Advertisement
Opinion

ಮನೆಯಲ್ಲೊಂದು ಜಂಬೂ ನೇರಳೆ ಮರ | ಕಷ್ಟಪಟ್ಟರೆ ಫಲ ಉಂಟು

Share

ಸಾಂಪ್ರದಾಯಿಕ ಜಂಬು ನೇರಳೆಗಿಂತ(syzygium fruit) ಹಣ್ಣಾಗುವಾಗ ಕೆಂಪು ಒತ್ತು ಜಾಸ್ತಿ. ಒಳ್ಳೆಯ ಹಣ್ಣಾದರೆ ಹತ್ತಿಯಂತೆ ಮೃದು ಮತ್ತು ಬಹಳ ರುಚಿ. ಆದರೇನು ಮಾಡೋಣ? ಬೆಳೆಯುವುದು, ಹಣ್ಣಾಗುವವರೆಗೂ ಕಾದು ಕಾದು ಹಣ್ಣಾಗುವಾಗ ನಮಗೆ ಉಳಿಯುವುದು ಬಾವಲಿ(Bat) ತಿಂದದ್ದರ ಅರ್ಧ ಪಾಲು ಮಾತ್ರ. ಪ್ರಾಮಾಣಿಕವಾಗಿ ಹೇಳುವೆ ಒಂದಾದರೂ ಇಡಿಯ ಹಣ್ಣನ್ನು ಪೂರ್ಣವಾಗಿ ತಿನ್ನಲು ಸಿಕ್ಕುವುದು ಕಷ್ಟ.

Advertisement
Advertisement

ಈ ವರ್ಷ ಹಣ್ಣಿನ ಬೆಳೆ ಸಮೃದ್ಧ. ಸುಮಾರು 35 ಅಡಿ ಎತ್ತರದ ಮರದ ಗೆಲ್ಲು ಗೆಲ್ಲುಗಳಲ್ಲು ಹೂ ಬಿಟ್ಟಿತ್ತು ಕಾಯಿ ಕಚ್ಚಿತ್ತು. ಮರವನ್ನು ದಿನಕ್ಕೊಮ್ಮೆಯಾದರೂ ನೋಡುವ ಮೊಮ್ಮಕ್ಕಳು ಹಣ್ಣು ತಿನ್ನುವುದು ಯಾವಾಗ ಅಜ್ಜ ಎಂದು ಕೇಳುವಾಗ ಏನಾದರೂ ಉಪಾಯ ಮಾಡಲೇಬೇಕೆಂದು ಮನಸ್ಸು ಹೇಳಿತು. ಮರಕ್ಕೆ ಬಲೆಯನ್ನು ಹಾಕಿದರೆ ಬಾವಲಿ ಮತ್ತು ಪಕ್ಷಿ ಸಂಕುಲಗಳಿಂದ ಕಾಪಾಡಬಹುದು ಎಂಬ ಮಾಹಿತಿಯಂತೆ ಕಾಯಿ ಬೆಳೆಯುತ್ತಾ ಬಂದಂತೆ ಬಲೆಯನ್ನು ಮರಕ್ಕೇರಿಸುವ ಪ್ರಯತ್ನದತ್ತ ಹೊರಟೆ. ದೊಡ್ಡದಾದ ಬಲೆಯನ್ನು ಎತ್ತರಕ್ಕೆ ಏರಿಸುವಾಗಲೇ ಅದರ ಸಮಸ್ಯೆಯ ಪೂರ್ಣ ಅರಿವಾಗುವುದು.

Advertisement

ಬಲೆ ಮುದ್ದೆ ಕಟ್ಟಿಕೊಳ್ಳುವುದು, ಗಿಡದ ಗೆಲ್ಲುಗಳೆ ಬಲೆಯನ್ನು ಕಚ್ಚಿ ಹಿಡಿದುಕೊಳ್ಳುವುದು, ಅಡಿಕೆ ತೋಟದ ಬದಿಯಲ್ಲಿ ಮರ ಇರುವ ಕಾರಣ ಅಡಿಕೆ ಮರದ ಬುಡಕ್ಕೆ ಹಾಕಿದ ಕಸ ಕಡ್ಡಿಗಳೇ ಬಲೆಗೆ ಅಡ್ಡಿಯಾಗುವುದು, ಎತ್ತರಕ್ಕೆ ಕೊಂಡೊಯ್ಯಲು ಉದ್ದದ ಕೊಕ್ಕೆಯ ಸಮಸ್ಯೆ,(ಅದಕ್ಕೆ ನಾನು ಬಳಸಿದ್ದು ಕಾರ್ಬನ್ ಫೈಬರ್ ದೋಟಿ) ದೋಟಿಯ ಕ್ಲ್ಯಾಂಪ್ಗಳೇ ಬಲೆಗೆ ಸಿಕ್ಕಿಕೊಂಡು ಏರಿಸಿದ ಬಲೆ ಪುನಹ ಜಾರಿಕೊಳ್ಳುವುದು ಎಲ್ಲವೂ ಒಂದು ಅದ್ಭುತ ಅನುಭವ. ಅಂತೂ ಒಬ್ಬ ಸಹಾಯಕನ ಸಹಾಯದೊಂದಿಗೆ ಸುಮಾರು 2 ಗಂಟೆಗಳ ಹೋರಾಟದಲ್ಲಿ ಮರಕ್ಕೆ ಪೂರ್ಣವಲ್ಲದಿದ್ದರೂ, ನಮಗೆ ಧಾರಾಳ ಸಿಗುವಷ್ಟು ಪ್ರಮಾಣದ ಎತ್ತರಕ್ಕಾದರೂ ಬಲೆಯನ್ನು ಹಾಕಲು ಸಫಲನಾದೆ.

 

Advertisement

ಎರಡು ದಿನದ ನಂತರ ಬಲಿತ ಕಾಯಿ ಹಣ್ಣಾಗ ಹತ್ತಿತ್ತು. ಇಂದೀಗ ಸಮೃದ್ಧ ಫಸಲನ್ನು ಕೊಯ್ದು ಮೊಮ್ಮಕ್ಕಳೊಂದಿಗೆ ತಿನ್ನುವಾಗ ಮಾಡಿದ ಶ್ರಮ ಸಾರ್ಥಕ ಅಂತ ಅನಿಸಿತು. ಶ್ರಮವನ್ನು ಹಂಚಿಕೊಂಡರೆ ಸಂತೋಷವನ್ನು ಹಂಚಿಕೊಂಡಂತೆ ಮತ್ತು ಬೇರೆಯವರಿಗೂ ಶ್ರಮಪಡಲು ಪ್ರೋತ್ಸಾಹ ಎಂಬ ಭಾವದಲ್ಲಿ ಬರಹ ರೂಪಕ್ಕಿಳಿಸಿದೆ.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

9 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago