ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.
ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…