ಒಂದೇ ದಿನದ ತ್ಯಾಜ್ಯ 2 ಟನ್…!‌ | ನಮಗೆ ಕಸದ ಬಗ್ಗೆ ಅರಿವು ಆಗುವುದು ಯಾವಾಗ…?

November 3, 2023
12:24 PM

ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್‌ ಗೂ ಹೆಚ್ಚು..!.  ಇದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಎಸೆದ ಕಸ..!.

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ  ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಹೀಗೇ ಬಂದವರು ಎಸೆದ ತ್ಯಾಜ್ಯ ಎರಡು ಟನ್‌ ಗೂ ಹೆಚ್ಚು.  ಬೆಳಗಾವಿ ಮಹಾನಗರ ಪಾಲಿಕೆಯ ಶುಚಿತ್ವದ ಕಾರ್ಮಿಕರು ಬೆಳಗಿನಿಂದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರು. 10 ಜನರು 5 ಗಂಟೆಯಲ್ಲಿ ಸಂಗ್ರಹಿಸಿದ ತ್ಯಾಜ್ಯ ಇದು. ಕೇವಲ ಈ ತ್ಯಾಜ್ಯದಿಂದ 20 ಸಾವಿರ ರೂಪಾಯಿಯನ್ನು ಈ ಕಾರ್ಮಿಕರು ಪಡೆದರು. ಅಚ್ಚರಿ ಎಂದರೆ ಇಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ಕಸಗಳಿಗೆ ಹಣ ನೀಡುತ್ತದೆ. ಇಲ್ಲಿ ಒಟ್ಟು 470 ಕ್ಕೂ ಅಧಿಕ ಜನರು ಕಸ ಹೆಕ್ಕುವ ಸಿಬಂದಿಗಳು ಇದ್ದಾರೆ. ಇವರೆಲ್ಲರೂ ಪ್ರತೀ ದಿನ 200 ರೂಪಾಯಿ ಗಳಿಸುತ್ತಾರೆ. ರಾಜ್ಯೋತ್ಸವದ ದಿನದಂದು 10 ಮಂದಿ 2000 ಸಾವಿರಂತೆ ಗಳಿಸಿದ್ದಾರೆ…!.

ಇಲಾಖೆಗಳು, ಆಡಳಿತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲಾ ಕಡೆಯೂ ತೊಟ್ಟಿಗಳನ್ನು ಇರಿಸಿತ್ತು. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತೀ ಗ್ರಾಮದಿಂದ ತೊಡಗಿ ನಗರದವರೆಗೆ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಬೇಕು. ಸ್ವಚ್ಛ ಪರಿಸರ ಹಾಗೂ ಸುಂದರ ಪರಿಸರದ ಕಾಳಜಿ ಇನ್ನಷ್ಟು ಜನರಲ್ಲೇ ಜಾಗೃತಿಯಾಗಬೇಕಿದೆ.

Awareness should be created among people about less use of plastic. You have to get involved in the work of saving the environment.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror