Advertisement
ಸುದ್ದಿಗಳು

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

Share

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

Advertisement
Advertisement

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

5 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

6 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

6 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

6 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

6 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

6 hours ago