ಮನೆಯಲ್ಲೊಂದು ಜಂಬೂ ನೇರಳೆ ಮರ | ಕಷ್ಟಪಟ್ಟರೆ ಫಲ ಉಂಟು

February 19, 2024
12:54 PM

ಸಾಂಪ್ರದಾಯಿಕ ಜಂಬು ನೇರಳೆಗಿಂತ(syzygium fruit) ಹಣ್ಣಾಗುವಾಗ ಕೆಂಪು ಒತ್ತು ಜಾಸ್ತಿ. ಒಳ್ಳೆಯ ಹಣ್ಣಾದರೆ ಹತ್ತಿಯಂತೆ ಮೃದು ಮತ್ತು ಬಹಳ ರುಚಿ. ಆದರೇನು ಮಾಡೋಣ? ಬೆಳೆಯುವುದು, ಹಣ್ಣಾಗುವವರೆಗೂ ಕಾದು ಕಾದು ಹಣ್ಣಾಗುವಾಗ ನಮಗೆ ಉಳಿಯುವುದು ಬಾವಲಿ(Bat) ತಿಂದದ್ದರ ಅರ್ಧ ಪಾಲು ಮಾತ್ರ. ಪ್ರಾಮಾಣಿಕವಾಗಿ ಹೇಳುವೆ ಒಂದಾದರೂ ಇಡಿಯ ಹಣ್ಣನ್ನು ಪೂರ್ಣವಾಗಿ ತಿನ್ನಲು ಸಿಕ್ಕುವುದು ಕಷ್ಟ.

ಈ ವರ್ಷ ಹಣ್ಣಿನ ಬೆಳೆ ಸಮೃದ್ಧ. ಸುಮಾರು 35 ಅಡಿ ಎತ್ತರದ ಮರದ ಗೆಲ್ಲು ಗೆಲ್ಲುಗಳಲ್ಲು ಹೂ ಬಿಟ್ಟಿತ್ತು ಕಾಯಿ ಕಚ್ಚಿತ್ತು. ಮರವನ್ನು ದಿನಕ್ಕೊಮ್ಮೆಯಾದರೂ ನೋಡುವ ಮೊಮ್ಮಕ್ಕಳು ಹಣ್ಣು ತಿನ್ನುವುದು ಯಾವಾಗ ಅಜ್ಜ ಎಂದು ಕೇಳುವಾಗ ಏನಾದರೂ ಉಪಾಯ ಮಾಡಲೇಬೇಕೆಂದು ಮನಸ್ಸು ಹೇಳಿತು. ಮರಕ್ಕೆ ಬಲೆಯನ್ನು ಹಾಕಿದರೆ ಬಾವಲಿ ಮತ್ತು ಪಕ್ಷಿ ಸಂಕುಲಗಳಿಂದ ಕಾಪಾಡಬಹುದು ಎಂಬ ಮಾಹಿತಿಯಂತೆ ಕಾಯಿ ಬೆಳೆಯುತ್ತಾ ಬಂದಂತೆ ಬಲೆಯನ್ನು ಮರಕ್ಕೇರಿಸುವ ಪ್ರಯತ್ನದತ್ತ ಹೊರಟೆ. ದೊಡ್ಡದಾದ ಬಲೆಯನ್ನು ಎತ್ತರಕ್ಕೆ ಏರಿಸುವಾಗಲೇ ಅದರ ಸಮಸ್ಯೆಯ ಪೂರ್ಣ ಅರಿವಾಗುವುದು.

ಬಲೆ ಮುದ್ದೆ ಕಟ್ಟಿಕೊಳ್ಳುವುದು, ಗಿಡದ ಗೆಲ್ಲುಗಳೆ ಬಲೆಯನ್ನು ಕಚ್ಚಿ ಹಿಡಿದುಕೊಳ್ಳುವುದು, ಅಡಿಕೆ ತೋಟದ ಬದಿಯಲ್ಲಿ ಮರ ಇರುವ ಕಾರಣ ಅಡಿಕೆ ಮರದ ಬುಡಕ್ಕೆ ಹಾಕಿದ ಕಸ ಕಡ್ಡಿಗಳೇ ಬಲೆಗೆ ಅಡ್ಡಿಯಾಗುವುದು, ಎತ್ತರಕ್ಕೆ ಕೊಂಡೊಯ್ಯಲು ಉದ್ದದ ಕೊಕ್ಕೆಯ ಸಮಸ್ಯೆ,(ಅದಕ್ಕೆ ನಾನು ಬಳಸಿದ್ದು ಕಾರ್ಬನ್ ಫೈಬರ್ ದೋಟಿ) ದೋಟಿಯ ಕ್ಲ್ಯಾಂಪ್ಗಳೇ ಬಲೆಗೆ ಸಿಕ್ಕಿಕೊಂಡು ಏರಿಸಿದ ಬಲೆ ಪುನಹ ಜಾರಿಕೊಳ್ಳುವುದು ಎಲ್ಲವೂ ಒಂದು ಅದ್ಭುತ ಅನುಭವ. ಅಂತೂ ಒಬ್ಬ ಸಹಾಯಕನ ಸಹಾಯದೊಂದಿಗೆ ಸುಮಾರು 2 ಗಂಟೆಗಳ ಹೋರಾಟದಲ್ಲಿ ಮರಕ್ಕೆ ಪೂರ್ಣವಲ್ಲದಿದ್ದರೂ, ನಮಗೆ ಧಾರಾಳ ಸಿಗುವಷ್ಟು ಪ್ರಮಾಣದ ಎತ್ತರಕ್ಕಾದರೂ ಬಲೆಯನ್ನು ಹಾಕಲು ಸಫಲನಾದೆ.

 

ಎರಡು ದಿನದ ನಂತರ ಬಲಿತ ಕಾಯಿ ಹಣ್ಣಾಗ ಹತ್ತಿತ್ತು. ಇಂದೀಗ ಸಮೃದ್ಧ ಫಸಲನ್ನು ಕೊಯ್ದು ಮೊಮ್ಮಕ್ಕಳೊಂದಿಗೆ ತಿನ್ನುವಾಗ ಮಾಡಿದ ಶ್ರಮ ಸಾರ್ಥಕ ಅಂತ ಅನಿಸಿತು. ಶ್ರಮವನ್ನು ಹಂಚಿಕೊಂಡರೆ ಸಂತೋಷವನ್ನು ಹಂಚಿಕೊಂಡಂತೆ ಮತ್ತು ಬೇರೆಯವರಿಗೂ ಶ್ರಮಪಡಲು ಪ್ರೋತ್ಸಾಹ ಎಂಬ ಭಾವದಲ್ಲಿ ಬರಹ ರೂಪಕ್ಕಿಳಿಸಿದೆ.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

ಇದನ್ನೂ ಓದಿ

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror