MIRROR FOCUS

ಒಂದೇ ದಿನದ ತ್ಯಾಜ್ಯ 2 ಟನ್…!‌ | ನಮಗೆ ಕಸದ ಬಗ್ಗೆ ಅರಿವು ಆಗುವುದು ಯಾವಾಗ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್‌ ಗೂ ಹೆಚ್ಚು..!.  ಇದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಎಸೆದ ಕಸ..!.

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ  ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಹೀಗೇ ಬಂದವರು ಎಸೆದ ತ್ಯಾಜ್ಯ ಎರಡು ಟನ್‌ ಗೂ ಹೆಚ್ಚು.  ಬೆಳಗಾವಿ ಮಹಾನಗರ ಪಾಲಿಕೆಯ ಶುಚಿತ್ವದ ಕಾರ್ಮಿಕರು ಬೆಳಗಿನಿಂದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರು. 10 ಜನರು 5 ಗಂಟೆಯಲ್ಲಿ ಸಂಗ್ರಹಿಸಿದ ತ್ಯಾಜ್ಯ ಇದು. ಕೇವಲ ಈ ತ್ಯಾಜ್ಯದಿಂದ 20 ಸಾವಿರ ರೂಪಾಯಿಯನ್ನು ಈ ಕಾರ್ಮಿಕರು ಪಡೆದರು. ಅಚ್ಚರಿ ಎಂದರೆ ಇಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ಕಸಗಳಿಗೆ ಹಣ ನೀಡುತ್ತದೆ. ಇಲ್ಲಿ ಒಟ್ಟು 470 ಕ್ಕೂ ಅಧಿಕ ಜನರು ಕಸ ಹೆಕ್ಕುವ ಸಿಬಂದಿಗಳು ಇದ್ದಾರೆ. ಇವರೆಲ್ಲರೂ ಪ್ರತೀ ದಿನ 200 ರೂಪಾಯಿ ಗಳಿಸುತ್ತಾರೆ. ರಾಜ್ಯೋತ್ಸವದ ದಿನದಂದು 10 ಮಂದಿ 2000 ಸಾವಿರಂತೆ ಗಳಿಸಿದ್ದಾರೆ…!.

ಇಲಾಖೆಗಳು, ಆಡಳಿತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲಾ ಕಡೆಯೂ ತೊಟ್ಟಿಗಳನ್ನು ಇರಿಸಿತ್ತು. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತೀ ಗ್ರಾಮದಿಂದ ತೊಡಗಿ ನಗರದವರೆಗೆ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಬೇಕು. ಸ್ವಚ್ಛ ಪರಿಸರ ಹಾಗೂ ಸುಂದರ ಪರಿಸರದ ಕಾಳಜಿ ಇನ್ನಷ್ಟು ಜನರಲ್ಲೇ ಜಾಗೃತಿಯಾಗಬೇಕಿದೆ.

Awareness should be created among people about less use of plastic. You have to get involved in the work of saving the environment.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…

16 hours ago

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ

ಗ್ರೇಟರ್ ಬೆಂಗಳೂರು  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…

16 hours ago

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…

16 hours ago

ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…

23 hours ago

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ…

1 day ago

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ

ಬಾಂಗ್ಲಾದೇಶದಲ್ಲಿ  ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ  ರೋಗಿಗಳ…

1 day ago