Advertisement
ಸುದ್ದಿಗಳು

#RuralProblem | ವಾಹನ ಸಾಗಲು ರಸ್ತೆಯೇ ಇಲ್ಲದ ಊರು…! | ರೋಗಿಗಳಿಗೆ ಕಂಬಳಿಯೇ ಅ್ಯಂಬುಲೆನ್ಸ್ | ಗ್ರಾಮಸ್ಥರೇ ಆಸರೆ… |

Share

ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್​ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.

ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.

(ಕೃಪೆ: ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

23 minutes ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

45 minutes ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

57 minutes ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

1 hour ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

10 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

10 hours ago