Advertisement
Opinion

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

Share

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) ‘ಒನಕೆ ಓಬವ್ವ”(Onake Obavva). ಉಕ್ಕಿನ ಕೋಟೆಗೆ ಕನ್ನ ಹಾಕಲು ಪ್ರಯತ್ನಿಸಿದ ಶತೃ ಸೈನಿಕರನ್ನು(Solider) ಬಲಿ ಹಾಕಲು ಓಬ್ಬವ್ವ ಬಳಸಿದ್ದು ಇದೇ ಒನಕೆ ಎಂಬ ಉಕ್ಕಿನ ಆಯುಧವನ್ನು. ಆಧುನಿಕ ಗಿರಣಿಗಳಿಗೂ ಮುನ್ನ‌ ಭತ್ತ(Paddy) ಸೇರಿ ವಿವಿಧ ಧಾನ್ಯಗಳನ್ನು ಕುಟ್ಟಿ ಪುಡಿಗಟ್ಟಲು ಬಳಸುತ್ತಿದ್ದದ್ದು ಇದೇ ಒನಕೆಗಳನ್ನು.

ನಾನು ಕೇಳಿದಂತೆ ನಮ್ಮ ಮೈಸೂರು ಕಡೆ ಒನಕೆಗಳನ್ನು ತಯಾರಿಸಲು ಕಗ್ಗಲಿ (Senegalia catechu) ಮರವನ್ನು ಬಳಸುತ್ತಾರೆ. ಈ ಕಗ್ಗಲಿ ಮರವನ್ನು ಬಹಳಷ್ಟು ಜನ ದೈವಿಕ ಭಾವನೆಯಿಂದ ನೋಡುತ್ತಾರೆ. ಬಂಡೀಪುರ ಅರಣ್ಯದ ಕಾಡಂಚಿನ ಗ್ರಾಮಗಳಲ್ಲಿನ ಊರ ದೇವತೆಗಳ ವಾರ್ಷಿಕ ಜಾತ್ರೆಯಲ್ಲಿ ‘ಕೊಂಡ’ಕ್ಕಾಗಿ ಇದೇ ಕಗ್ಗಲಿ ಮರಗಳನ್ನು ಹೆಚ್ಚಾಗಿ ಬಳಸುತ್ತಾರೆ. ಆದರೆ ಕಗ್ಗಲಿ ಮರಗಳು ಎಲ್ಲಾ ಕಡೆಗಳಲ್ಲಿ ಕಂಡು ಬರುವುದಿಲ್ಲ. ಕೆಲವೊಂದು ನಿರ್ದಿಷ್ಟ ಸ್ಥಳಗಳಲ್ಲಿ ಇವು ಬೆಳೆಯುತ್ತವೆ. ಹೆಚ್ಚಾಗಿ ಕಲ್ಲುಗಳಿಂದ ಕೂಡಿದ ಪ್ರದೇಶಗಳು, ಬೆಟ್ಟ- ಗುಡ್ಡದ ಪ್ರದೇಶಗಳಲ್ಲಿ ಇವು ಹೆಚ್ಚಾಗಿ ಕಂಡುಬರುತ್ತವೆ.

Advertisement
Advertisement

ಇನ್ನು ಚಿತ್ರದುರ್ಗ ಸೇರಿ ಬಯಲು ಸೀಮೆಯ ಒಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬೆಳೆಯುವ ಕಮರ (Hardwickia binata) ಮರವನ್ನೂ ಕೂಡ ಆ ಭಾಗಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದರು. ಇವೆರಡು‌ ಮರಗಳು ಉಕ್ಕಿನಂತೆ ಗಟ್ಟಿ ಮುಟ್ಟಾದವು‌. ಕರ್ನಾಟಕದ ಬೆಟ್ಟಗುಡ್ಡಗಳಿಂದ ಕೂಡಿದ ಒಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬೆಳೆಯುವ ಸ್ಥಳೀಯ ಮರಗಳು.

ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ಬಾಂಡ್ರಾವಿ ಮೀಸಲು ಅರಣ್ಯದಲ್ಲಿ 1970 ರಿಂದ 2000 ನೇ ಇಸವಿವರೆಗೆ ಅರಣ್ಯ ರಕ್ಷಕರಾಗಿ, ವನಪಾಲಕರಾಗಿ ಹಗಲು ರಾತ್ರಿ ಕರಲಸ ಮಾಡಿ, ಕಮರ ಮರಗಳು ಸ್ವಾಭಾವಿಕವಾಗಿ ಬೆಳೆಯುತ್ತಿದ್ದ, ಬೆಳೆದಷ್ಟೆ ವೇಗವಾಗಿ ಕಡಿತಲೆಗೆ ಗುರಿಯಾಗಿದ್ದ ಅರಣ್ಯ ಪ್ರದೇಶಕ್ಕೆ ರಕ್ಷಣೆ ನೀಡಿ ಅತ್ಯುತ್ತಮ ಸ್ವಾಭಾವಿಕ ಅರಣ್ಯ ನಿರ್ಮಾಣಕ್ಕೆ ಕಾರಣವಾಗಿದ್ದ ನಾಗಪ್ಪ ಮೇಟಿಯವರ ಸ್ಮರಣಾರ್ಥವಾಗಿ ಆ ಅರಣ್ಯ ಪ್ರದೇಶಕ್ಕೆ “ವನಪಾಲಕ ನಾಗಪ್ಪ ಮೇಟಿ ಬಾಂಡ್ರಾವಿ ಅರಣ್ಯ ಪ್ರದೇಶ” ಎಂದು ನಾಮಕರಣ ಮಾಡಿರುವುದು ಕಮರ ಮರಗಳ ಹಿನ್ನಲೆಯಲ್ಲಿ ಅತ್ಯಂತ ಸ್ಮರಣಾರ್ಹ!

ಒನಕೆಗಳ ನಿರ್ಮಾಣಕ್ಕೆ ಸ್ಥಳೀಯವಾಗಿ ಬೇರೆ ಮರಗಳ‌ ಬಳಕೆಯೂ ಇರಬಹುದು. ದಕ್ಷಿಣ ಕನ್ನಡದ ಕಡೆ ತಾಳೆ ಮತ್ತು ತೆಂಗಿನ ಮರದಿಂದ ಒನಕೆಗಳನ್ನು ತಯಾರಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅದರ ಬಳಕೆ ಇಲ್ಲ. ಹಾಗಾಗಿ ಯಾರ ಮನೆಯಲ್ಲೂ ಇದು ಕಾಣಲು ಸಿಗುವುದಿಲ್ಲ. ಪುಡಿ ಮಾಡಲು ವಿವಿಧ ರೀತಿಯ ಮಿಷನ್‌ಗಳು ಬಂದ ಮೇಲೆ ಇದರ ಬಳಕೆ ಕಡಿಮೆ ಆಯ್ತು. ಇನ್ನು ಕೆಲವರ ಮನೆಯ ಅಟ್ಟ ಸೇರಿದೆ.

✍️ ಸಂಜಯ್‌ ಹೊಯ್ಸಳ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

12 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

13 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

13 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

13 hours ago