Advertisement
ಸುದ್ದಿಗಳು

G7 ಶೃಂಗಸಭೆಯಲ್ಲಿ ಭಾರತಕ್ಕೆ ವಿಶೇಷ ಸ್ಥಾನ | ವಿಶ್ವವನ್ನು ಉದ್ದೇಶಿಸಿ ಸಭೆಯಲ್ಲಿ ಮೋದಿ ಹೇಳಿದ್ದೇನು? |

Share

G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಟಲಿಗೆ ತಲುಪಿದ್ದಾರೆ. ಇಟಲಿಯ ಬರಿ (Bari) ನಗರದಲ್ಲಿ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿ ತಂತ್ರಜ್ಞಾನವು(Technology) ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು  ಕರೆ ನೀಡಿದ್ದಾರೆ. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ(Moon) ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ(Cyber Safety) ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು.

ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು. ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು. ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

4 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

13 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

19 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

19 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

19 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

19 hours ago