Advertisement
ಸುದ್ದಿಗಳು

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

Share

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ ಬಂಡೆಗಳ ಮೇಲೆ ಒಂದೊಂದು ಕಲ್ಲಿನ ಅಂಚಿನಿಂದ ಇನ್ನೊಂದಕ್ಕೆ ಜಿಗಿಯುತ್ತಾ ಸಂಚರಿಸುವ ಪ್ರಾಣಿ ಕಾಶ್ಮೀರ್ ಮಾಕ್ಹೋರ್. ಇದು ವಿಶ್ವದ ಅತಿದೊಡ್ಡ ಕಾಡು ಮೇಕೆಗಳಲ್ಲಿ ಒಂದಾಗಿದ್ದು, ಸುಮಾರು 101 ಕೆಜಿ ತೂಕವಿರುತ್ತದೆ. ಉದ್ದವಾದ, ಸುರುಳಿಯಾಕಾರದ ಕಾರ್ಕ್‌ಸ್ಕ್ರೂ ಕೊಂಬುಗಳು, ಗಲ್ಲ–ಕುತ್ತಿಗೆ–ಭುಜಗಳ ಮೇಲೆ ಹರಡುವ ರಫ್ ಮತ್ತು ಕಂದು ಬಣ್ಣದ ಗಟ್ಟಿಮುಟ್ಟಾದ ಮೈಕಟ್ಟು ಇದಕ್ಕೆ ವಿಶೇಷ ಆಕರ್ಷಣೆ ನೀಡುತ್ತವೆ.

ಅದ್ಭುತ ಚುರುಕುತನ ಹೊಂದಿರುವ ಈ ಪರ್ವತ ಮೇಕೆಗಳು, ಪರಭಕ್ಷಕಗಳಿಂದ ತಪ್ಪಿಸಿಕೊಳ್ಳಲು ಸುಮಾರು 90 ಡಿಗ್ರಿಯಷ್ಟು ಇಳಿಜಾರುಗಳಲ್ಲಿಯೂ ಸುಲಭವಾಗಿ ಸಂಚರಿಸಬಲ್ಲವು. ಇವುಗಳನ್ನು ನೋಡಿದರೆ ಪರ್ವತಗಳೇ ಜೀವಂತ ರೂಪ ಪಡೆದುಕೊಂಡಂತೆಯೇ ಕಾಣುತ್ತದೆ.

ಹಿಂದೂ ಕುಶ್–ಹಿಮಾಲಯನ್ ಪ್ರದೇಶದಲ್ಲಿ ಮಾರ್ಖೋರ್‌ನ ಮೂರು ಉಪಜಾತಿಗಳು ಕಂಡುಬರುತ್ತವೆ. ಪ್ರತಿಯೊಂದು ಉಪಜಾತಿಯನ್ನೂ ಅದರ ಕೊಂಬಿನ ತಿರುಚುವಿಕೆ ಮೂಲಕ ಗುರುತಿಸಲಾಗುತ್ತದೆ. ಕಾಶ್ಮೀರ ಮಾರ್ಖೋರ್ ಭಾರತದಲ್ಲಿ ಬಹುಕಾಲ ಅಳಿದುಹೋಗಿದೆ ಎಂದು ಭಾವಿಸಲಾಗಿತ್ತು. ಆದರೆ 2004ರಲ್ಲಿ ಜಮ್ಮು ಮತ್ತು ಕಾಶ್ಮೀರ ವನ್ಯಜೀವಿ ಸಂರಕ್ಷಣಾ ಇಲಾಖೆ ಹಾಗೂ ಪ್ರಕೃತಿ ಸಂರಕ್ಷಣಾ ಪ್ರತಿಷ್ಠಾನದ ಸಹಯೋಗದಲ್ಲಿ Wildlife Trust of India ನಡೆಸಿದ ರಾಜ್ಯವ್ಯಾಪ್ತಿ ಸಮೀಕ್ಷೆಯಲ್ಲಿ ಈ ಮೇಕೆ ಬೆಳಕಿಗೆ ಬಂದಿದೆ.

