ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.
ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.
ಮಾರ್ಚ್ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್ನ್ಯೂಸ್ ಆಗಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…