ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್ ಗೂ ಹೆಚ್ಚು..!. ಇದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಎಸೆದ ಕಸ..!.
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಹೀಗೇ ಬಂದವರು ಎಸೆದ ತ್ಯಾಜ್ಯ ಎರಡು ಟನ್ ಗೂ ಹೆಚ್ಚು. ಬೆಳಗಾವಿ ಮಹಾನಗರ ಪಾಲಿಕೆಯ ಶುಚಿತ್ವದ ಕಾರ್ಮಿಕರು ಬೆಳಗಿನಿಂದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರು. 10 ಜನರು 5 ಗಂಟೆಯಲ್ಲಿ ಸಂಗ್ರಹಿಸಿದ ತ್ಯಾಜ್ಯ ಇದು. ಕೇವಲ ಈ ತ್ಯಾಜ್ಯದಿಂದ 20 ಸಾವಿರ ರೂಪಾಯಿಯನ್ನು ಈ ಕಾರ್ಮಿಕರು ಪಡೆದರು. ಅಚ್ಚರಿ ಎಂದರೆ ಇಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್ ಕಸಗಳಿಗೆ ಹಣ ನೀಡುತ್ತದೆ. ಇಲ್ಲಿ ಒಟ್ಟು 470 ಕ್ಕೂ ಅಧಿಕ ಜನರು ಕಸ ಹೆಕ್ಕುವ ಸಿಬಂದಿಗಳು ಇದ್ದಾರೆ. ಇವರೆಲ್ಲರೂ ಪ್ರತೀ ದಿನ 200 ರೂಪಾಯಿ ಗಳಿಸುತ್ತಾರೆ. ರಾಜ್ಯೋತ್ಸವದ ದಿನದಂದು 10 ಮಂದಿ 2000 ಸಾವಿರಂತೆ ಗಳಿಸಿದ್ದಾರೆ…!.
ಇಲಾಖೆಗಳು, ಆಡಳಿತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲಾ ಕಡೆಯೂ ತೊಟ್ಟಿಗಳನ್ನು ಇರಿಸಿತ್ತು. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತೀ ಗ್ರಾಮದಿಂದ ತೊಡಗಿ ನಗರದವರೆಗೆ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಬೇಕು. ಸ್ವಚ್ಛ ಪರಿಸರ ಹಾಗೂ ಸುಂದರ ಪರಿಸರದ ಕಾಳಜಿ ಇನ್ನಷ್ಟು ಜನರಲ್ಲೇ ಜಾಗೃತಿಯಾಗಬೇಕಿದೆ.
Awareness should be created among people about less use of plastic. You have to get involved in the work of saving the environment.
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…