Advertisement
MIRROR FOCUS

ಹೊಸ ಸಂಸತ್ ಭವನದಲ್ಲಿ ನಡೆಯಲಿದೆ ವಿಶೇಷ ಅಧಿವೇಶನ | ಗಣೇಶ ಚತುರ್ಥಿಯಂದು ನೂತನ ಕಟ್ಟಡ ಪ್ರವೇಶದ ಮುಹೂರ್ತ |

Share

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದರೂ ಅದೆಷ್ಟೋ ಸರ್ಕಾರಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿತ್ತು. ಈ ವರ್ಷದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆಗೊಳಿಸಿದ್ದರು. ಸಂಸತ್ತಿನ ವಿಶೇಷ ಅಧಿವೇಶನವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಂಸತ್ತಿನ ಕಾರ್ಯಚಟುವಟಿಕೆಗಳು ಹೊಸ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

ಸೆಪ್ಟೆಂಬರ್ 18ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19ರಂದು ಎರಡನೇ ದಿನದ ಅಧಿವೇಶವನ್ನು 2023 ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಈ ಬಗ್ಗೆ ಕೇಂದ್ರದ ಮೂಲಗಳು ತಿಳಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಸಂಸತ್ತಿನ ಎಲ್ಲ ಕಾರ್ಯಚಟುವಟಿಕೆಗಳು ಸೆಪ್ಟೆಂಬರ್ 19ರಂದು, ಹೊಸದಾಗಿ ಉದ್ಘಾಟನೆಗೊಂಡಿರುವ ಸಂಸತ್ತಿನ ಕಟ್ಟಡಕ್ಕೆ ಬದಲಾಗಲಿವೆ ಎಂದು ವರದಿ ಹೇಳಿದೆ. ಸಂಸತ್ತಿನ ಉಭಯ ಸದನಗಳ ಅಧಿವೇಶನವು ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಸದಸ್ಯರ ವ್ಯವಹಾರವಿಲ್ಲದೆ ನಡೆಯಲಿದೆ ಎಂದು ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿ ಶನಿವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಧಿವೇಶನವು ಐದು ದಿನಗಳ ಕಾಲ ನಡೆಯಲಿದ್ದು, ಅಧಿವೇಶದ ಕಾರ್ಯಚಟುವಿಟಕೆಗಳ ಬಗ್ಗೆ ಸದಸ್ಯರಿಗೆ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಲೋಕಸಭೆ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ “ವಿಶೇಷ ಅಧಿವೇಶನ” ವನ್ನು ನಡೆಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದರು. ಇನ್ನು ಸಂಸತ್ತಿನ ಯಾವೆಲ್ಲ ವಿಚಾರಗಳು ಚರ್ಚೆಯಾಗಲಿದೆ. ಜತೆಗೆ ಸದನದ ಕಾರ್ಯಸೂಚಿಯ ಬಗ್ಗೆ ತಿಳಿಸಿಲ್ಲ ಎಂಬ ಮಾತುಗಳು ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ.

ಸರ್ಕಾರ ಒಂದು ವರ್ಷದಲ್ಲಿ ಮೂರು ಅಧಿವೇಶಗಳನ್ನು (ಬಜೆಟ್, ಮಾನ್ಸೂನ್ ಮತ್ತು ಚಳಿಗಾಲ ಅಧಿವೇಶ) ನಡೆಸುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಆದರೆ ಈ ವಿಶೇಷ ಅಧಿವೇಶನದ ಕಾರ್ಯಸೂಚಿ ಅಥವಾ ಅಧಿವೇಶದ ಬಗ್ಗೆ ಪ್ರಲ್ಹಾದ್ ಜೋಶಿ ಅವರು ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಅಧಿವೇಶವನ್ನು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜತೆಗೆ ಈಗಾಗಲೇ ಒಂದು ದೇಶ, ಒಂದು ಚುನಾವಣೆ ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.

Source : News Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago