Advertisement
Opinion

ಮನೆಯಲ್ಲೊಂದು ಜಂಬೂ ನೇರಳೆ ಮರ | ಕಷ್ಟಪಟ್ಟರೆ ಫಲ ಉಂಟು

Share

ಸಾಂಪ್ರದಾಯಿಕ ಜಂಬು ನೇರಳೆಗಿಂತ(syzygium fruit) ಹಣ್ಣಾಗುವಾಗ ಕೆಂಪು ಒತ್ತು ಜಾಸ್ತಿ. ಒಳ್ಳೆಯ ಹಣ್ಣಾದರೆ ಹತ್ತಿಯಂತೆ ಮೃದು ಮತ್ತು ಬಹಳ ರುಚಿ. ಆದರೇನು ಮಾಡೋಣ? ಬೆಳೆಯುವುದು, ಹಣ್ಣಾಗುವವರೆಗೂ ಕಾದು ಕಾದು ಹಣ್ಣಾಗುವಾಗ ನಮಗೆ ಉಳಿಯುವುದು ಬಾವಲಿ(Bat) ತಿಂದದ್ದರ ಅರ್ಧ ಪಾಲು ಮಾತ್ರ. ಪ್ರಾಮಾಣಿಕವಾಗಿ ಹೇಳುವೆ ಒಂದಾದರೂ ಇಡಿಯ ಹಣ್ಣನ್ನು ಪೂರ್ಣವಾಗಿ ತಿನ್ನಲು ಸಿಕ್ಕುವುದು ಕಷ್ಟ.

ಈ ವರ್ಷ ಹಣ್ಣಿನ ಬೆಳೆ ಸಮೃದ್ಧ. ಸುಮಾರು 35 ಅಡಿ ಎತ್ತರದ ಮರದ ಗೆಲ್ಲು ಗೆಲ್ಲುಗಳಲ್ಲು ಹೂ ಬಿಟ್ಟಿತ್ತು ಕಾಯಿ ಕಚ್ಚಿತ್ತು. ಮರವನ್ನು ದಿನಕ್ಕೊಮ್ಮೆಯಾದರೂ ನೋಡುವ ಮೊಮ್ಮಕ್ಕಳು ಹಣ್ಣು ತಿನ್ನುವುದು ಯಾವಾಗ ಅಜ್ಜ ಎಂದು ಕೇಳುವಾಗ ಏನಾದರೂ ಉಪಾಯ ಮಾಡಲೇಬೇಕೆಂದು ಮನಸ್ಸು ಹೇಳಿತು. ಮರಕ್ಕೆ ಬಲೆಯನ್ನು ಹಾಕಿದರೆ ಬಾವಲಿ ಮತ್ತು ಪಕ್ಷಿ ಸಂಕುಲಗಳಿಂದ ಕಾಪಾಡಬಹುದು ಎಂಬ ಮಾಹಿತಿಯಂತೆ ಕಾಯಿ ಬೆಳೆಯುತ್ತಾ ಬಂದಂತೆ ಬಲೆಯನ್ನು ಮರಕ್ಕೇರಿಸುವ ಪ್ರಯತ್ನದತ್ತ ಹೊರಟೆ. ದೊಡ್ಡದಾದ ಬಲೆಯನ್ನು ಎತ್ತರಕ್ಕೆ ಏರಿಸುವಾಗಲೇ ಅದರ ಸಮಸ್ಯೆಯ ಪೂರ್ಣ ಅರಿವಾಗುವುದು.

ಬಲೆ ಮುದ್ದೆ ಕಟ್ಟಿಕೊಳ್ಳುವುದು, ಗಿಡದ ಗೆಲ್ಲುಗಳೆ ಬಲೆಯನ್ನು ಕಚ್ಚಿ ಹಿಡಿದುಕೊಳ್ಳುವುದು, ಅಡಿಕೆ ತೋಟದ ಬದಿಯಲ್ಲಿ ಮರ ಇರುವ ಕಾರಣ ಅಡಿಕೆ ಮರದ ಬುಡಕ್ಕೆ ಹಾಕಿದ ಕಸ ಕಡ್ಡಿಗಳೇ ಬಲೆಗೆ ಅಡ್ಡಿಯಾಗುವುದು, ಎತ್ತರಕ್ಕೆ ಕೊಂಡೊಯ್ಯಲು ಉದ್ದದ ಕೊಕ್ಕೆಯ ಸಮಸ್ಯೆ,(ಅದಕ್ಕೆ ನಾನು ಬಳಸಿದ್ದು ಕಾರ್ಬನ್ ಫೈಬರ್ ದೋಟಿ) ದೋಟಿಯ ಕ್ಲ್ಯಾಂಪ್ಗಳೇ ಬಲೆಗೆ ಸಿಕ್ಕಿಕೊಂಡು ಏರಿಸಿದ ಬಲೆ ಪುನಹ ಜಾರಿಕೊಳ್ಳುವುದು ಎಲ್ಲವೂ ಒಂದು ಅದ್ಭುತ ಅನುಭವ. ಅಂತೂ ಒಬ್ಬ ಸಹಾಯಕನ ಸಹಾಯದೊಂದಿಗೆ ಸುಮಾರು 2 ಗಂಟೆಗಳ ಹೋರಾಟದಲ್ಲಿ ಮರಕ್ಕೆ ಪೂರ್ಣವಲ್ಲದಿದ್ದರೂ, ನಮಗೆ ಧಾರಾಳ ಸಿಗುವಷ್ಟು ಪ್ರಮಾಣದ ಎತ್ತರಕ್ಕಾದರೂ ಬಲೆಯನ್ನು ಹಾಕಲು ಸಫಲನಾದೆ.

 

ಎರಡು ದಿನದ ನಂತರ ಬಲಿತ ಕಾಯಿ ಹಣ್ಣಾಗ ಹತ್ತಿತ್ತು. ಇಂದೀಗ ಸಮೃದ್ಧ ಫಸಲನ್ನು ಕೊಯ್ದು ಮೊಮ್ಮಕ್ಕಳೊಂದಿಗೆ ತಿನ್ನುವಾಗ ಮಾಡಿದ ಶ್ರಮ ಸಾರ್ಥಕ ಅಂತ ಅನಿಸಿತು. ಶ್ರಮವನ್ನು ಹಂಚಿಕೊಂಡರೆ ಸಂತೋಷವನ್ನು ಹಂಚಿಕೊಂಡಂತೆ ಮತ್ತು ಬೇರೆಯವರಿಗೂ ಶ್ರಮಪಡಲು ಪ್ರೋತ್ಸಾಹ ಎಂಬ ಭಾವದಲ್ಲಿ ಬರಹ ರೂಪಕ್ಕಿಳಿಸಿದೆ.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

17 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

17 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago