Advertisement
MIRROR FOCUS

ಸಿರಿಧಾನ್ಯಗಳಿಂದ ಸಿರಿವಂತನಾದ ಪ್ರಗತಿಪರ ರೈತ | ಸ್ವಂತ ಬ್ರಾಂಡ್ ಮೂಲಕ ಆಧುನಿಕ ಮಾರುಕಟ್ಟೆಗಳಿಗೆ ಸೆಡ್ಡು ಹೊಡೆದು ವ್ಯಾಪಾರ |

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯದ(Health) ಮೇಲೆ ಕಾಳಜಿ(Care) ಜಾಸ್ತಿಯಾಗುತ್ತಿದೆ. ಮರಳಿ ಮಣ್ಣಿಗೆ ಅನ್ನುವ ಮಾತು ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ನಮ್ಮ ಹಿರಿಯರು ಅಂದು ಗಟ್ಟಿಮುಟ್ಟಾಗಿ ಬದುಕಿ ಬಾಳಲು ತಿಂದ ಸಿರಿಧಾನ್ಯಗಳು(Millet) ಇಂದು ಮತ್ತೆ ಬಳಕೆಗೆ ಬರುತ್ತಿವೆ. ಇದನ್ನು ಬಂಡವಾಳ ಮಾಡಿಕೊಂಡ ರೈತರೊಬ್ಬರು(Farmer) ಇದನ್ನೇ ಉದ್ಯಮವನ್ನಾಗಿಸಿಕೊಂಡು(Business) ಮಹತ್ತರ ಸಾಧನೆಗೈದಿದ್ದಾರೆ. ವಿಶೇಷ ಸಾಧನೆ ಮಾಡಿರುವವರು (Positive Story) ರಾಮನಗರದ(Ramanagara) ಪ್ರಗತಿಪರ ರೈತ(Model Farmer). ಸಿರಿಧಾನ್ಯ ಬೆಳೆಗಳ ಮೂಲಕ ತನ್ನದೇ ಬ್ರ್ಯಾಂಡ್(Brand) ಸೃಷ್ಟಿಸಿಕೊಂಡ ರಾಮನಗರದ ಬಿಳಗುಂಬ ಗ್ರಾಮದ ಇವರ ಹೆಸರು ವಾಸು ಅಂತ. ಇವರ ಸಾಧನೆಗೆ ರಾಜ್ಯ ಕೃಷಿ ಇಲಾಖೆಯಿಂದ(State Agricultural Department) ಅತ್ಯುತ್ತಮ ರೈತ ಪ್ರಶಸ್ತಿಯೂ(Best Farmer Award) ದೊರೆತಿದೆ.

ಸ್ವಂತ ಬ್ರಾಂಡ್ ಸೃಷ್ಟಿಸಿದ ರೈತ ವಾಸು ಸಾಮಾನ್ಯದವರಲ್ಲ, ತಮ್ಮದೇ ಆದ ರಾಮ್ ಗೋಲ್ಡ್ ಹೆಸರಿನಲ್ಲಿ ಈಸಿ ರಾಗಿಮುದ್ದೆ – ರಾಗಿ ಮಾಲ್ಟ್ ತಯಾರು ಮಾಡಿ ಮಾರಾಟ ಮಾಡ್ತಾರೆ. ಬೃಹತ್ ಮಷಿನ್ಗಳ ಮೂಲಕ ಸಿರಿಧಾನ್ಯ ಮಿಶ್ರಿತ ರಾಗಿಹಿಟ್ಟು – ಮಾಲ್ಟ್ ಪೌಡರ್ ತಯಾರಿಸಿ ಮಾರಾಟ ಮಾಡ್ತಾರೆ. ಅಂದಹಾಗೆ ಇಷ್ಟೆಲ್ಲ ಮಾರಾಟ ಮಾಡುವ ವಾಸು ತಾವು ಮಾರೋ ವಸ್ತುಗಳಿಗೆ ಹೆಸರಿಟ್ಟು ಸ್ವಂತ ಬ್ರಾಂಡ್ ಒಂದನ್ನು ಸಹ ಸೃಷ್ಟಿಸಿದ್ದಾರೆ. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ ತರಬೇತಿ ಪಡೆದ ನಂತರ ಇವರ ಜೀವನ ಎಲ್ಲರಿಗೂ ಮಾದರಿಯಾಗಿ ಬದಲಾಗಿದೆ.

ರಾಮ್ ಗೋಲ್ಡ್ ಆರ್ಗ್ಯಾನಿಕ್ಸ್ ವಾಸು ಅವರು ತಯಾರಿಸುವ ರಾಗಿ ಮಾಲ್ಟ್ ಬಿಪಿ, ಶುಗರ್ ಇದ್ದವರಿಗೆ ಇದು ರಾಮಬಾಣವಂತೆ. ರಾಗಿಯ ಜೊತೆಗೆ 14 ಬಗೆಯ ಸಿರಿಧಾನ್ಯ ಮಿಶ್ರಿತ ರಾಗಿ ಮಾಲ್ಟ್‌ನ್ನು ಸಹ ಇವ್ರು ತಯಾರಿಸ್ತಾರೆ. ಇಡ್ಲಿ ರೀತಿಯಲ್ಲಿ10 ನಿಮಿಷಗಳಲ್ಲಿ ಮಾತ್ರ ರಾಗಿಮುದ್ದೆ ತಯಾರಿಸುವ ಉತ್ಪನ್ನವೂ ಸಹ ಸಿಗುತ್ತೆ ಅನ್ನೋದು ವಾಸು ಅವರ ರಾಮ್ ಬ್ರಾಂಡ್‌ನ ವಿಶೇಷ. ಯಾರಿಗಾದ್ರೂ ಬೇಕಾದ್ರೆ ರಾಮ್ ಗೋಲ್ಡ್ ಆರ್ಗ್ಯಾನಿಕ್ಸ್ ಹೆಸರಿನ ವೆಬ್‌ಸೈಟ್‌ನಲ್ಲಿ ಬುಕ್ ಮಾಡಬಹುದು.

ಆನ್‌ಲೈನ್ ಕಂಪನಿಗಳಿಗೆ ಸೆಡ್ಡು ಅಲ್ಲದೇ, ದೊಡ್ಡ ದೊಡ್ಡ ಆನ್‌ಲೈನ್ ಕಂಪನಿಗಳಂತೆ ವಾಸು ಅವರು ತಮ್ಮ ಪ್ರಾಡಕ್ಟ್‌ಗಳನ್ನ ನಿಮ್ಮ ಮನೆ ಬಾಗಿಲಿಗೆ ಫ್ರೀ ಡೆಲಿವರಿ ಕೊಡ್ತಾರೆ. ಹೀಗೆ ಸ್ವಂತ ಪ್ರಯತ್ನ-ಛಲದಿಂದ ತಮ್ಮದೇ ಬ್ರಾಂಡ್ ಕಟ್ಟಿಕೊಂಡ ಈ ರೈತ ಮಾತ್ರ ಹಲವರಿಗೆ ಪ್ರೇರಣೆಯಾಗಿದ್ದಾರೆ.

– ಅಂತರ್ಜಾಲ ಮಾಹಿತಿ

His name is Vasu from Bilagumba village of Ramanagara who created his own brand through cereal crops. He has also received the Best Farmer Award from the State Agricultural Department for his achievement.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

15 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago