Advertisement
ಸುದ್ದಿಗಳು

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

Share

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ ಬಂಡೆಗಳ ಮೇಲೆ ಒಂದೊಂದು ಕಲ್ಲಿನ ಅಂಚಿನಿಂದ ಇನ್ನೊಂದಕ್ಕೆ ಜಿಗಿಯುತ್ತಾ ಸಂಚರಿಸುವ ಪ್ರಾಣಿ ಕಾಶ್ಮೀರ್ ಮಾಕ್ಹೋರ್. ಇದು ವಿಶ್ವದ ಅತಿದೊಡ್ಡ ಕಾಡು ಮೇಕೆಗಳಲ್ಲಿ ಒಂದಾಗಿದ್ದು, ಸುಮಾರು 101 ಕೆಜಿ ತೂಕವಿರುತ್ತದೆ. ಉದ್ದವಾದ, ಸುರುಳಿಯಾಕಾರದ ಕಾರ್ಕ್‌ಸ್ಕ್ರೂ ಕೊಂಬುಗಳು, ಗಲ್ಲ–ಕುತ್ತಿಗೆ–ಭುಜಗಳ ಮೇಲೆ ಹರಡುವ ರಫ್ ಮತ್ತು ಕಂದು ಬಣ್ಣದ ಗಟ್ಟಿಮುಟ್ಟಾದ ಮೈಕಟ್ಟು ಇದಕ್ಕೆ ವಿಶೇಷ ಆಕರ್ಷಣೆ ನೀಡುತ್ತವೆ.

ಅದ್ಭುತ ಚುರುಕುತನ ಹೊಂದಿರುವ ಈ ಪರ್ವತ ಮೇಕೆಗಳು, ಪರಭಕ್ಷಕಗಳಿಂದ ತಪ್ಪಿಸಿಕೊಳ್ಳಲು ಸುಮಾರು 90 ಡಿಗ್ರಿಯಷ್ಟು ಇಳಿಜಾರುಗಳಲ್ಲಿಯೂ ಸುಲಭವಾಗಿ ಸಂಚರಿಸಬಲ್ಲವು. ಇವುಗಳನ್ನು ನೋಡಿದರೆ ಪರ್ವತಗಳೇ ಜೀವಂತ ರೂಪ ಪಡೆದುಕೊಂಡಂತೆಯೇ ಕಾಣುತ್ತದೆ.

ಹಿಂದೂ ಕುಶ್–ಹಿಮಾಲಯನ್ ಪ್ರದೇಶದಲ್ಲಿ ಮಾರ್ಖೋರ್‌ನ ಮೂರು ಉಪಜಾತಿಗಳು ಕಂಡುಬರುತ್ತವೆ. ಪ್ರತಿಯೊಂದು ಉಪಜಾತಿಯನ್ನೂ ಅದರ ಕೊಂಬಿನ ತಿರುಚುವಿಕೆ ಮೂಲಕ ಗುರುತಿಸಲಾಗುತ್ತದೆ. ಕಾಶ್ಮೀರ ಮಾರ್ಖೋರ್ ಭಾರತದಲ್ಲಿ ಬಹುಕಾಲ ಅಳಿದುಹೋಗಿದೆ ಎಂದು ಭಾವಿಸಲಾಗಿತ್ತು. ಆದರೆ 2004ರಲ್ಲಿ ಜಮ್ಮು ಮತ್ತು ಕಾಶ್ಮೀರ ವನ್ಯಜೀವಿ ಸಂರಕ್ಷಣಾ ಇಲಾಖೆ ಹಾಗೂ ಪ್ರಕೃತಿ ಸಂರಕ್ಷಣಾ ಪ್ರತಿಷ್ಠಾನದ ಸಹಯೋಗದಲ್ಲಿ Wildlife Trust of India ನಡೆಸಿದ ರಾಜ್ಯವ್ಯಾಪ್ತಿ ಸಮೀಕ್ಷೆಯಲ್ಲಿ ಈ ಮೇಕೆ ಬೆಳಕಿಗೆ ಬಂದಿದೆ.

