ಸುದ್ದಿಗಳು

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

Advertisement
Advertisement

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

2 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

22 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

23 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

1 day ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago