Advertisement
ಸುದ್ದಿಗಳು

#RuralProblem | ವಾಹನ ಸಾಗಲು ರಸ್ತೆಯೇ ಇಲ್ಲದ ಊರು…! | ರೋಗಿಗಳಿಗೆ ಕಂಬಳಿಯೇ ಅ್ಯಂಬುಲೆನ್ಸ್ | ಗ್ರಾಮಸ್ಥರೇ ಆಸರೆ… |

Share

ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್​ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.

Advertisement
Advertisement

ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.

Advertisement
(ಕೃಪೆ: ಅಂತರ್ಜಾಲ )
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ : ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

1 hour ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

2 hours ago

ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ

ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…

2 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

2 hours ago

ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…

3 hours ago