ಸಮೀಕ್ಷೆಯ ಪ್ರಕಾರ, ಪೀರ್ ಪಂಜಾಲ್‌ನ ಬನಿಹಾಲ್ ಪಾಸ್‌ನಿಂದ ಝೀಲಂ ನದಿಯ ಉತ್ತರಕ್ಕೆ ಶಂಶಬರಿ ಶ್ರೇಣಿವರೆಗೆ ಅದರ ಐತಿಹಾಸಿಕ ವ್ಯಾಪ್ತಿಯಲ್ಲಿ ಕೇವಲ 300ರಿಂದ 350 ಮಾರ್ಖೋರ್‌ಗಳು ಮಾತ್ರ ಉಳಿದುಕೊಂಡಿವೆ. ಇಂದು ಕಾಜಿನಾಗ್ ಶ್ರೇಣಿಯು ಭಾರತದಲ್ಲಿ ಇದರ ಕೊನೆಯ ಪ್ರಮುಖ ಭದ್ರಕೋಟೆಯಾಗಿ ಉಳಿದಿದೆ. ಇದಲ್ಲದೆ ಶೋಪಿಯಾನ್‌ನ ಹಿರ್ಪೋರಾ ವನ್ಯಜೀವಿ ಅಭಯಾರಣ್ಯ, ಪೂಂಚ್‌ನ ತಟ್ಟಕುಟಿ ವನ್ಯಜೀವಿ ಅಭಯಾರಣ್ಯ ಮತ್ತು ಖಾರಾ ಗಲಿ ಸಂರಕ್ಷಣಾ ಮೀಸಲು ಪ್ರದೇಶಗಳಲ್ಲಿ ಸಣ್ಣ, ವಿಭಜಿತ ಜನಸಂಖ್ಯೆಗಳು ಇನ್ನೂ ಕಂಡುಬರುತ್ತಿವೆ.

ಪರಿಸರದ ದೃಷ್ಟಿಯಿಂದ ಮಾರ್ಖೋರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇವು ಮಿಶ್ರ ಆಹಾರ ಪದ್ಧತಿಯನ್ನು ಹೊಂದಿದ್ದು, ಹುಲ್ಲುಗಳು, ಗಿಡಮೂಲಿಕೆಗಳು, ಪೊದೆಗಳು, ಎಲೆಗಳು ಹಾಗೂ ಕೊಂಬೆಗಳನ್ನು ತಿನ್ನುತ್ತವೆ. ಇದರಿಂದ ಅತಿಯಾದ ಸಸ್ಯ ಬೆಳವಣಿಗೆಯನ್ನು ನಿಯಂತ್ರಿಸಿ, ಮಣ್ಣಿನ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತವೆ. ಮಾರ್ಖೋರ್‌ಗಳ ಆರೋಗ್ಯಕರ ಜನಸಂಖ್ಯೆ ಎಂದರೆ ಆರೋಗ್ಯಕರ ಪರ್ವತ ಪರಿಸರ ವ್ಯವಸ್ಥೆಯ ಸಂಕೇತ. ಜೊತೆಗೆ ಹಿಮ ಚಿರತೆ, ಸಾಮಾನ್ಯ ಚಿರತೆ ಮತ್ತು ತೋಳಗಳಂತಹ ಪರಭಕ್ಷಕಗಳಿಗೆ ಇವು ಪ್ರಮುಖ ಬೇಟೆಯಾಗಿ ಆಹಾರ ಸರಪಳಿಯಲ್ಲಿ ಅವಿಭಾಜ್ಯ ಪಾತ್ರ ವಹಿಸುತ್ತವೆ.

ಆಗಸ್ಟ್ 2025ರಲ್ಲಿ ಜರ್ನಲ್ ಫಾರ್ ನೇಚರ್ ಕನ್ಸರ್ವೇಶನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಮಾಕ್ಹೋರ್ ಒಂದು ಶ್ರೇಣಿ-ನಿರ್ಬಂಧಿತ ಪರ್ವತ ಗೊರಸುಳ್ಳ ಪ್ರಾಣಿ. ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾರ್ಖೋರ್‌ಗಳ ಸಂತಾನೋತ್ಪತ್ತಿ ಅವಧಿ ಆರಂಭವಾಗುತ್ತದೆ. ಮೇ ಮತ್ತು ಸೆಪ್ಟೆಂಬರ್ ನಡುವೆ ಕಾಜಿನಾಗ್ ಪ್ರದೇಶಕ್ಕೆ ಮಾತ್ರವೇ ಸುಮಾರು 15,000 ಕುರಿ ಮತ್ತು ಮೇಕೆಗಳು ಪ್ರವೇಶಿಸುತ್ತವೆ. ಪರಿಸರ ಸಮತೋಲನ ಮತ್ತು ಅಪರೂಪದ ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ, ಕಾಶ್ಮೀರ ಮಾರ್ಖೋರ್ ಉಳಿವಿಗೆ ತಕ್ಷಣದ ಹಾಗೂ ಪರಿಣಾಮಕಾರಿ ಸಂರಕ್ಷಣಾ ಕ್ರಮಗಳು ಅತ್ಯಾವಶ್ಯಕವೆಂದು ತಜ್ಞರು ಎಚ್ಚರಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

4 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

22 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago