ಸುದ್ದಿಗಳು

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

Advertisement
Advertisement

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

2 days ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

2 days ago