ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.
ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…