ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.
ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490