ಸಮೀಕ್ಷೆಯ ಪ್ರಕಾರ, ಪೀರ್ ಪಂಜಾಲ್‌ನ ಬನಿಹಾಲ್ ಪಾಸ್‌ನಿಂದ ಝೀಲಂ ನದಿಯ ಉತ್ತರಕ್ಕೆ ಶಂಶಬರಿ ಶ್ರೇಣಿವರೆಗೆ ಅದರ ಐತಿಹಾಸಿಕ ವ್ಯಾಪ್ತಿಯಲ್ಲಿ ಕೇವಲ 300ರಿಂದ 350 ಮಾರ್ಖೋರ್‌ಗಳು ಮಾತ್ರ ಉಳಿದುಕೊಂಡಿವೆ. ಇಂದು ಕಾಜಿನಾಗ್ ಶ್ರೇಣಿಯು ಭಾರತದಲ್ಲಿ ಇದರ ಕೊನೆಯ ಪ್ರಮುಖ ಭದ್ರಕೋಟೆಯಾಗಿ ಉಳಿದಿದೆ. ಇದಲ್ಲದೆ ಶೋಪಿಯಾನ್‌ನ ಹಿರ್ಪೋರಾ ವನ್ಯಜೀವಿ ಅಭಯಾರಣ್ಯ, ಪೂಂಚ್‌ನ ತಟ್ಟಕುಟಿ ವನ್ಯಜೀವಿ ಅಭಯಾರಣ್ಯ ಮತ್ತು ಖಾರಾ ಗಲಿ ಸಂರಕ್ಷಣಾ ಮೀಸಲು ಪ್ರದೇಶಗಳಲ್ಲಿ ಸಣ್ಣ, ವಿಭಜಿತ ಜನಸಂಖ್ಯೆಗಳು ಇನ್ನೂ ಕಂಡುಬರುತ್ತಿವೆ.

ಪರಿಸರದ ದೃಷ್ಟಿಯಿಂದ ಮಾರ್ಖೋರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇವು ಮಿಶ್ರ ಆಹಾರ ಪದ್ಧತಿಯನ್ನು ಹೊಂದಿದ್ದು, ಹುಲ್ಲುಗಳು, ಗಿಡಮೂಲಿಕೆಗಳು, ಪೊದೆಗಳು, ಎಲೆಗಳು ಹಾಗೂ ಕೊಂಬೆಗಳನ್ನು ತಿನ್ನುತ್ತವೆ. ಇದರಿಂದ ಅತಿಯಾದ ಸಸ್ಯ ಬೆಳವಣಿಗೆಯನ್ನು ನಿಯಂತ್ರಿಸಿ, ಮಣ್ಣಿನ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತವೆ. ಮಾರ್ಖೋರ್‌ಗಳ ಆರೋಗ್ಯಕರ ಜನಸಂಖ್ಯೆ ಎಂದರೆ ಆರೋಗ್ಯಕರ ಪರ್ವತ ಪರಿಸರ ವ್ಯವಸ್ಥೆಯ ಸಂಕೇತ. ಜೊತೆಗೆ ಹಿಮ ಚಿರತೆ, ಸಾಮಾನ್ಯ ಚಿರತೆ ಮತ್ತು ತೋಳಗಳಂತಹ ಪರಭಕ್ಷಕಗಳಿಗೆ ಇವು ಪ್ರಮುಖ ಬೇಟೆಯಾಗಿ ಆಹಾರ ಸರಪಳಿಯಲ್ಲಿ ಅವಿಭಾಜ್ಯ ಪಾತ್ರ ವಹಿಸುತ್ತವೆ.

ಆಗಸ್ಟ್ 2025ರಲ್ಲಿ ಜರ್ನಲ್ ಫಾರ್ ನೇಚರ್ ಕನ್ಸರ್ವೇಶನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಮಾಕ್ಹೋರ್ ಒಂದು ಶ್ರೇಣಿ-ನಿರ್ಬಂಧಿತ ಪರ್ವತ ಗೊರಸುಳ್ಳ ಪ್ರಾಣಿ. ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾರ್ಖೋರ್‌ಗಳ ಸಂತಾನೋತ್ಪತ್ತಿ ಅವಧಿ ಆರಂಭವಾಗುತ್ತದೆ. ಮೇ ಮತ್ತು ಸೆಪ್ಟೆಂಬರ್ ನಡುವೆ ಕಾಜಿನಾಗ್ ಪ್ರದೇಶಕ್ಕೆ ಮಾತ್ರವೇ ಸುಮಾರು 15,000 ಕುರಿ ಮತ್ತು ಮೇಕೆಗಳು ಪ್ರವೇಶಿಸುತ್ತವೆ. ಪರಿಸರ ಸಮತೋಲನ ಮತ್ತು ಅಪರೂಪದ ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ, ಕಾಶ್ಮೀರ ಮಾರ್ಖೋರ್ ಉಳಿವಿಗೆ ತಕ್ಷಣದ ಹಾಗೂ ಪರಿಣಾಮಕಾರಿ ಸಂರಕ್ಷಣಾ ಕ್ರಮಗಳು ಅತ್ಯಾವಶ್ಯಕವೆಂದು ತಜ್ಞರು ಎಚ್ಚರಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

6 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

6 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

8 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

8 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

20 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago