Advertisement
ಸುದ್ದಿಗಳು

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

Share

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

4 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

8 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

17 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

17 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago