆ. ಮರಳಿ ಮಣ್ಣಿಗೆ ಅನ್ನುವ ಮಾತು ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ನಮ್ಮ ಹಿರಿಯರು ಅಂದು ಗಟ್ಟಿಮುಟ್ಟಾಗಿ ಬದುಕಿ ಬಾಳಲು ತಿಂದ ಸಿರಿಧಾನ್ಯಗಳು(Millet) ಇಂದು ಮತ್ತೆ ಬಳಕೆಗೆ ಬರುತ್ತಿವೆ. ಇದನ್ನು ಬಂಡವಾಳ ಮಾಡಿಕೊಂಡ ರೈತರೊಬ್ಬರು(Farmer) ಇದನ್ನೇ ಉದ್ಯಮವನ್ನಾಗಿಸಿಕೊಂಡು(Business) ಮಹತ್ತರ ಸಾಧನೆಗೈದಿದ್ದಾರೆ. ವಿಶೇಷ ಸಾಧನೆ ಮಾಡಿರುವವರು (Positive Story) ರಾಮನಗರದ(Ramanagara) ಪ್ರಗತಿಪರ ರೈತ(Model Farmer). ಸಿರಿಧಾನ್ಯ ಬೆಳೆಗಳ ಮೂಲಕ ತನ್ನದೇ ಬ್ರ್ಯಾಂಡ್(Brand) ಸೃಷ್ಟಿಸಿಕೊಂಡ ರಾಮನಗರದ ಬಿಳಗುಂಬ ಗ್ರಾಮದ ಇವರ ಹೆಸರು ವಾಸು ಅಂತ. ಇವರ ಸಾಧನೆಗೆ ರಾಜ್ಯ ಕೃಷಿ ಇಲಾಖೆಯಿಂದ(State Agricultural Department) ಅತ್ಯುತ್ತಮ ರೈತ ಪ್ರಶಸ್ತಿಯೂ(Best Farmer Award) ದೊರೆತಿದೆ.

ಸ್ವಂತ ಬ್ರಾಂಡ್ ಸೃಷ್ಟಿಸಿದ ರೈತ ವಾಸು ಸಾಮಾನ್ಯದವರಲ್ಲ, ತಮ್ಮದೇ ಆದ ರಾಮ್ ಗೋಲ್ಡ್ ಹೆಸರಿನಲ್ಲಿ ಈಸಿ ರಾಗಿಮುದ್ದೆ – ರಾಗಿ ಮಾಲ್ಟ್ ತಯಾರು ಮಾಡಿ ಮಾರಾಟ ಮಾಡ್ತಾರೆ. ಬೃಹತ್ ಮಷಿನ್ಗಳ ಮೂಲಕ ಸಿರಿಧಾನ್ಯ ಮಿಶ್ರಿತ ರಾಗಿಹಿಟ್ಟು – ಮಾಲ್ಟ್ ಪೌಡರ್ ತಯಾರಿಸಿ ಮಾರಾಟ ಮಾಡ್ತಾರೆ. ಅಂದಹಾಗೆ ಇಷ್ಟೆಲ್ಲ ಮಾರಾಟ ಮಾಡುವ ವಾಸು ತಾವು ಮಾರೋ ವಸ್ತುಗಳಿಗೆ ಹೆಸರಿಟ್ಟು ಸ್ವಂತ ಬ್ರಾಂಡ್ ಒಂದನ್ನು ಸಹ ಸೃಷ್ಟಿಸಿದ್ದಾರೆ. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ ತರಬೇತಿ ಪಡೆದ ನಂತರ ಇವರ ಜೀವನ ಎಲ್ಲರಿಗೂ ಮಾದರಿಯಾಗಿ ಬದಲಾಗಿದೆ.

ರಾಮ್ ಗೋಲ್ಡ್ ಆರ್ಗ್ಯಾನಿಕ್ಸ್ ವಾಸು ಅವರು ತಯಾರಿಸುವ ರಾಗಿ ಮಾಲ್ಟ್ ಬಿಪಿ, ಶುಗರ್ ಇದ್ದವರಿಗೆ ಇದು ರಾಮಬಾಣವಂತೆ. ರಾಗಿಯ ಜೊತೆಗೆ 14 ಬಗೆಯ ಸಿರಿಧಾನ್ಯ ಮಿಶ್ರಿತ ರಾಗಿ ಮಾಲ್ಟ್‌ನ್ನು ಸಹ ಇವ್ರು ತಯಾರಿಸ್ತಾರೆ. ಇಡ್ಲಿ ರೀತಿಯಲ್ಲಿ10 ನಿಮಿಷಗಳಲ್ಲಿ ಮಾತ್ರ ರಾಗಿಮುದ್ದೆ ತಯಾರಿಸುವ ಉತ್ಪನ್ನವೂ ಸಹ ಸಿಗುತ್ತೆ ಅನ್ನೋದು ವಾಸು ಅವರ ರಾಮ್ ಬ್ರಾಂಡ್‌ನ ವಿಶೇಷ. ಯಾರಿಗಾದ್ರೂ ಬೇಕಾದ್ರೆ ರಾಮ್ ಗೋಲ್ಡ್ ಆರ್ಗ್ಯಾನಿಕ್ಸ್ ಹೆಸರಿನ ವೆಬ್‌ಸೈಟ್‌ನಲ್ಲಿ ಬುಕ್ ಮಾಡಬಹುದು.

ಆನ್‌ಲೈನ್ ಕಂಪನಿಗಳಿಗೆ ಸೆಡ್ಡು ಅಲ್ಲದೇ, ದೊಡ್ಡ ದೊಡ್ಡ ಆನ್‌ಲೈನ್ ಕಂಪನಿಗಳಂತೆ ವಾಸು ಅವರು ತಮ್ಮ ಪ್ರಾಡಕ್ಟ್‌ಗಳನ್ನ ನಿಮ್ಮ ಮನೆ ಬಾಗಿಲಿಗೆ ಫ್ರೀ ಡೆಲಿವರಿ ಕೊಡ್ತಾರೆ. ಹೀಗೆ ಸ್ವಂತ ಪ್ರಯತ್ನ-ಛಲದಿಂದ ತಮ್ಮದೇ ಬ್ರಾಂಡ್ ಕಟ್ಟಿಕೊಂಡ ಈ ರೈತ ಮಾತ್ರ ಹಲವರಿಗೆ ಪ್ರೇರಣೆಯಾಗಿದ್ದಾರೆ.

– ಅಂತರ್ಜಾಲ ಮಾಹಿತಿ

His name is Vasu from Bilagumba village of Ramanagara who created his own brand through cereal crops. He has also received the Best Farmer Award from the State Agricultural Department for his achievement.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror