ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

January 25, 2024
12:15 PM

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ  ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.

ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್‍ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.

ಮಾರ್ಚ್‍ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್‍ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್‍ನ್ಯೂಸ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror