ಸುದ್ದಿಗಳು

#RuralProblem | ವಾಹನ ಸಾಗಲು ರಸ್ತೆಯೇ ಇಲ್ಲದ ಊರು…! | ರೋಗಿಗಳಿಗೆ ಕಂಬಳಿಯೇ ಅ್ಯಂಬುಲೆನ್ಸ್ | ಗ್ರಾಮಸ್ಥರೇ ಆಸರೆ… |

Share

ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್​ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.

ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.

(ಕೃಪೆ: ಅಂತರ್ಜಾಲ )
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

1 hour ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

1 hour ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

2 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

2 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

2 hours ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

2 hours ago