Advertisement
MIRROR FOCUS

ಒಂದೇ ದಿನದ ತ್ಯಾಜ್ಯ 2 ಟನ್…!‌ | ನಮಗೆ ಕಸದ ಬಗ್ಗೆ ಅರಿವು ಆಗುವುದು ಯಾವಾಗ…?

Share

ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್‌ ಗೂ ಹೆಚ್ಚು..!.  ಇದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಎಸೆದ ಕಸ..!.

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ  ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಹೀಗೇ ಬಂದವರು ಎಸೆದ ತ್ಯಾಜ್ಯ ಎರಡು ಟನ್‌ ಗೂ ಹೆಚ್ಚು.  ಬೆಳಗಾವಿ ಮಹಾನಗರ ಪಾಲಿಕೆಯ ಶುಚಿತ್ವದ ಕಾರ್ಮಿಕರು ಬೆಳಗಿನಿಂದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರು. 10 ಜನರು 5 ಗಂಟೆಯಲ್ಲಿ ಸಂಗ್ರಹಿಸಿದ ತ್ಯಾಜ್ಯ ಇದು. ಕೇವಲ ಈ ತ್ಯಾಜ್ಯದಿಂದ 20 ಸಾವಿರ ರೂಪಾಯಿಯನ್ನು ಈ ಕಾರ್ಮಿಕರು ಪಡೆದರು. ಅಚ್ಚರಿ ಎಂದರೆ ಇಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ಕಸಗಳಿಗೆ ಹಣ ನೀಡುತ್ತದೆ. ಇಲ್ಲಿ ಒಟ್ಟು 470 ಕ್ಕೂ ಅಧಿಕ ಜನರು ಕಸ ಹೆಕ್ಕುವ ಸಿಬಂದಿಗಳು ಇದ್ದಾರೆ. ಇವರೆಲ್ಲರೂ ಪ್ರತೀ ದಿನ 200 ರೂಪಾಯಿ ಗಳಿಸುತ್ತಾರೆ. ರಾಜ್ಯೋತ್ಸವದ ದಿನದಂದು 10 ಮಂದಿ 2000 ಸಾವಿರಂತೆ ಗಳಿಸಿದ್ದಾರೆ…!.

ಇಲಾಖೆಗಳು, ಆಡಳಿತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲಾ ಕಡೆಯೂ ತೊಟ್ಟಿಗಳನ್ನು ಇರಿಸಿತ್ತು. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತೀ ಗ್ರಾಮದಿಂದ ತೊಡಗಿ ನಗರದವರೆಗೆ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಬೇಕು. ಸ್ವಚ್ಛ ಪರಿಸರ ಹಾಗೂ ಸುಂದರ ಪರಿಸರದ ಕಾಳಜಿ ಇನ್ನಷ್ಟು ಜನರಲ್ಲೇ ಜಾಗೃತಿಯಾಗಬೇಕಿದೆ.

Awareness should be created among people about less use of plastic. You have to get involved in the work of saving the environment.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

6 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

6 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

9 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

19 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

24 hours ago